AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್‌ ಮೊಸಳೆಗಳು; ವಿಡಿಯೋ ವೈರಲ್‌

ಪ್ರಕೃತಿಯಲ್ಲಿ ನಡೆಯುವ ಕೆಲವೊಂದು ವಿಚಿತ್ರ ಘಟನೆಗಳನ್ನು ನೋಡಿದಾಗ ಈ ಭೂಮಿ ಹಿಂಗೂ ನಡೆಯುತ್ತಾ ಎಂದು ನಾವು ಆಶ್ಚರ್ಯಪಡುತ್ತೇವೆ. ಇದೀಗ ಅಂತಹದ್ದೇ ಅಚ್ಚರಿಯ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹೌದು ಇಲ್ಲೊಂದು ಊರಿನಲ್ಲಿ ಮೊಸಳೆಗಳು ಮನುಷ್ಯರನ್ನು ಬೇಟೆಯಾಡಲು ನೀರಿನಲ್ಲಿ ಮುಳುಗಿದಂತೆ ನಾಟಕವಾಡುತ್ತದೆಯಂತೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್‌ ಮೊಸಳೆಗಳು; ವಿಡಿಯೋ ವೈರಲ್‌
ವೈರಲ್ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 09, 2025 | 5:36 PM

Share

ಕಾಡಿನಲ್ಲಿರುವ ಹುಲಿ, ಸಿಂಹ, ಚಿರತೆಗಳಂತೆ ನೀರಿನಲ್ಲಿ ವಾಸವಿರುವ ಮೊಸಳೆಗಳು ಕೂಡಾ ತುಂಬಾನೇ ಡೇಂಜರಸ್‌ ಪ್ರಾಣಿಗಳು. ತನ್ನ ಬಳಿ ಬರುವಂತಹ ಎಂತಹದ್ದೇ ಬಲಿಷ್ಠ ಪ್ರಾಣಿಯನ್ನಾದರೂ ಬೇಟೆಯಾಡುವಂತಹ ಶಕ್ತಿ ಇದಕ್ಕಿದೆ. ಇವುಗಳು ಸಾಮಾನ್ಯವಾಗಿ ಇವುಗಳು ಹೊಂಚು ಹಾಕಿ ನದಿ ಬಳಿ ನೀರು ಕುಡಿಯಲು ಬರುವ ಪ್ರಾಣಿಗಳು ಅಥವಾ ಮನುಷ್ಯರ ಮೇಲೆ ಅಟ್ಯಾಕ್‌ ಮಾಡುತ್ತವೆ. ಆದರೆ ಇಲ್ಲೊಂದು ದೇಶದಲ್ಲಿ ಬುದ್ಧಿವಂತ ಮೊಸಳೆಗಳು ಯಾರೋ ನೀರಿನಲ್ಲಿ ಮುಳುಗಿ ಒದ್ದಾಡುವಂತೆ ನಾಟಕ ಮಾಡಿ, ಮನುಷ್ಯರನ್ನು ತನ್ನತ್ತ ಬರುವಂತೆ ಮಾಡಿ ಅವರುಗಳನ್ನು ಬೇಟೆಯಾಡುತ್ತಿವೆಯಂತೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಇಂಡೋನೇಷ್ಯಾದಲ್ಲಿ ನಡೆದ ಘಟನೆ ಇದಾಗಿದ್ದು, ಇಲ್ಲಿನ ಉಪು ನೀರಿನಲ್ಲಿ ವಾಸಿಸುವಂತಹ ಮೊಸಳೆಗಳು ಮನುಷ್ಯರನ್ನು ಬೇಟೆಯಾಡಲು ಖತರ್ನಾಕ್‌ ತಂತ್ರವನ್ನು ಅಳವಡಿಸಿಕೊಂಡಿದೆ. ಅದೇನೆಂದರೆ ನೀರಿನಲ್ಲಿ ಯಾರೋ ಮನುಷ್ಯರೇ ಮುಳುಗಿ ಪ್ರಾಣ ರಕ್ಷಣೆಗಾಗಿ ಸಹಾಯ ಕೇಳುವಂತೆ ನಾಟಕವಾಡುತ್ತವೆ. ಹೀಗೆ ಇದ್ಯಾರೋ ಮನುಷ್ಯರೇ ಇರಬೇಕೆಂದು ಯಾರಾದರೂ ನೀರಿಗೆ ಹಾರಿದರೆ ಅವರ ಮೇಲೆ ಮೊಸಳೆಗಳು ಕ್ಷಣಾರ್ಧದಲ್ಲಿ ಅಟ್ಯಾಕ್‌ ಮಾಡುತ್ತವೆ.

ಈ ಕುರಿತ ವಿಡಿಯೋವನ್ನು DailyLoud ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮನುಷ್ಯರು ನಿಂತಿರುವುದನ್ನು ಕಂಡು ಮೊಸಳೆಯೊಂದು ಯಾರೋ ನೀರಿನಲ್ಲಿ ಮುಳುಗಿ ಪ್ರಾಣ ರಕ್ಷಣೆಗಾಗಿ ಸಹಾಯ ಕೇಳುವಂತೆ ನಾಟಕವಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮೈಸೂರಿನ ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ; ವೈರಲ್ ಆಗ್ತಿದೆ ಮೀಮ್ಸ್‌

ಜನವರಿ 8 ರಂದು ಹಂಚಿಕೊಳ್ಳಲಾದ ಈ ವಿಡಿಯೋ 16.2 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ನಿಜವೇ?ʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಎಂಥಾ ಖತರ್ನಾಕ್‌ ಐಡಿಯಾವಿದುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್