AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಧಿಯಿಂದ ಶವ ತೆಗೆದು ಹೊಸ ಬಟ್ಟೆ ಹಾಕಿ, ಸಿಗರೇಟ್​ ಸೇದಿಸುವ ಜನ, ವಿಚಿತ್ರ ಸಂಪ್ರದಾಯ

ವಿಶ್ವದ ಒಂದೊಂದು ಭಾಗಗಳಲ್ಲಿ ಒಂದೊಂದು ಬಗೆಯ ಸಂಪ್ರದಾಯವಿದೆ. ಹುಟ್ಟಿಗೊಂದು ಸಂಪ್ರದಾಯವಾದರೆ ಸಾವಿಗೊಂದು.ಇಂಡೋನೇಷ್ಯಾದಲ್ಲಿರುವ ಈ ವಿಚಿತ್ರ ಸಂಪ್ರದಾಯ ಇಡೀ ವಿಶ್ವವೇ ಅಚ್ಚರಿಪಡುವಂತಿದೆ.

ಸಮಾಧಿಯಿಂದ ಶವ ತೆಗೆದು ಹೊಸ ಬಟ್ಟೆ ಹಾಕಿ, ಸಿಗರೇಟ್​ ಸೇದಿಸುವ ಜನ, ವಿಚಿತ್ರ ಸಂಪ್ರದಾಯ
ಇಂಡೋನೇಷ್ಯಾ ಜನ
ನಯನಾ ರಾಜೀವ್
|

Updated on: Sep 13, 2024 | 11:25 AM

Share

ವಿಶ್ವದ ಒಂದೊಂದು ಭಾಗಗಳಲ್ಲಿ ಒಂದೊಂದು ಬಗೆಯ ಸಂಪ್ರದಾಯವಿದೆ. ಹುಟ್ಟಿಗೊಂದು ಸಂಪ್ರದಾಯವಾದರೆ ಸಾವಿಗೊಂದು.ಇಂಡೋನೇಷ್ಯಾದಲ್ಲಿರುವ ಈ ವಿಚಿತ್ರ ಸಂಪ್ರದಾಯ ಇಡೀ ವಿಶ್ವವೇ ಅಚ್ಚರಿಪಡುವಂತಿದೆ.

ಭಾರತದಲ್ಲಿ ತಮ್ಮ ಪ್ರೀತಿಪಾತ್ರರು ಮೃತಪಟ್ಟರೆ ಪ್ರತಿ ವರ್ಷವು ಅವರ ತಿಥಿ ಮಾಡುವ ಮೂಲಕ ನೆನಪಿಸಿಕೊಂಡರೆ, ಇಲ್ಲಿನ ಜನ ಬೇರೆಯದ್ದೇ ರೀತಿಯಲ್ಲಿ ನೆನಪಿಸಿಕೊಳ್ಳುತ್ತಾರೆ.

ಅವರು ತಮ್ಮ ಪೂರ್ವಜರ ಸಮಾಧಿಯನ್ನು ಅಗೆಯುವ ಮೂಲಕ ಸತ್ತವರನ್ನು ಹೊರ ತೆಗೆಯುತ್ತಾರೆ. ದೇಹಕ್ಕೆ ಸ್ನಾನಮಾಡಿಸುತ್ತಾರೆ. ಹೊಸ ಬಟ್ಟೆ ಹಾಕಿಸುತ್ತಾರೆ, ಸಿಗರೇಟ್ ಸೇದಿಸುತ್ತಾರೆ. ಅಷ್ಟೇ ಅಲ್ಲದೆ ಕುಟುಂಬದವರು ಆ ಶವಗಳ ಜತೆ ಫೋಟೊವನ್ನು ತೆಗೆಸಿಕೊಳ್ಳುತ್ತಾರೆ.

ತಾನಾ ತೊರಾಜ ಪ್ರದೇಶವು ಇಂಡೋನೇಷ್ಯಾದ ದಕ್ಷಿಣ ಸುಲವೆಸಿಯಲ್ಲಿದೆ. ತೊರಾಜ ಬುಡಕಟ್ಟಿನ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಈ ಜನರು ನಿರ್ಜೀವ ವಸ್ತುಗಳನ್ನು ಸಹ ಜೀವಂತವಾಗಿ ಪರಿಗಣಿಸುತ್ತಾರೆ. ಮನುಷ್ಯರಾಗಲಿ ಅಥವಾ ಪ್ರಾಣಿಯಾಗಲಿ ಅವರೆಲ್ಲರಿಗೂ ಆತ್ಮವಿದೆ ಮತ್ತು ಅವರನ್ನು ಗೌರವಿಸಬೇಕು ಎಂಬುದು ಅವರ ವಾದವಾಗಿದೆ.

ಮತ್ತಷ್ಟು ಓದಿ: Viral: ಅಯ್ಯೋ ನನ್ನ ಕಣ್ಣು ಹೋಯ್ತಲ್ಲ ದೇವ್ರೇ, ಮಕ್ಕಳ ಮೊಬೈಲ್‌ ಚಟವನ್ನು ಬಿಡಿಸಲು ಶಿಕ್ಷಕಿಯಿಂದ ವಿನೂತನ ಪ್ರಯತ್ನ

ಈ ಜನರು ಸತ್ತ ತಕ್ಷಣ ತಮ್ಮ ಪ್ರೀತಿಪಾತ್ರರನ್ನು ಸಮಾಧಿ ಮಾಡುವುದಿಲ್ಲ. ಮೃತದೇಹಗಳನ್ನು ಸಮಾಧಿಯಿಂದ ಹೊರತೆಗೆಯುತ್ತಾರೆ. ಪ್ರತಿ ವರ್ಷ ಆಗಸ್ಟ್​ ಸಮಯದಲ್ಲಿ ಈ ಜನರು ತಮ್ಮ ಸಮಾಧಿಯಿಂದ ಮೃತ ದೇಹಗಳನ್ನು ಹೊರತೆಗೆಯುತ್ತಾರೆ. ನಂತರ ಸ್ನಾನ ಮಾಡಿಸಿ ಹೊಸ ಬಟ್ಟೆ ತೊಡಿಸುತ್ತಾರೆ. ಅವರು ಜೀವಂತ ಮನುಷ್ಯರಂತೆ ಅವರೊಂದಿಗೆ ಇರಿಸಿಕೊಳ್ಳುತ್ತಾರೆ. ಅವರೊಂದಿಗೆ ಫೋಟೊ ತೆಗೆದುಕೊಳ್ಳುತ್ತಾರೆ. ಆಹಾರ, ಪಾನೀಯ, ಸಿಗರೇಟ್​ ಕೂಡ ಕೊಡುತ್ತಾರೆ.

ಈ ಆಚರಣೆ ಬಳಿಕ ಸಮಾಧಿಯನ್ನು ಸ್ವಚ್ಛಗೊಳಿಸುತ್ತಾರೆ. ಮತ್ತೆ ಹೂಳುತ್ತಾರೆ, ಇದನ್ನು ಪ್ರತಿ ವರ್ಷ ಮಾಡುತ್ತಾರೆ. ಮೃತ ದೇಹವನ್ನು ಸುರಕ್ಷಿತವಾಗಿಡಲು ಸಾಕಷ್ಟು ಕಾಳಜಿ ವಹಿಸಲಾಗಿದೆ. ಈ ಜನರು ನಿಧನರಾದವರ ಮೃತದೇಹಗಳನ್ನೂ ಕೆಲವು ತಿಂಗಳುಗಳ ಕಾಲ ತಮ್ಮ ಮನೆಗಳಲ್ಲಿ ಇಡುತ್ತಾರೆ.

ಈ ಹಬ್ಬದ ಸಂದರ್ಭದಲ್ಲಿ ಎಮ್ಮೆಗಳಿಂದ ಹಿಡಿದು ಹಂದಿಗಳವರೆಗೂ ಬಲಿಕೊಡಲಾಗುತ್ತದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಜನರಿಗೆ ಪ್ರಾಣಿಗಳ ಮಾಂಸವನ್ನು ನೀಡಲಾಗುತ್ತದೆ. ಚಿಕ್ಕ ಮಕ್ಕಳ ಶವಗಳನ್ನು ಟೊಳ್ಳಾದ ಮರಗಳ ಪೊಟರೆಗಳಲ್ಲಿ ಹೂಳಲಾಗುತ್ತದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ