AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಲಗೇಜ್​ ಖಾಲಿ ಮಾಡದೆ ಸಿಂಗಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಪ್ಲೇನ್​​, ಮುಂದೇನಾಯ್ತು ಈ ಸ್ಟೋರಿ ಓದಿ

ವಿಮಾನಯಾನ ಸಿಬ್ಬಂದಿಯ ಮರುವಿನಿಂದ ಅವಾಂತರ ಸೃಷ್ಟಿಯಾಗಿದ್ದು, ಸಿಂಗಾಪೂರಿನಿಂದ ಬೆಂಗಳೂರಿಗೆ ಬರಬೇಕಾದ ವಿಮಾನ ಸಮಯದ ಸರಿಯಾಗಿ ಬರದೆ ತಡವಾಗಿ ಬಂದಿದೆ. ಭಾರತದ ಅತಿದೊಡ್ಡ ದೇಶೀಯ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

ಪ್ರಯಾಣಿಕರ ಲಗೇಜ್​ ಖಾಲಿ ಮಾಡದೆ ಸಿಂಗಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಪ್ಲೇನ್​​, ಮುಂದೇನಾಯ್ತು ಈ ಸ್ಟೋರಿ ಓದಿ
ಇಂಡಿಗೋ
Follow us
ವಿವೇಕ ಬಿರಾದಾರ
|

Updated on: Oct 19, 2023 | 10:46 AM

ವಿಮಾನಯಾನ ಸಿಬ್ಬಂದಿಯ ಮರುವಿನಿಂದ ಅವಾಂತರ ಸೃಷ್ಟಿಯಾಗಿದ್ದು, ಸಿಂಗಾಪೂರಿನಿಂದ (Singapore) ಬೆಂಗಳೂರಿಗೆ (Bengaluru) ಬರಬೇಕಾದ ವಿಮಾನ (Airplane) ಸಮಯದ ಸರಿಯಾಗಿ ಬರದೆ ತಡವಾಗಿ ಬಂದಿದೆ. ಭಾರತದ ಅತಿದೊಡ್ಡ ದೇಶೀಯ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಹೌದು ಬುಧವಾರ ಇಂಡಿಗೋ 6E-1006 ವಿಮಾನ ಬೆಂಗಳೂರಿನಿಂದ ಸಿಂಗಾಪುರಕ್ಕೆ ಪ್ರಯಾಣಿಸಿದೆ. ವಿಮಾನ ಸಿಂಗಾಪುರ ತಲುಪಿದ ಮೇಲೆ ಪ್ರಯಾಣಿಕರೆಲ್ಲರು ಇಳಿದಿದ್ದಾರೆ. ಆದರೆ ವಿಮಾನಯಾನ ಸಿಬ್ಬಂದಿ ವಿಮಾನದಲ್ಲಿದ್ದ ಲಗೇಜ್​ಗಳನ್ನು ಖಾಲಿ ಮಾಡಲು ಮರೆತಿದ್ದಾರೆ.

ನಂತರ ವಿಮಾನ ಈ ಲಗೇಜ್​ಗಳನ್ನು ಹೊತ್ತು ಸಿಂಗಾಪುರದ ಚಂಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 5:35ಕ್ಕೆ ಬೆಂಗಳೂರಿಗೆ ಪ್ರಯಾಣ ಆರಂಭಿಸಿದೆ. ಆಗ ಪ್ರಯಾಣಿಕರು ವಿಮಾನ ನಿಲ್ದಾಣ ಸಿಬ್ಬಂದಿಗೆ ನಮ್ಮ ಲಗೇಜ್​ಗಳನ್ನು ಹೊತ್ತು ವಿಮಾನ ಹೋಗಿದೆ, ನಿಮ್ಮ ಸಿಬ್ಬಂದಿ ಲಗೇಜ್​ಗಳನ್ನು ಖಾಲಿ ಮಾಡಲು ಮರೆತಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ: Bengaluru News: ವಿಮಾನದಲ್ಲಿ ಯುವತಿಗೆ ಕಿರುಕುಳ ನೀಡಿದ ಆಫ್​ ಡ್ಯೂಟಿ ಪೈಲಟ್​

ಕೂಡಲೆ ವಿಮಾನ ನಿಲ್ದಾಣದ ಅಧಿಕಾರಿ ಪೈಲಟ್​​ಗೆ ವಿಷಯ ತಿಳಿಸಿದ್ದಾರೆ. A321neo ವಿಮಾನ ಮತ್ತೆ ವಾಪಸ್​​ ಚಂಗಿ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಬೆಳಿಗ್ಗೆ 6.57ಕ್ಕೆ ಲ್ಯಾಂಡ್ ಆಗಿದೆ.​ ಆಗ ವಿಮಾನಯಾನ ಸಿಬ್ಬಂದಿ ಲಗೇಜ್​ಗಳನ್ನು ಖಾಲಿ ಮಾಡಿದ್ದಾರೆ. ನಂತರ ವಿಮಾನ ಬೆಳಿಗ್ಗೆ 10:12ಕ್ಕೆ ಟೇಕ್​ ಆಫ್​ ಆಗಿದೆ. 11:44ಕ್ಕೆ ಬೆಂಗಳೂರು ತಲುಪಿದೆ.

ಈ ಬಗ್ಗೆ ಇಂಡಿಗೋ ವಿಮಾನಯಾನ ಸಂಸ್ಥೆ ಟ್ವೀಟ್​ ಮಾಡಿ: ನಮ್ಮ ವಿಮಾನಯಾ ಸಿಬ್ಬಂದಿಯಿಂದ ಆದ ತಪ್ಪಿಗೆ ನಾವು ಕ್ಷಮೆ ಕೇಳುತ್ತೇವೆ. ನಮ್ಮ ತಪ್ಪನ್ನು ನಾವು ಒಪ್ಪಿಕೊಂಡಿದ್ದೇವೆ. ಇದರಿದ ಪ್ರಯಾಣಿಕರಿಗೆ ತೊಂದರೆಯಾಯಿತು. ಮತ್ತು ಅವರಿಗೆ ಮನೆಗಳಿಗೆ ತೆರಳಲು ವಿಳಂಬವಾಯಿತು. ಪ್ರಯಾಣಿಕರಿಗೆ ಉಪಹಾರಗಳನ್ನು ನೀಡಲಾಯಿತು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಎಂದಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯು ಪ್ರತಿದಿನ ಸುಮಾರು 2,000 ವಿಮಾನಗಳನ್ನು ನಿರ್ವಹಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ