AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್‌ಸ್ಟಾಗ್ರಾಮ್‌ನಲ್ಲಿ ಖಾಸಗಿ ವಿಡಿಯೋ ಹಾಕಿ ಸ್ನೇಹಿತನ ಮೇಲೆ ದೂರಿದ ಜೋಡಿ

ಇನ್ಸ್ಟಾಗ್ರಾಮ್ ಖ್ಯಾತಿಯ ಸೋಫಿಕ್ ಎಸ್‌ಕೆ ಮತ್ತು ದುಸ್ತು ಸೋನಾಲಿ ಅವರ ಖಾಸಗಿ ವಿಡಿಯೋ ಸೋರಿಕೆಯಾಗಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಜೋಡಿಗಳು ವಿಡಿಯೋವನ್ನು ಸ್ನೇಹಿತನೊಬ್ಬ ಬ್ಲಾಕ್‌ಮೇಲ್ ಮಾಡಲು ದುರುಪಯೋಗಪಡಿಸಿಕೊಂಡಿದ್ದಾನೆಂದು ಆರೋಪಿಸಿ ಸೈಬರ್ ಅಪರಾಧ ಘಟಕಕ್ಕೆ ದೂರು ನೀಡಿದ್ದಾರೆ. ಇದೀಗ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಖಾಸಗಿ ವಿಡಿಯೋ ಹಾಕಿ ಸ್ನೇಹಿತನ ಮೇಲೆ ದೂರಿದ ಜೋಡಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Nov 28, 2025 | 2:54 PM

Share

ಸೋಶಿಯಲ್​​ ಮೀಡಿಯಾದ ಸೋಗಿನಲ್ಲಿ, ಜೋಡಿಗಳಿಬ್ಬರ ದೈಹಿಕ ಸಂಪರ್ಕದ ವಿಡಿಯೋ ಇನ್ಸ್ಟಾಗ್ರಾಮ್​​ (Instagram) ನಲ್ಲಿ ಸೋರಿಕೆಯಾಗಿದೆ. ಇದೀಗ ಈ ಜೋಡಿಗಳು ಪೇಚಿಗೆ ಸಿಲುಕಿಕೊಂಡಿದ್ದಾರೆ. ಸೋಫಿಕ್ ಎಸ್‌ಕೆ ಮತ್ತು ಡಸ್ತು ಸೋನಾಲಿ ಎಂಬ ಇನ್ಸ್ಟಾಗ್ರಾಮ್​​​ ಕ್ರಿಯೆಟರ್​ ಇದೀಗ ವಿವಾದಕ್ಕೆ ಸಿಲುಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಈ ವಿಡಿಯೋವನ್ನು ಅವರೇ ಹಂಚಿಕೊಂಡು, ಸ್ನೇಹಿತನ ಮೇಲೆ ದೂರಿದ್ದಾರೆ ಎಂದು ಹೇಳಲಾಗಿದೆ. ಇನ್ಸ್ಟಾಗ್ರಾಮ್​​​ ಕಂಟೆಂಟ್ ಕ್ರಿಯೆಟರ್​ಗಳಾಗಿರುವ ಬಂಗಾಳಿಯ ಸೋಫಿಕ್ ಎಸ್‌ಕೆ ಮತ್ತು ದುಸ್ತು ಸೋನಾಲಿ ಸುಮಾರು ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಇದರಲ್ಲಿ ಸೋಫಿಕ್ ಎಸ್‌ಕೆ 5 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ದುಸ್ತು ಸೋನಾಲಿ ಜತೆ ಸೇರಿ ಹಲವು ವೈರಲ್​​ ಕಂಟೆಂಟ್​​ಗಳನ್ನು ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಬೇರೆ ಬೇರೆ ವೇದಿಕೆಯಲ್ಲೂ ಇವರು ಕೆಲವೊಂದು ಟ್ರೆಂಡ್​​​​ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ದುಸ್ತು ಸೋನಾಲಿ ಕೂಡ ಇನ್ಸ್ಟಾಗ್ರಾಮ್​​ನಲ್ಲಿ 312,000 ಅನುಯಾಯಿಗಳನ್ನು ಹೊಂದಿದ್ದು, ಇಲ್ಲಿಯವರೆಗೆ ಇನ್ಸ್ಟಾದಲ್ಲಿ 130 ಪೋಸ್ಟ್​​​ಗಳನ್ನು ಹಂಚಿಕೊಂಡಿದ್ದಾರೆ. ದುಸ್ತು ಸೋನಾಲಿ ಹಂಚಿಕೊಳ್ಳುವ ಎಲ್ಲ ವಿಡಿಯೋದಲ್ಲೂ ಸೋಫಿಕ್ ಎಸ್‌ಕೆ ಕಾಣಿಸಿಕೊಳ್ಳುತ್ತಾರೆ. ಇನ್ನು ಸೋಫಿಕ್ ಎಸ್‌ಕೆ ಮತ್ತು ದುಸ್ತು ಸೋನಾಲಿ ಅವರ ಖಾಸಗಿ ವಿಡಿಯೋವೊಂದನ್ನು ಉದ್ದೇಶಪೂರಕವಾಗಿ ಅವರೇ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆದ್ಮೇಲೆ, ತಮ್ಮ ಸ್ನೇಹಿತನ ಮೇಲೆ ದೂರಿದ್ದಾರೆ.

ಸೋಫಿಕ್ ಎಸ್‌ಕೆ ಮತ್ತು ದುಸ್ತು ಸೋನಾಲಿ ತಮ್ಮ ಖಾಸಗಿ ವಿಡಿಯೋವನ್ನು ವೈರಲ್​​ ಮಾಡಿದ ಸ್ನೇಹಿತನ ಮೇಲೆ ಸೈಬರ್ ಅಪರಾಧ ಘಟಕ ಮತ್ತು ಇತರ ಅಧಿಕಾರಿಗಳಿಗೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ. ಆತನ ಸಹೋದರಿ ಮತ್ತು ಆಕೆಯ ಪತಿ ಸೇರಿದಂತೆ ಆತನ ಕುಟುಂಬದ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿಯೂ ಅವರು ಹೇಳಿದ್ದಾರೆ. ಇದಲ್ಲದೆ, ಆ ವೀಡಿಯೊ ತನ್ನ ಜೀವನವನ್ನು ಹಾಳುಮಾಡಿದೆ. ಹೊರಗಡೆ ಮುಖ ತೋರಿಸಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್​​ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್‌

ಸೋಶಿಯಲ್​​ ಮೀಡಿಯಾದಲ್ಲಿ ಸೋಫಿಕ್ ಎಸ್‌ಕೆ ಹೀಗೆ ಹೇಳಿದ್ದಾರೆ. “ಈ ವಿಡಿಯೋ ನನ್ನ ಬಳಿಯೂ ಇರಲಿಲ್ಲ. ನನ್ನ ಗೆಳತಿ ದುಸ್ತು ಸೋನಾಲಿ ಬಳಿ  ಇತ್ತು. ನಮ್ಮ ಫೋನ್​​​ನ ಪಾಸ್‌ವರ್ಡ್‌ಗಳನ್ನು ತಿಳಿದಿದ್ದ ಸ್ನೇಹಿತರೊಬ್ಬರು ಇದನ್ನು ಮಾಡಿದ್ದಾರೆ. ಅವರು ನಂಬಿಕೆ ದ್ರೋಹ ಮಾಡಿದ್ದಾರೆ. ಫೋನ್​​ನಿಂದ ವಿಡಿಯೋ ತೆಗೆದು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸಿದ್ದಾರೆ. ನಮ್ಮ ಮೇಲಿನ ಕೋಪಕ್ಕೆ ಅವರು ಹೀಗೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Fri, 28 November 25

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ