AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡೋಂಟ್‌ ಮೆಸ್‌ ವಿತ್‌ ಮೀ… ತನಗೆ ತೊಂದರೆ ಕೊಡಲು ಬಂದ ಅಜ್ಜನನ್ನು ಕೊಂಬಿನಿಂದ ತಿವಿದು ಎತ್ತಿ ಬಿಸಾಕಿದ ಹಸು

ಸುಖಾ ಸುಮ್ಮನೆ ತಮ್ಮ ತಂಟೆಗೆ ಯಾರಾದ್ರೂ ಬಂದ್ರೆ , ಎಂತಹ ಸಾದು ಪ್ರಾಣಿಯಾದರೂ ಕೋಪಗೊಳ್ಳುತ್ತವೆ. ಮತ್ತು ತಮ್ಮ ತಂಟೆಗೆ ಬಂದವರ ಮೇಲೆ ದಾಳಿ ನಡೆಸುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ತನಗೆ ದೊಣ್ಣೆಯಲ್ಲಿ ಹೊಡೆಯಲು ಬಂದಂತಹ ವ್ಯಕ್ತಿಯನ್ನೇ ಹಸುವೊಂದು ಕೊಂಬಿನಿಂದ ತಿವಿದು ಎತ್ತಿ ಬಿಸಾಕಿದೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral Video: ಡೋಂಟ್‌ ಮೆಸ್‌ ವಿತ್‌ ಮೀ... ತನಗೆ ತೊಂದರೆ ಕೊಡಲು ಬಂದ ಅಜ್ಜನನ್ನು ಕೊಂಬಿನಿಂದ ತಿವಿದು ಎತ್ತಿ ಬಿಸಾಕಿದ ಹಸು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jun 14, 2024 | 5:14 PM

Share

ಕಾಡು ಪ್ರಾಣಿಗಳೇ ಆಗಿರಲಿ ಅಥವಾ ಸಾಕು ಪ್ರಾಣಿಗಳೇ ಆಗಿರಲಿ ಅವುಗಳ ಸ್ವಭಾವ ನಡತೆಯನ್ನು ತಕ್ಷಣಕ್ಕೆ ಹೀಗೆ ಎಂದು ಹೇಳುವುದು ತೀರಾ ಕಷ್ಟ. ಕೆಲವೊಂದು ಬಾರಿ ಸಾದು ಪ್ರಾಣಿಗಳೂ ಕೂಡಾ ವೈಲೆಂಟ್‌ ಆಗುತ್ತವೆ. ಹೌದು ಯಾವುದೇ ಪ್ರಾಣಿಯಾದರೂ ಸರಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಒಮ್ಮೆಗೆ ವೈಲೆಂಟ್‌ ಆಗುತ್ತವೆ. ಪ್ರಾಣಿಗಳ ಉಗ್ರ ಅವತಾರಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ಹರಿದಾಡುತ್ತಿದ್ದು, ಹಸುವೊಂದು ತನಗೆ ದೊಣ್ಣೆಯಲ್ಲಿ ಹೊಡೆಯಲು ಬಂದಂತಹ ವ್ಯಕ್ತಿಯನ್ನು ಕೊಂಬಿನಿಂದ ತಿವಿದು ಎತ್ತಿ ಬಿಸಾಕಿದೆ. ಈ ದೃಶ್ಯಾವಳಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ವಿಡಿಯೋವನ್ನು ಶುಭಾಂಗಿ ಪಂಡಿತ್‌ (Babymishra_) ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮಧ್ಯವಯಸ್ಸಿನ ವ್ಯಕ್ತಿಯೊಬ್ಬ ಕೈಯಲ್ಲಿ ದೊಣ್ಣೆಯನ್ನು ಎತ್ತಿಕೊಂಡು ಬಂದು ತನ್ನ ಪಾಡಿಗೆ ನಿಂತಿದ್ದ ಹಸುವಿನ ಮೇಲೆ ಹೊಡೆಯಲು ಬರುವಂತಹ ದೃಶ್ಯವನ್ನು ಕಾಣಬಹುದು. ಹೀಗೆ ಹಿಂದಿನಿಂದ ಬಂದು ಆ ವ್ಯಕ್ತಿ ಹಸುವಿಗೆ ಜೋರಾಗಿ ಹೊಡೆಯುತ್ತಾನೆ. ನೋವನ್ನು ತಾಳಲಾರದೆ ಹಸು ಮಗ್ನೇ ಸುಖಾ ಸುಮ್ಮನೆ ನನಗೆ ಹೊಡಿತೀಯಾ ಎನ್ನುತ್ತಾ ಆತನ ಬಳಿ ನುಗ್ಗಿ ಕೊಂಬಿನಿಂದ ತಿವಿದು ಆ ವ್ಯಕ್ತಿಯನ್ನು ಎತ್ತಿ ಬಿಸಾಡಿದೆ.

ಇದನ್ನೂ ಓದಿ: ರಸ್ತೆಯಲ್ಲಿ ಯುವಕರಿಬ್ಬರ ಬೈಕ್‌ ಸ್ಟಂಟ್‌, ಹೆಲ್ಮೆಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ ಅಂಕಲ್ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಜೂನ್‌ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.3 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹಸುವಿಗೆ ಹೊಡೆದಿದ್ದಕ್ಕೆ ಆತನಿಗೆ ತಕ್ಕ ಶಾಸ್ತಿಯಾಗಿದೆ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್