AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಲ್ಲಿ 50 ಕೋಟಿ ರೂ. ಬೆಲೆಯ ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿಸಿದ ನಾರಾಯಣ ಮೂರ್ತಿ

ಯುವಕರು ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳಿಕೆ ಕೊಟ್ಟು ಸುದ್ದಿಯಾಗಿದ್ದ ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್.‌ಆರ್.‌ ನಾರಾಯಣ ಮೂರ್ತಿ ಅವರು ಬೆಂಗಳೂರಿನಲ್ಲಿ ದುಬಾರಿ ಮನೆಯೊಂದನ್ನು ಖರೀದಿ ಮಾಡುವ ಮೂಲಕ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು ಇವರು ಕಿಂಗ್‌ಫಿಶರ್‌ ಟವರ್ಸ್‌ನಲ್ಲಿ 50 ಕೋಟಿ ಬೆಲೆಯ ಐಷಾರಾಮಿ ಫ್ಲಾಟ್‌ ಒಂದನ್ನು ಖರೀದಿ ಮಾಡಿದ್ದು, ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral: ಬೆಂಗಳೂರಿನಲ್ಲಿ 50 ಕೋಟಿ ರೂ. ಬೆಲೆಯ ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿಸಿದ ನಾರಾಯಣ ಮೂರ್ತಿ
ಎನ್.‌ಆರ್.‌ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ
ಮಾಲಾಶ್ರೀ ಅಂಚನ್​
| Edited By: |

Updated on: Dec 07, 2024 | 2:15 PM

Share

ಭಾರತದ ಪ್ರಸಿದ್ಧ ಬಿಲಿಯನೇರ್‌ಗಳಲ್ಲಿ ಒಬ್ಬರಾದ ಇನ್ಫೋಸಿಸ್‌ ಸಹ-ಸಂಸ್ಥಾಪಕ ಎನ್.‌ಆರ್‌ ನಾರಾಯಣ ಮೂರ್ತಿ ತಮ್ಮ ವ್ಯಾಪಾರ ವ್ಯವಹಾರ, ಸಿದ್ಧಾಂತ ಹಾಗೂ ಲೋಕೋಪಕಾರಗಳಿಂದ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಕೆಲ ತಿಂಗಳುಗಳ ಹಿಂದೆಯಷ್ಟೇ ತಮ್ಮ ನಾಲ್ಕು ತಿಂಗಳ ಮೊಮ್ಮಗನಿಗೆ 240 ಕೋಟಿ ಷೇರು ಉಡುಗೊರೆಯಾಗಿ ನೀಡುವ ಮೂಲಕ ಸುದ್ದಿಯಾಗಿದ್ದ ಇವರು ಇದೀಗ ಬೆಂಗಳೂರಿನಲ್ಲಿ ದುಬಾರಿ ಮನೆಯೊಂದನ್ನು ಖರೀದಿ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು ಇವರು ಅತ್ಯಂತ ದುಬಾರಿ ವಸತಿ ಯೋಜನೆ ಎನಿಸಿಕೊಂಡಿರುವ ಕಿಂಗ್‌ಫಿಶರ್‌ ಟವರ್ಸ್‌ನಲ್ಲಿ 50 ಕೋಟಿ ಬೆಲೆಯ ಐಷಾರಾಮಿ ಫ್ಲಾಟ್‌ ಒಂದನ್ನು ಖರೀದಿ ಮಾಡಿದ್ದಾರೆ.

ಬೆಂಗಳೂರಿನ ಹೃದಯ ಭಾಗ ಯುಬಿ ಸಿಟಿಯಲ್ಲಿರುವ ಕಿಂಗ್‌ಫಿಶರ್‌ ಟವರ್ಸ್‌ನಲ್ಲಿ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ದುಬಾರಿ ಬೆಲೆಯ ತನ್ನ ಎರಡನೇ ಅಪಾರ್ಟ್‌ಮೆಂಟ್‌ ಖರೀದಿಸಿದ್ದಾರೆ. 4.5 ಎಕರೆ ವಿಶಾಲವಾದ ಜಾಗದಲ್ಲಿ ನಿರ್ಮಿಸಲಾದ 34 ಅಂತಸ್ತಿತ ಐಶಾರಾಮಿ ಕಟ್ಟಡವಾದ ಕಿಂಗ್‌ಫಿಶರ್‌ ಟವರ್ಸ್‌ನಲ್ಲಿ ನಾರಾಯಣ ಮೂರ್ತಿ ಬರೋಬ್ಬರಿ 50 ಕೋಟಿ ರೂ. ಬೆಲೆಯ ಅಪಾರ್ಟ್‌ಮೆಂಟ್‌ ಒಂದನ್ನು ಖರೀದಿ ಮಾಡಿದ್ದಾರೆ.

2020 ರಲ್ಲಿ ಇವರ ಪತ್ನಿ ಸುಧಾ ಮೂರ್ತಿ ಅವರು ಇದೇ ಕಾಂಪ್ಲೆಕ್ಸ್‌ನ 23 ನೇ ಮಹಡಿಯಲ್ಲಿರುವ ಫ್ಲ್ಯಾಟ್‌ ಒಂದನ್ನು ಬರೋಬ್ಬರಿ 29 ಕೋಟಿ ರೂ. ಗಳಿಗೆ ಖರೀದಿಸಿದ್ದರು. ಇದೀಗ ನಾರಾಯಣ ಮೂರ್ತಿಯವರು ಇದೇ ಕಿಂಗ್‌ಫಿಶರ್‌ ಟವರ್ಸ್‌ನಲ್ಲಿ 50 ಕೋಟಿ ಬೆಲೆಯ ಐಷಾರಾಮಿ ಫ್ಲಾಟ್‌ ಒಂದನ್ನು ಖರೀದಿ ಮಾಡಿದ್ದಾರೆ.

ಕಿಂಗ್‌ಫಿಶರ್‌ ಟವರ್‌ನ 16 ನೇ ಮಹಡಿಯಲ್ಲಿರುವ ಹಾಗೂ 8,400 ಚದರ ಅಡಿಗಳಷ್ಟು ವ್ಯಾಪಿಸಿರುವ ಈ ದುಬಾರಿ ಫ್ಲಾಟ್‌ 4 ಮಲಗುವ ಕೋಣೆಗಳು, 5 ಕಾರ್‌ ಪಾರ್ಕಿಂಗ್‌ ವ್ಯವಸ್ಥೆಗಳನ್ನು ಒಳಗೊಂಡಿದೆ. ಟೈಮ್ಸ್‌ ಆಫ್‌ ಇಂಡಿಯಾ ವರದಿಯ ಪ್ರಕಾರ “50 ಕೋಟಿ ಬೆಲೆಯ ಈ ದುಬಾರಿ ಅಪಾರ್ಟ್‌ಮೆಂಟ್‌ನ ಪ್ರತಿ ಚದರ ಅಡಿ ವೆಚ್ಚವು 59,500 ರೂ. ಗಳಿಷ್ಟಿದೆ. ಇದು ನಗರದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌ಗಳಲ್ಲಿ ಒಂದಾಗಿದೆ.”

ಇದನ್ನೂ ಓದಿ: 90 ವರ್ಷಗಳ ಲಿವ್​ಇನ್​ ರಿಲೇಷನ್​ಶಿಪ್​ ​ ಬಳಿಕ 102 ವರ್ಷದ ಅಜ್ಜಿಯನ್ನು ಮದುವೆಯಾದ 100ರ ಅಜ್ಜ

ಹಲವು ಕೋಟ್ಯಾಧಿಪತಿಗಳು ಇಲ್ಲಿ ವಾಸವಿದ್ದಾರೆ:

ಕಿಂಗ್‌ಫಿಶರ್‌ ಟವರ್ಸ್‌ನಲ್ಲಿರುವ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಹಲವು ಕೋಟ್ಯಾಧಿಪತಿಗಳು ವಾಸವಿದ್ದಾರೆ. ಬಯೋಕಾನ್‌ನ ಕಾರ್ಯ ನಿರ್ವಾಹಕ ಅಧ್ಯಕ್ಷರಾದ ಕಿರಣ ಮಜುಂದಾರ್‌ ಶಾ, ಕಾಂಗ್ರೆಸ್‌ ನಾಯಕ ಕೆಜೆ ಜಾರ್ಜ್‌ ಪುತ್ರ ರಾಣಾ ಜಾರ್ಜ್‌, ಅಮೇರಿಕಾ ಮೂಲದ ಉದ್ಯಮಿ ಕೃಷ್ಣ ಚಿವುಕುಲ ಅವರಂತಹ ಹಲವು ಪ್ರಮುಖರು ಇದೇ ಕಿಂಗ್‌ಫಿಶರ್‌ ಟವರ್ಸ್‌ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸವಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ