Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಕಾಮಗಾರಿ: ಉದ್ಘಾಟನೆ ವೇಳೆಯೇ ಬಿರುಕು ಬಿಟ್ಟ ಹೊಸ ರಸ್ತೆ

ಕಳಪೆ ಕಾಮಗಾರಿಯಿಂದ ತೆಂಗಿನಕಾಯಿಯ ಬದಲಾಗಿ ರಸ್ತೆಯೇ ಬಿರುಕುಬಿಟ್ಟ ರೀತಿಯಲ್ಲಿ ಕಲ್ಲು ಎದ್ದಿದೆ.  ಘಟನೆಯಿಂದ ಅಸಮಧಾನಗೊಂಡ ಉದ್ಘಾಟನೆಗೆ ಬಂದಿದ್ದ ಬಿಜೆಪಿ ಶಾಸಕಿ ಶುಚಿ ಚೌದರಿ ಕಳಪೆ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕಳಪೆ ಕಾಮಗಾರಿ: ಉದ್ಘಾಟನೆ ವೇಳೆಯೇ ಬಿರುಕು ಬಿಟ್ಟ ಹೊಸ ರಸ್ತೆ
ರಸ್ತೆ ಅಗೆಯುತ್ತಿರುವುದು
Follow us
TV9 Web
| Updated By: shivaprasad.hs

Updated on:Dec 05, 2021 | 6:26 PM

ಉತ್ತರಪ್ರದೇಶ:  ಹೊಸದಾಗಿ ನಿರ್ಮಿಸಿದ ರಸ್ತೆ ಉದ್ಘಾಟನೆ ವೇಳೆ ತೆಂಗಿನ ಕಾಯಿ ಒಡೆದಾಗ, ತೆಂಗಿನ ಕಾಯಿಯ ಬದಲು ರಸ್ತೆಯೇ ಬಿರುಕುಬಿಟ್ಟ ಘಟನೆ ನಡೆದಿದೆಉತ್ತರಪ್ರದೇಶದ (Uttar Pradesh) ಬಿಜ್ನೋರ್ (Bijnor) ಜಿಲ್ಲೆಯಲ್ಲಿ ಬಿಜೆಪಿ ಶಾಕರೊಬ್ಬರು ಹೊಸದಾಗಿ ನಿರ್ಮಿಸಿದ ರಸ್ತೆಯ ಉದ್ಘಾಟನೆಗೆ ತೆರಳಿದ್ದರು. ಈ ವೇಳೆ ರಸ್ತೆಯ ಪೂಜೆಗೆಂದು ತೆಂಗಿನಕಾಯಿಯನ್ನು ಒಡೆಯಲು ಯತ್ನಿಸಿದರು. ಆದರೆ ಅಲ್ಲಿ ಮಾಡಿದ್ದ ಕಳಪೆ ಕಾಮಗಾರಿಯಿಂದ ತೆಂಗಿನಕಾಯಿಯ ಬದಲಾಗಿ ರಸ್ತೆಯೇ ಬಿರುಕುಬಿಟ್ಟ ರೀತಿಯಲ್ಲಿ ಕಲ್ಲು ಎದ್ದಿದೆಘಟನೆಯಿಂದ ಅಸಮಧಾನಗೊಂಡ ಉದ್ಘಾಟನೆಗೆ ಬಂದಿದ್ದ ಬಿಜೆಪಿ ಶಾಸಕಿ ಶುಚಿ ಚೌದರಿ (Suchi Choudhary) ಕಳಪೆ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇದೇ ವೇಳೆ ಬಿರುಕುಬಿಟ್ಟ ಹೊಸ ರಸ್ತೆಯ ಮೇಲೆಯೇ ಧರಣಿ ಕುಳಿತ ಘಟನೆಯೂ ನಡೆಯಿತು.

1.16ಕೋಟಿ ರೂ. ವೆಚ್ಚದಲ್ಲಿ ಬಿಜ್ನೋರ್ ಜಿಲ್ಲೆಯಲ್ಲಿ 7 ಕಿಮೀ ನಷ್ಟು ದೂರ ಹೊಸ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈ ರಸ್ತೆಯ ಉದ್ಘಾಟನೆಯ ವೇಳೆ ರಸ್ತೆಗೆ ಹೊಡೆದ ತೆಂಗಿನಕಾಯಿ ಒಡೆಯಲಿಲ್ಲ. ಬದಲಾಗಿ ರಸ್ತೆಗೆ ಹಾಕಿದ್ದ ಡಾಂಬರ್ ರಸ್ತೆ ಬಿಟ್ಟು ಎದ್ದಿತ್ತು. ಇದರಿಂದ ಮುಜುಗರಕ್ಕೊಳಗಾದ ಶಾಸಕರು ರಸ್ತೆಯನ್ನು ಅಗೆದಿದ್ದಾರೆ. ಆ ವೇಳೆ ಸುಲಭವಾಗಿ ಕಿತ್ತು ಬಂದ ಡಾಂಬರ್ ನೋಡಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಸುಮಾರು ಮೂರು ಗಂಟೆಗಳ ಕಾಲ ಶಾಸಕಿ ಶುಚಿ ಚೌದರಿ ಅವರು ಸ್ತಳದಲ್ಲಿಯೇ ಧರಣಿ ಕುಳಿತಿದ್ದರು. ನಂತರ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ತಂಡವು ಪರಿಶೀಲನೆಗೆಂದು ರಸ್ತೆ ಕಾಮಗಾರಿಗೆ ಬಳಸಿದ್ದ ಜಲ್ಲಿಕಲ್ಲು, ಮರಳಿನ ಮಾದರಿಯನ್ನು ಸಂಗ್ರಹಿಸಿಕೊಂಡು ಹೋಗಿದ್ದಾರೆ.

ಇದೇ ವೇಳೆ ಶಾಸಕರು ಕಳಪೆ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಉತ್ತರಪ್ರದೇಶ ರಾಜ್ಯ ಚುನಾವಣೆಗೆ ಕೇವಲ ಮೂರು ತಿಂಗಳು ಮಾತ್ರ ಉಳಿದಿದೆ. ಈ ನಡುವೆ ಉತ್ತರಪ್ರದೇಶ ಸರ್ಕಾರಕ್ಕೆ ಈ ರೀತಿಯ ಕಳಪೆ ಕಾಮಗಾರಿಗಳು ದೊಡ್ಡಆಘಾತವುಂಟು ಮಾಡಿದೆ.

ಇದನ್ನೂ ಓದಿ:

IND vs NZ: 89 ವರ್ಷಗಳ ಭಾರತ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ವಿಶಿಷ್ಟ ದಾಖಲೆ ಬರೆದ ಟೀಂ ಇಂಡಿಯಾ ಆರಂಭಿಕರು!

Sansad TV ಸಂಸದ್ ಟಿವಿ ಶೋ ನಿರೂಪಕಿ ಸ್ಥಾನ ತೊರೆದ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ

Published On - 5:14 pm, Sun, 5 December 21

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್