ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲವೆಂದು ಸಂಗಾತಿಯ ಶವವನ್ನು ರಸ್ತೆ ಬದಿ ಎಸೆದು ಬಂದ ವ್ಯಕ್ತಿ

ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದ ಪತ್ನಿಯ ಶವವನ್ನು ಪತಿ ಮನೆಯಲ್ಲಿಟ್ಟಿದ್ದ. ಮನೆಯಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಕ್ಕಪಕ್ಕದ ಮನೆಯವರು ವಿಚಾರಿಸಿದಾಗ ಹೆದರಿದ ಆತ, ಅದೇ ದಿನ ರಾತ್ರಿ ಆಕೆಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ಮನೆಯಿಂದ ಸ್ವಲ್ಪ ದೂರದ ನಿರ್ಜನ ರಸ್ತೆಯಲ್ಲಿ ಎಸೆದು ಬಂದಿದ್ದಾನೆ.

ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲವೆಂದು ಸಂಗಾತಿಯ ಶವವನ್ನು ರಸ್ತೆ ಬದಿ ಎಸೆದು ಬಂದ ವ್ಯಕ್ತಿ
ಸಾಂದರ್ಭಿಕ ಚಿತ್ರ

Updated on: May 28, 2024 | 10:49 AM

ಮಧ್ಯಪ್ರದೇಶ: 53 ವರ್ಷದ ವ್ಯಕ್ತಿಯೊಬ್ಬ ತನ್ನ ಸಂಗಾತಿಯ ಶವವನ್ನು ಗೋಣಿಯಲ್ಲಿ ಕಟ್ಟಿ ರಸ್ತೆ ಬದಿ ಎಸೆದು ಬಂದಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಮೇ.26ರಂದು ರಾತ್ರಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪೊಲೀಸರಿಗೆ ಪತ್ತೆಯಾಗಿದ್ದು, ತನಿಖೆ ನಡೆಸಿದಾಗ ಅಂತಿಮ ಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಮಹಿಳೆಯ ಪತಿಯೇ ಆಕೆಯ ಶವವನ್ನು ರಸ್ತೆ ಬದಿ ಎಸೆದು ಹೋಗಿರುವುದು ಬೆಳಕಿಗೆ ಬಂದಿದೆ. ಆದರೆ ಮಹಿಳೆಯ ಸಾವಿಗೆ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದ ಮಹಿಳೆಯ ಶವವನ್ನು ಆತ ಮನೆಯಲ್ಲಿಟ್ಟಿದ್ದ. ಮನೆಯಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಕ್ಕಪಕ್ಕದ ಮನೆಯವರು ವಿಚಾರಿಸಿದಾಗ ಹೆದರಿದ ಆತ, ಅದೇ ದಿನ ರಾತ್ರಿ ಆಕೆಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ಮನೆಯಿಂದ ಸ್ವಲ್ಪ ದೂರದ ನಿರ್ಜನ ರಸ್ತೆಯಲ್ಲಿ ಬಿಟ್ಟು ಹೋಗಿದ್ದಾನೆ. ಭಾನುವಾರ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ಗೋಣಿಚೀಲ ಪತ್ತೆಯಾಗಿದೆ.

ಇದನ್ನೂ ಓದಿ: Viral Video: ಮಹಿಳೆಯ ಪರ್ಸ್ ಎಗರಿಸಲು ಬಂದ ಕಳ್ಳ ಬಸ್​​​ನಲ್ಲೇ ಲಾಕ್, ವಿಡಿಯೋ ವೈರಲ್

ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ನಡೆಸಿದ ಪೊಲೀಸರಿಗೆ, ಆಕೆಯ ಮಲವಿಸರ್ಜನೆಯ ಮೇಲೆ ಯಾವುದೇ ಗಾಯಗಳಿಲ್ಲ ಎಂದು ಪೋಸ್ಟ್‌ಮಾರ್ಟಮ್ ವರದಿಯು ಯಕೃತ್ತಿನ ಕಾಯಿಲೆಯಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಂತ್ಯಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಈ ರೀತಿ ಮಾಡಿದೆ ಎಂದು ವ್ಯಕ್ತಿ ಹೇಳಿದ್ದಾನೆ. ಆತನ ಮಾನಸಿಕ ಸ್ಥಿತಿಯೂ ಸರಿಯಿಲ್ಲ ಎಂದು ಎಸಿಪಿ ನಂದಿನಿ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ. ಇದೇ ವೇಳೆ ಪೊಲೀಸರು ಮಹಿಳೆಯ ಅಂತಿಮ ಸಂಸ್ಕಾರ ನಡೆಸಿದರು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:42 am, Tue, 28 May 24

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us