AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Inspirational Story: 73ರ ಇಳಿ ವಯಸ್ಸಿನಲ್ಲೂ ಸೈಕಲ್​ನಲ್ಲೇ 2,500 ಕಿ.ಮೀ. ಪ್ರಯಾಣಿಸಿದ ವೃದ್ಧ

Kiran Seth: 73 ವರ್ಷದ ಕಿರಣ್ ಸೇಠ್ ಪದ್ಮಶ್ರೀ ಪುರಸ್ಕೃತರಾಗಿದ್ದು, 5 ರಾಜ್ಯಗಳನ್ನು ದಾಟಿ 2,500 ಕಿ.ಮೀ ದೂರವನ್ನು ಸೈಕಲ್​ನಲ್ಲಿ ಸಂಚರಿಸಿದ್ದಾರೆ.

Inspirational Story: 73ರ ಇಳಿ ವಯಸ್ಸಿನಲ್ಲೂ ಸೈಕಲ್​ನಲ್ಲೇ 2,500 ಕಿ.ಮೀ. ಪ್ರಯಾಣಿಸಿದ ವೃದ್ಧ
ಸೈಕ್ಲಿಂಗ್ ಮಾಡಿದ ಕಿರಣ್ ಸೇಠ್Image Credit source: Times of India
TV9 Web
| Edited By: |

Updated on:Jun 08, 2022 | 12:49 PM

Share

ನವದೆಹಲಿ: ಸಾಧನೆಗೆ ವಯಸ್ಸು ಅಡ್ಡಿಯಾಗಲಾರದು ಎಂಬುದಕ್ಕೆ ಉದಾಹರಣೆ ಎಂಬಂತೆ ದೆಹಲಿಯಲ್ಲಿ 73 ವರ್ಷದ ವೃದ್ಧರೊಬ್ಬರು ಬರೋಬ್ಬರಿ 2,500 ಕಿ.ಮೀ. ಸೈಕಲ್​ನಲ್ಲೇ ಪ್ರಯಾಣಿಸಿದ್ದಾರೆ. ದೆಹಲಿಯಿಂದ ಸೈಕಲ್ ಸವಾರಿ (Cycling) ಆರಂಭಿಸಿದ 73 ವರ್ಷ ಕಿರಣ್ ಸೇಠ್ (Kiran Seth) ಭಾನುವಾರ ರಾಜ್​ಘಾಟ್​ಗೆ ಬಂದು ತಲುಪಿದ್ದಾರೆ. 5 ರಾಜ್ಯಗಳಲ್ಲಿ ಸಂಚರಿಸಿರುವ ಅವರು ಇಳಿ ವಯಸ್ಸಿನಲ್ಲೂ ಎರಡೂವರೆ ಸಾವಿರ ಕಿ.ಮೀ. ಸೈಕಲ್ ತುಳಿದು ಅಚ್ಚರಿ ಮೂಡಿಸಿದ್ದಾರೆ.

ಅಂದಹಾಗೆ, ಈ ಕಿರಣ್ ಸೇಠ್ ಪದ್ಮಶ್ರೀ ಪುರಸ್ಕೃತರಾಗಿದ್ದು, ಸ್ಪಿಕ್ ಮಕೇ (SPIC MACAY) ಸಂಸ್ಥಾಪಕರಾಗಿದ್ದಾರೆ. ಸೈಕಲ್ ಸವಾರಿಯೆಂದರೆ ಕಿರಣ್ ಸೇಠ್ ಅವರಿಗೆ ಬಹಳ ಇಷ್ಟ. ಪರಿಸರ ಸ್ನೇಹಿಯಾಗಿರುವ ಸೈಕಲನ್ನು ಸಾರ್ವಜನಿಕರು ಸಾರಿಗೆ ವ್ಯವಸ್ಥೆಯಾಗಿ ಹೆಚ್ಚೆಚ್ಚು ಬಳಸಬೇಕೆಂಬುದರ ಬಗ್ಗೆ ಅರಿವು ಮೂಡಿಸಲು ಕಿರಣ್ ಸೇಠ್ ಈ ಅಭಿಯಾನ ಕೈಗೊಂಡಿದ್ದಾರೆ. ಸೈಕಲ್ ಸವಾರಿಯಿಂದ ಆರೋಗ್ಯಕ್ಕೂ ಒಳ್ಳೆಯದು ಎಂದಿರುವ ಅವರು ಸೈಕಲ್ ಬಳಕೆಯಿಂದ ಪೆಟ್ರೋಲ್, ಡೀಸೆಲ್ ಉಳಿಸಲು ಸಹಾಯಕವಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Success Story: 71ನೇ ವಯಸ್ಸಿನಲ್ಲೂ ಜೆಸಿಬಿ, ಲಾರಿಯಂತಹ 11 ರೀತಿಯ ವಾಹನಗಳನ್ನು ಚಲಾಯಿಸುತ್ತಾರೆ ಈ ಅಜ್ಜಿ!

ಇದನ್ನೂ ಓದಿ
Image
Viral Video: 100 ವರ್ಷದ ದೈತ್ಯಾಕಾರದ ಕಡಲೇಡಿ ಹಿಡಿದ ಮೀನುಗಾರ!
Image
Viral Video: ಕ್ಲಾಸ್​ರೂಂನಲ್ಲೇ ಮಲಗಿ ಗೊರಕೆ ಹೊಡೆಯುತ್ತಿದ್ದ ಟೀಚರ್​​ಗೆ ಗಾಳಿ ಬೀಸಿದ ವಿದ್ಯಾರ್ಥಿ; ವಿಡಿಯೋ ವೈರಲ್
Image
Trending: ವಿಜಯದ ಸಂಭ್ರಮದ ವೇಳೆ ತನ್ನ ಪತ್ನಿಗೆ ಗುದ್ದಿದ ಸೈಕ್ಲಿಸ್ಟ್
Image
Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ಮಾರ್ಚ್​ 11ರಂದು ದೆಹಲಿಯಿಂದ ತಮ್ಮ ಸೈಕಲ್ ಪ್ರಯಾಣವನ್ನು ಆರಂಭಿಸಿದ ಕಿರಣ್ ಸೇಠ್ ಮೊದಲು ಜೈಪುರದವರೆಗೆ ಸೈಕಲ್​ನಲ್ಲಿ ಪ್ರಯಾಣಿಸಬೇಕೆಂದು ಪ್ಲಾನ್ ಮಾಡಿದ್ದರು. ಆದರೆ, ಜೈಪುರಕ್ಕೆ ತಲುಪಿದ ನಂತರ ಇನ್ನೂ ಮುಂದುವರೆಯಲು ನಿರ್ಧರಿಸಿದರು. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಹರಿಯಾಣದ ಜಿಲ್ಲೆಗಳನ್ನು ದಾಟಿ ಭಾನುವಾರ ರಾಜ್​ಘಾಟ್​ ತಲುಪಿದ್ದಾರೆ.

‘ಸೈಕ್ಲಿಂಗ್ ಎಂದರೆ ಧ್ಯಾನವಿದ್ದಂತೆ. ಅದರಿಂದ ಆರೋಗ್ಯ ಹೆಚ್ಚಾಗುವುದು ಮಾತ್ರವಲ್ಲದೆ ಮನಸಿನ ನೆಮ್ಮದಿಯೂ ಹೆಚ್ಚುತ್ತದೆ. ನಾನು ದಿನವೂ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಸೈಕ್ಲಿಂಗ್ ಮಾಡುತ್ತಿದ್ದೆ. ಆಮೇಲೆ ಬಿಸಿಲು ಹೆಚ್ಚಾಗುತ್ತಿದ್ದುದರಿಂದ ಸೈಕ್ಲಿಂಗ್ ನಿಲ್ಲಿಸುತ್ತಿದ್ದೆ. ನಾನು ಗಂಟೆಗೆ 15 ಕಿ.ಮೀ. ದೂರವನ್ನು ಸೈಕಲ್​ನಲ್ಲಿ ಪ್ರಯಾಣಿಸುತ್ತಿದ್ದೆ. ಹೀಗೆ ದಿನಕ್ಕೆ 40ರಿಂದ 50 ಕಿ.ಮೀ. ಸೈಕ್ಲಿಂಗ್ ಮಾಡುತ್ತಿದ್ದೆ’ ಎಂದು ಕಿರಣ್ ಸೇಠ್ ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:43 pm, Wed, 8 June 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ