AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IRCTC Tour Package: ಕಮ್ಮಿ ಬಜೆಟ್‌ನಲ್ಲಿ ದುಬೈ ಟ್ರಿಪ್‌ ಹೋಗಲು ಬಯಸಿದ್ರೆ ಇಲ್ಲಿದೆ ನಿಮಗೊಂದು ಬಂಪರ್‌ ಆಫರ್‌

ನೀವೇನಾದ್ರೂ ದುಬೈಗೆ ಟ್ರಿಪ್‌ ಹೋಗುವ ಪ್ಲಾನ್‌ ಹಾಕಿದ್ರೆ ಇಲ್ಲಿದೆ ಒಂದು ಸಿಹಿ ಸುದ್ದಿ. ಭಾರತೀಯ ರೈಲ್ವೆ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸಮ್‌ ಕಾರ್ಪೊರೇಷನ್‌ ಲಿಮಿಟೆಡ್‌ (IRCTC) ನಾಲ್ಕು ರಾತ್ರಿಗಳು ಮತ್ತು ಐದು ಹಗಲುಗಳ ಕಡಿಮೆ ಬೆಲೆಯ ದುಬೈ ಟೂರ್‌ ಪ್ಯಾಕೇಜ್‌ ಅನ್ನು ಘೋಷಿಸಿದೆ. ಈ ಟೂರ್‌ ಪ್ಯಾಕೇಜ್‌ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

IRCTC Tour Package: ಕಮ್ಮಿ ಬಜೆಟ್‌ನಲ್ಲಿ ದುಬೈ ಟ್ರಿಪ್‌ ಹೋಗಲು ಬಯಸಿದ್ರೆ ಇಲ್ಲಿದೆ ನಿಮಗೊಂದು ಬಂಪರ್‌ ಆಫರ್‌
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Nov 13, 2024 | 10:15 AM

Share

ದುಬೈ ನಗರ ಅದೆಷ್ಟೋ ಪ್ರವಾಸಿಗರ ಕನಸಿನ ತಾಣ ಅಂತಾನೇ ಹೇಳಬಹುದು. ಇಲ್ಲಿನ ಐಷಾರಾಮಿ ಶಾಪಿಂಗ್ ಮಾಲ್‌ಗಳು, ಸಾಂಪ್ರದಾಯಿಕ ಸ್ಟೈಲೈನ್, ಕಲರ್ ಫುಲ್ ರಾತ್ರಿಗಳನ್ನು ನೋಡಲೆಂದೇ ಹೆಚ್ಚಿನವರು ದುಬೈಗೆ ಪ್ರವಾಸ ಹೋಗೋಕೆ ಇಷ್ಟ ಪಡ್ತಾರೆ. ನೀವು ಕೂಡಾ ಸಧ್ಯದಲ್ಲೇ ದುಬೈಗೆ ಪ್ರವಾಸ ಹೋಗುವ ಯೋಜನೆಯಲ್ಲಿದ್ದರೆ, ಇಲ್ಲಿದೆ ನಿಮಗೊಂದು ಬಂಪರ್ ಆಫರ್. ಅದೇನೆಂದರೆ ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (IRCTC) ನಾಲ್ಕು ರಾತ್ರಿಗಳು ಮತ್ತು ಐದು ಹಗಲುಗಳ ದುಬೈ ಟೂರ್‌ ಪ್ಯಾಕೇಜ್‌ ಅನ್ನು ಘೋಷಿಸಿದೆ. ಈ ಪ್ಯಾಕೇಜ್‌ ಮೂಲಕ ಅತ್ಯಂತ ಕಡಿಮೆ ಬೆಲೆಯಲ್ಲಿ ನೀವು ದುಬೈ ಟ್ರಿಪ್‌ ಹೋಗಬಹುದಾಗಿದೆ.

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (IRCTC) ತನ್ನ ಪ್ರಯಾಣಿಕರಿಗೆ ಕಡಿಮೆ ಬೆಲೆಯಲ್ಲಿ ದೇಶ ವಿದೇಶಗಳ ಹೊಸ ಹೊಸ ಪ್ರವಾಸ ಪ್ಯಾಕೇಜ್‌ಗಳನ್ನು ನಿರಂತರವಾಗಿ ಪರಿಚಯಿಸುತ್ತಿದೆ. ಇದೀಗ IRCTC ಕಡಿಮೆ ಬೆಲೆಯಲ್ಲಿ ದುಬೈ ಟೂರ್‌ ಪ್ಯಾಕೇಜ್‌ ಅನ್ನು ಘೋಷಣೆ ಮಾಡಿದೆ.

ಐಆರ್‌ಸಿಟಿಸಿ ನಾಲ್ಕು ರಾತ್ರಿಗಳು ಮತ್ತು ಐದು ಹಗಲುಗಳ ದುಬೈ ಪ್ರವಾಸದ ಪ್ಯಾಕೇಜ್‌ ಅನ್ನು ಘೋಷಿಸಿದ್ದು, ಈ ಪ್ರವಾಸ ಪ್ಯಾಕೇಜ್‌ ಮುಂಬೈ, ದೆಹಲಿ, ಬೆಂಗಳೂರು, ಪುಣೆ, ಚೆನ್ನೈ ಮತ್ತು ಚಂಡೀಗಢ ಸೇರಿದಂತೆ ಹಲವಾರು ನಗರಗಳಿಗೆ ಅನ್ವಯಿಸಲಿದೆ. ಈ ಪ್ಯಾಕೇಜ್‌ ಮೂಲಕ ಮಿರಾಕಲ್‌ ಗಾರ್ಡನ್‌, ಧೌ ಕ್ರೂಸ್‌, ಬುರ್ಜ್‌-ಅಲ್-ಖಲೀಫಾ, ಶೇಖ್‌ ಜಾಯೆದ್‌ ಮಸೀದಿ, ಬಿಎಪಿಎಸ್‌ ಹಿಂದೂ ದೇವಾಲಯ ಮತ್ತು ಗ್ಲೋಬಲ್‌ ವಿಲೇಜ್‌ ಸೇರಿದಂತೆ ದುಬೈ ಮತ್ತು ಅಬುಧಾಬಿ ನಗರದ ಪ್ರಮುಖ ತಾಣಗಳಿಗೆ ಭೇಟಿ ನೀಡಬಹುದಾಗಿದೆ.

ದುಬೈ ಪ್ರವಾಸದ ದಿನಾಂಕವನ್ನು ಪರಿಶೀಲಿಸಿ:

ಮುಂಬೈನಿಂದ ಡಿಸೆಂಬರ್ 23 ರಿಂದ ಡಿಸೆಂಬರ್ 27 ರವರೆಗೆ ಪ್ರವಾಸ ಇರಲಿದೆ ಮತ್ತು ದೆಹಲಿಯಿಂದ ಬರುವ ಪ್ರಯಾಣಿಕರಿಗೆ ಡಿಸೆಂಬರ್ 24 ರಿಂದ ಡಿಸೆಂಬರ್ 29 ರವರೆಗೆ ಪ್ರವಾಸದ ಪ್ಯಾಕೇಜ್ ಇರಲಿದೆ. ಬೆಂಗಳೂರಿನಿಂದ ಪ್ರವಾಸವನ್ನು ಜನವರಿ 19 ರಿಂದ ಜನವರಿ 23, 2025 ರವರೆಗೆ ನಿಗದಿಪಡಿಸಲಾಗಿದೆ. ಚೆನ್ನೈ ನಗರದಿಂದ ನವೆಂಬರ್‌ 28 ರಿಂದ ಡಿಸೆಂಬರ್‌ 5 ರ ವರೆಗೆ ಟೂರ್‌ ಪ್ಯಾಕೇಜ್‌ ಲಭ್ಯವಿದ್ದರೆ ಚಂಡೀಗಢದಿಂದ ದುಬೈ ಟ್ರಿಪ್ ಪ್ಯಾಕೇಜ್ ಫೆಬ್ರವರಿ 2025 ರಲ್ಲಿ ಪ್ರಾರಂಭವಾಗಲಿದೆ ಎಂದು IRCTC ಪ್ರಕಟಿಸಿದೆ.

ಇದನ್ನೂ ಓದಿ: ತುಳಸಿ ಪೂಜೆಯ ಶುಭ ಮುಹೂರ್ತ ಮತ್ತು ಪೂಜೆ ವಿಧಾನದ ಬಗ್ಗೆ ತಿಳಿಯಿರಿ

ದುಬೈ ಟ್ರಿಪ್ ಪ್ಯಾಕೇಜ್ ವೆಚ್ಚ:

ಆಸಕ್ತ ಪ್ರವಾಸಿಗರಿಗೆ, ದೆಹಲಿಯಿಂದ ದುಬೈ ಪ್ಯಾಕೇಜ್‌ನ ಬೆಲೆ ಪ್ರತಿ ವ್ಯಕ್ತಿಗೆ ರೂ 1.04 ಲಕ್ಷದಿಂದ 1.09 ಲಕ್ಷದಿಂದ ಪ್ರಾರಂಭವಾಗುತ್ತದೆ. ಮುಂಬೈನಿಂದ 1.02 ಲಕ್ಷದಿಂದ ಪ್ಯಾಕೇಜ್‌ ಆರಂಭವಾಗಲಿದೆ. ಇನ್ನೂ ಬೆಂಗಳೂರಿನಿಂದ 92 ಸಾವಿರದಿಂದ ಪ್ಯಾಕೇಜ್‌ ಆರಂಭವಾದರೆ ಚೆನ್ನೈನಿಂದ 91 ಸಾವಿರದಿಂದ ದುಬೈ ಟ್ರಿಪ್‌ ವೆಚ್ಚ ಆರಂಭವಾಗಲಿದೆ. ಚಂಡೀಘಡದಿಂದ ಪ್ರವಾಸ ವೆಚ್ಚವು 1.2 ಲಕ್ಷದಿಂದ ಆರಂಭವಾಗಲಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ನೀವು www.irctctourism.com ಗೆ ಭೇಟಿ ನೀಡಿ ಅಥವಾ ಈ ಕೆಳಗೆ ನೀಡಿರುವ ಲಿಂಕ್‌ಗೆ ಕ್ಲಿಕ್‌ ಮಾಡಿ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?