AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಜನ್ಮದಲ್ಲಿಯೇ ವಿದ್ಯುತ್ ಕಂಡ ಉತ್ತಪ್ರದೇಶದ ವಯೋವೃದ್ಧೆ; ಇಂಥ ಅಧಿಕಾರಿಗಳು ಬೇಕು ಎನ್ನುತ್ತಿರುವ ನೆಟ್ಟಿಗರು

Electricity : ತಾನು ಬುಡ್ಡಿದೀಪದಲ್ಲಿಯೇ ಬದುಕು ಕಳೆಯುತ್ತೇನೇನೋ ಎಂದು ಬೇಸರಗೊಂಡಿದ್ದ ವಯೋವೃದ್ಧೆ ನೂರಜಹಾನಳ ಮನೆಗೆ ಸ್ವತಃ ಧಾವಿಸಿದ ಐಪಿಎಸ್​ ಅಧಿಕಾರಿ ಅನುಕೃತಿ ಶರ್ಮಾ ಆಕೆಯ ಮುಖದಲ್ಲಿ ಸಂತಸ ಅರಳಿಸಿದ್ದಾರೆ.

Viral Video: ಈ ಜನ್ಮದಲ್ಲಿಯೇ ವಿದ್ಯುತ್ ಕಂಡ ಉತ್ತಪ್ರದೇಶದ ವಯೋವೃದ್ಧೆ; ಇಂಥ ಅಧಿಕಾರಿಗಳು ಬೇಕು ಎನ್ನುತ್ತಿರುವ ನೆಟ್ಟಿಗರು
ಉತ್ತರ ಪ್ರದೇಶದ ಬುಲಂದ್​ಶಹರದ ವಯೋವೃದ್ಧೆ ನೂರ್​ಜಹಾನ್​ ಮನೆಗೆ ವಿದ್ಯುತ್​ ಸಂಪರ್ಕ ಕಲ್ಪಿಸಿದ ಖುಷಿಯಲ್ಲಿ ಐಪಿಎಸ್​ ಅಧಿಕಾರಿ ಅನುಕೃತಿ ಶರ್ಮಾ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jun 27, 2023 | 4:18 PM

Share

Uttar Pradesh : ಈತನಕವೂ ನಮ್ಮ ದೇಶದ ಅದೆಷ್ಟೋ ಲಕ್ಷಾಂತರ ಜನರು ಮನೆಯೊಳಗೆ ಕತ್ತಲನ್ನೇ ಉಸಿರಾಡುತ್ತಿದ್ದಾರೆ. ಆದರೂ ಕಣ್ಣುಮುಚ್ಚುವುದರೊಳಗೆ ಒಮ್ಮೆಯಾದರೂ ವಿದ್ಯುತ್ (Electricity) ನಮ್ಮ ಮನೆ ಬೆಳಗೀತೇ ಎಂದು ಬುಡ್ಡಿದೀಪವನ್ನಿಟ್ಟುಕೊಂಡು ಕನಸು ಕಾಣುತ್ತ ಜೀವಿಸುತ್ತಿದ್ದಾರೆ. ಹೀಗಿರುವಾಗ ಝಗ್ಗನೆ ಮನೆಯೊಳಗೆ ವಿದ್ಯುದ್ದೀಪ ಬೆಳಗಿದರೆ? ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ವಯೋವೃದ್ಧೆಯೊಬ್ಬರು ಇದೀಗ ತಮ್ಮ ಮನೆಯಲ್ಲಿ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದಾರೆ. ಇದಕ್ಕೆ ಕಾರಣೀಕರ್ತರಾದವರು ಐಪಿಎಸ್​ ಅಧಿಕಾರಿ ಅನುಕೃತಿ ಶರ್ಮಾ (Anukriti Sharma). ಕೆಳಗಿನ ಈ ವಿಡಿಯೋದಲ್ಲಿ ಈ ವಿದ್ಯುದ್ಸಂಭ್ರಮ ನೋಡಿ.

ಬುಲಂದ್​ಶಹರದಲ್ಲಿ (Bulandshahar) ವಾಸಿಸುತ್ತಿರುವ ನೂರ್​ಜಹಾನ್​ ಎನ್ನುವ ವೃದ್ಧೆಯ ಮನೆಯಲ್ಲಿ ದಶಕಗಳಿಮದ ವಿದ್ಯುತ್​ ಸಂಪರ್ಕವಿಲ್ಲದೇ ಬದುಕುತ್ತಿದ್ದರು. ಐಪಿಎಸ್​ ಅಧಿಕಾರಿ ಅನುಕೃತಿ ಶರ್ಮಾ ಅವರಿಗೆ ಈಕೆಯ ಪರಿಸ್ಥಿತಿಯ ಬಗ್ಗೆ ತಿಳಿಯಿತು. ಆಗ ಈ ಕೆಲಸವನ್ನು ಯಾರಿಗೂ ವಹಿಸದೇ ತಾವೇ ಸ್ವತಃ ನೂರ್​ಜಹಾನ್​ ಅವರ ಮನೆಗೆ ಧಾವಿಸಿದರು. ನಂತರ ಅವರ ತಂಡದ ಸದಸ್ಯರು ವಿದ್ಯುತ್​ ಮೀಟರ್​ ಅಳವಡಿಸಿ ಮನೆತುಂಬಾ ಬಲ್ಬಿನ ಬೆಳಕನ್ನೂಡಿಸಿದರು. ಇಷ್ಟೇ ಅಲ್ಲ, ಸೆಖೆಗಾಲಕ್ಕಾಗಿ ಒಂದು ಪಂಖಾ ಅನ್ನೂ ಉಡುಗೊರೆಯಾಗಿ ನೀಡಿದರು.

ಇದನ್ನೂ ಓದಿ : Viral Video: ‘ನನಗ ಬರ್ಯಾಕ ಬರಲ್ಲಲೇಪಾ, ನಮ್ ಅಜ್ಜನ್ ಕೂಡೇ ಎಬಿಸಿಡಿ ಬರ್ಸೆಕೆಂಬರ್ತೇನಿ’

ನೂರ್​ಜಹಾನ್​ ಅನುಕೃತಿ ಶರ್ಮಾ ಅವರಿಗೆ ಸಿಹಿ ತಿನ್ನಿಸಿ ಸಂತೋಷ ಹಂಚಿಕೊಂಡರು. ಅಲ್ಲಿದ್ದವರೆಲ್ಲ ಅಜ್ಜಿಯ ಖುಷಿಯನ್ನು ಅನುಭವಿಸುತ್ತ ತಮ್ಮ ಬಾಯಿಯನ್ನೂ ಸಿಹಿ ಮಾಡಿಕೊಂಡರು. ಇದು ನನ್ನ ಜೀವನದ ಅತ್ಯುದ್ಭುತ ಕ್ಷಣ ಎಂದು ನೂರ್​ಜಹಾನ್​ ಹೇಳುವಾಗ ಆಕೆಯ ಮುಖದಲ್ಲಿ ತೃಪ್ತಭಾವವಿತ್ತು. ಮೇಲಿನ ಈ ಟ್ವೀಟ್​ ಅನ್ನು ಅನುಕೃತಿ ತಮ್ಮ ಟ್ವಿಟರ್​ ಖಾತೆಯಲ್ಲಿ ಜೂ. 26ರಂದು ಹಂಚಿಕೊಂಡಿದ್ದಾರೆ. ಈ ವಿಡಿಯೋ ಅನ್ನು ಈತನಕ ಸುಮಾರು 9 ಲಕ್ಷ ಜನರು ನೋಡಿದ್ದಾರೆ. ಸಾವಿರಾರು ಜನರು ಅನುಕೃತಿಯವರಿಗೆ ಅಭಿನಂದನೆ ಕೋರಿದ್ದಾರೆ. ನಮಗೆ ನಿಮ್ಮಂಥ ಅಧಿಕಾರಿಗಳು ಬೇಕು. ಬಡಜನರಿಗೆ ಸಹಾಯ ಮಾಡುವಂಥ ಮನಸ್ಸುಗಳು ಆಡಳಿತಲ್ಲಿರಬೇಕು ಎಂದಿದ್ದಾರೆ.

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:15 pm, Tue, 27 June 23

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ