AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: 10 ತಿಂಗಳ ಹಿಂದೆ ನದಿಗೆ ಬಿದ್ದ ಐಫೋನ್ ಪತ್ತೆ, ನಂಬಲು ಅ’ಸಾಧ್ಯ’ವಾಗಿರುವುದು ಏನು ಗೊತ್ತಾ?

ಒಬ್ಬ ವ್ಯಕ್ತಿಯು ಹತ್ತು ತಿಂಗಳ ಹಿಂದೆ ಯುನೈಟೆಡ್ ಕಿಂಗ್‌ಡಮ್‌ನ ವೈ ನದಿಯಲ್ಲಿ ದೋಣಿಯಲ್ಲಿ ಹೋಗುವಾಗ ಕಳೆದುಕೊಂಡಿದ್ದ ಐಫೋನ್ ಅನ್ನು ಮರಳಿ ಪಡೆದಿದ್ದಾನೆ. ಈ ಬಗ್ಗೆ ಸ್ಟೋರಿ ಇಲ್ಲಿದೆ ನೋಡಿ.

Trending: 10 ತಿಂಗಳ ಹಿಂದೆ ನದಿಗೆ ಬಿದ್ದ ಐಫೋನ್ ಪತ್ತೆ, ನಂಬಲು ಅ'ಸಾಧ್ಯ'ವಾಗಿರುವುದು ಏನು ಗೊತ್ತಾ?
ನದಿಯಲ್ಲಿ ಪತ್ತೆಯಾದ ಐಫೋನ್Image Credit source: Facebook/Miggy Ps
TV9 Web
| Edited By: |

Updated on:Jun 26, 2022 | 5:46 PM

Share

ಸ್ಮಾರ್ಟ್​ಫೋನ್​ಗಳನ್ನು ಕಳೆದುಕೊಂಡರೆ ಆಗುವ ಭೀತಿ ಅಷ್ಟಿಷ್ಟಲ್ಲ, ಕೆಲವರಿಗೆ ಮೊಬೈಲ್ ಮರಳಿ ಪಡೆಯುವ ಭಾಗ್ಯ ಇದ್ದರೆ ಇನ್ನು ಕೆಲವರಿಗೆ ಇರುವುದಿಲ್ಲ. ಅದಾಗ್ಯೂ  ಒಬ್ಬ ವ್ಯಕ್ತಿಯು ಹತ್ತು ತಿಂಗಳ ಹಿಂದೆ ಯುನೈಟೆಡ್ ಕಿಂಗ್‌ಡಮ್‌ನ ವೈ ನದಿಯಲ್ಲಿ ದೋಣಿಯಲ್ಲಿ ಹೋಗುವಾಗ ಕಳೆದುಕೊಂಡಿದ್ದ ಐಫೋನ್ (iPhone) ಅನ್ನು ಮರಳಿ ಪಡೆದಿದ್ದಾನೆ.

ಇದನ್ನೂ ಓದಿ: Viral Video: ಬಾಹ್ಯಾಕಾಶದಲ್ಲಿ ಒದ್ದೆಯಾದ ಟವೆಲ್​ ಹಿಂಡಿದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ವ್ಯಕ್ತಿಯೊಬ್ಬರು ಮಿಗ್ಗಿ ಪಿಎಸ್ ಮೂಲಕ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಪೋಸ್ಟ್ ಮಾಡುತ್ತಾರೆ. “ಈ ಫೋಟೋದಲ್ಲಿರುವ ಜೋಡಿಯನ್ನು ಯಾರಾದರೂ ಗುರುತಿಸುತ್ತಾರೆಯೇ? ನಾನು ನಿನ್ನೆ ದೋಣಿಯಲ್ಲಿ ಹೋಗುವಾಗ ವೈ ನದಿಯಲ್ಲಿ ಈ ಐಫೋನ್ ಅನ್ನು ಕಂಡುಕೊಂಡೆ! ಇದು ಕಳೆದ ವರ್ಷ ಆಗಸ್ಟ್‌ನಿಂದ ಅದು ನೀರಿನಲ್ಲಿದೆ ಎಂದು ಅದರ ದಿನಾಂಕದಿಂದ ತಿಳಿದುಬಂದಿದೆ” ಎಂದಿದ್ದಾರೆ.

“ನಾನು ಮೊಬೈಲ್​ ಅನ್ನು ಮನೆಗೆ ತೆಗೆದುಕೊಂಡು ಹೋಗಿ ಏರ್ ಲೈನ್‌ನಿಂದ ಒಣಗಿಸಿ ನಂತರ ಸರಿಯಾಗಿ ಒಣಗಿಸಿದ್ದೇನೆ. ಇಂದು ಬೆಳಿಗ್ಗೆ ಅದನ್ನು ಚಾರ್ಜ್ ಮಾಡಿದ್ದು, ಈಗ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲು ಸಾಧ್ಯವಾಗಿಲ್ಲ. ಮಾಲೀಕರನ್ನು ಹುಡುಕಲು ಸಂತೋಷವಾಗುತ್ತದೆ. ದಯವಿಟ್ಟು ಈ ಪೋಸ್ಟ್ ಅನ್ನು ಹಂಚಿಕೊಳ್ಳಲು ಮುಕ್ತವಾಗಿರಿ” ಎಂದಿದ್ದಾರೆ.

ಇದನ್ನೂ ಓದಿ: Viral Video: ಇದು ಇದು ಆಕ್ಚುಲಿ ಚೆನ್ನಾಗಿರೋದು! ಪ್ರೋತ್ಸಾಹ ಅಂದ್ರೆ ಹೀಗಿರಬೇಕು

ಶೀಘ್ರದಲ್ಲೇ, ಜನರು ಪೋಸ್ಟ್ ಅನ್ನು ಹಂಚಿಕೊಳ್ಳಲು ಪ್ರಾರಂಭಿಸಿದ್ದು, ಈ ಪೋಸ್ಟ್ ಮೊಬೈಲ್​ನ ನಿಜವಾದ ಮಾಲೀಕನ ಕಣ್ಣಿಗೆ ಕಾಣಿಸಿದೆ. ಅದರಂತೆ ಆತ ಕಳೆದುಕೊಂಡ ಮೊಬೈಲ್​ ಅನ್ನು ಮರಳಿ ಪಡೆಯುವಂತಾಗಿದೆ. ಹೊಸದಾಗಿ ಹಂಚಿಕೊಳ್ಳಲಾದ ಪೋಸ್ಟ್​ನಲ್ಲಿ “ನಾವು ಫೋನ್‌ನ ಮಾಲೀಕರನ್ನು ಕಂಡುಕೊಂಡಿದ್ದೇವೆ! ಅವರು ಎಡಿನ್‌ಬರ್ಗ್‌ನವರು. ಕಳೆದ ವರ್ಷ ಆಗಸ್ಟ್ 13 ಶುಕ್ರವಾರದಂದು ಅವರು ತಮ್ಮ ಸ್ನೇಹಿತರೊಂದಿಗೆ ದೋಣಿಯಲ್ಲಿದ್ದಾಗ ಫೋನ್ ಕಳೆದುಕೊಂಡಿದ್ದರು. ಈ ಪೋಸ್ಟ್ ಅನ್ನು ಹಂಚಿಕೊಂಡ ಎಲ್ಲರಿಗೂ ಧನ್ಯವಾದಗಳು. ಈ ಮೊಬೈಲ್ ಅನ್ನು ಮಾಲೀಕರಿಗೆ ಪೋಸ್ಟ್ ಮಾಡಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: Viral Video: ತಾಯಿ ಕಳೆದುಕೊಂಡ ವಿದ್ಯಾರ್ಥಿಗೆ ಅಪ್ಪುಗೆಯ ಸಾಂತ್ವಾನ ಹೇಳಿದ ತರಗತಿ! ಕಣ್ಣೀರು ಬರಿಸುತ್ತದೆ ಈ ವಿಡಿಯೋ

Published On - 5:46 pm, Sun, 26 June 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್