Fact Check: ನೀರು ತುಂಬಿರುವ ಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹತ್ತಿರುವುದು ನಿಜವೇ?

ಸಾಮಾಜಿಕ ಜಾಲತಾಣಗಳಲ್ಲಿ 26-ಸೆಕೆಂಡ್‌ಗಳ ವಿಡಿಯೋ ಒಂದು ವೈರಲ್ ಆಗುತ್ತಿದೆ. ಪ್ರವಾಹಕ್ಕೆ ಒಳಗಾದ ರಸ್ತೆಯಲ್ಲಿ ವಿದ್ಯುತ್ ತಂತಿಗಳು ನೆಲಕ್ಕೆ ಬಿದ್ದು ಬೆಂಕಿ ಕಾಣಿಸಿಕೊಂಡಿದೆ. ಇದು ಬೆಂಗಳೂರಿನಲ್ಲಿ ನಡೆದಿರುವ ಘಟನೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋದ ನಿಜಾಂಶ ಏನು?, ಇಲ್ಲಿದೆ.

Fact Check: ನೀರು ತುಂಬಿರುವ ಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹತ್ತಿರುವುದು ನಿಜವೇ?
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 23, 2024 | 12:19 PM

ಅನಿರೀಕ್ಷಿತ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ಮಹಾನಗರ ತತ್ತರಿಸಿಹೋಗಿದೆ. ಹಲವು ಏರಿಯಾಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ನಗರ ಜಿಲ್ಲೆಗೆ ಯಲ್ಲೋ ಅಲರ್ಟ್​ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ / ಅನುದಾನಿತ ಪ್ರಾಥಮಿಕ/ ಪ್ರೌಢಶಾಲೆಗಳಿಗೆ ರಜೆಯನ್ನು ಕೂಡ ಘೋಷಿಸಲಾಗಿದೆ.

ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ 26-ಸೆಕೆಂಡ್‌ಗಳ ವಿಡಿಯೋ ಒಂದು ವೈರಲ್ ಆಗುತ್ತಿದೆ. ಪ್ರವಾಹಕ್ಕೆ ಒಳಗಾದ ರಸ್ತೆಯಲ್ಲಿ ವಿದ್ಯುತ್ ತಂತಿಗಳು ನೆಲಕ್ಕೆ ಬಿದ್ದು ಬೆಂಕಿ ಕಾಣಿಸಿಕೊಂಡಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ ಆದಂತೆ ಕಾಣುತ್ತಿದೆ. ಎಕ್ಸ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಅಪ್ಲೋಡ್ ಮಾಡಿ, ‘ಬ್ರಾಂಡ್ ಬೆಂಗಳೂರು ಬಿಸಿ ನೀರು ಭಾಗ್ಯ ಅಷ್ಟೇ.. ಯಾರಿಗೆ ಏನಾದ್ರೆ ನಮಗೇನು ಅಂತಿದೆ ಕಾಸಿಲ್ಲದ ಸರ್ಕಾರ,’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಈ ವಿಡಿಯೋ ಬೆಂಗಳೂರಿನದ್ದೇ ಅಲ್ಲ, ಇದು ವಿ ಯೆಟ್ನಾಂನಿಂದ ಬಂದಿದೆ. ನಿಜಾಂಶವನ್ನು ತಿಳಿಯಲು ನಾವು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ. ಆಗ ಎಕ್ಸ್ ಬಳಕೆದಾರರೊಬ್ಬರು ಅಕ್ಟೋಬರ್ 16, 2024 ರಂದು ‘ವಿಯೆಟ್ನಾಂ’ ಎಂಬ ಶೀರ್ಷಿಕೆಯೊಂದಿಗೆ ಇದೇ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನಾವು ಕಂಡುಕೊಂಡಿದ್ದೇವೆ. ಹೀಗಾಗಿ ಇದು ಭಾರತದ ಹೊರಗಿನ ವೀಡಿಯೊ ಎಂಬ ಬಗ್ಗೆ ಸುಳಿವು ಸಿಕ್ಕಿತು.

ಇದಲ್ಲದೆ, ಕೀವರ್ಡ್ ಹುಡುಕಾಟ ನಡೆಸಿದಾಗ ವಿಯೆಟ್ನಾಂ ಸ್ಥಳೀಯ ವೆಬ್​ಸೈಟ್ ವಿಯೆಟ್ನಾಮೀಸ್ ಈ ಕುರಿತು ವರದಿ ಮಾಡಿರುವುದು ಕಂಡುಬಂದಿದೆ. ಅಕ್ಟೋಬರ್ 16, 2024 ರಂದು ಪಬ್ಲಿಶ್ ಆದ ಸುದ್ದಿಯ ಪ್ರಕಾರ, ;ಕ್ಯಾನ್ ಥೋದಲ್ಲಿ ವಿದ್ಯುತ್ ತಂತಿಗಳು ಜಲಾವೃತಗೊಂಡ ರಸ್ತೆಯ ಮೇಲೆ ಬಿದ್ದಾಗ ಸಂಭವಿಸಿದ ಆಘಾತಕಾರಿ ದೃಶ್ಯ. ತುಂಡಾದ ವಿದ್ಯುತ್ ತಂತಿಯು ನೀರಿನ ಮೇಲ್ಮೈಯಲ್ಲಿ ಅಪಾಯಕಾರಿಯಾಗಿ ಕಾಣುವ ಕಿಡಿಗಳನ್ನು ಕಂಡು ಜನರು ಭಯಭೀತರಾಗಿದ್ದರು,’ ಎಂದು ಬರೆಯಲಾಗಿದೆ.

ಇದು ವಿಯೆಟ್ನಾಂನ ಕ್ಯಾನ್ ಥೋ ಎಂಬ ನಗರದಲ್ಲಿ ಈ ಘಟನೆ ನಡೆದಿರುವುದು ದೃಢಪಟ್ಟಿದೆ. ಭಾರೀ ಚಂಡಮಾರುತದ ಸಮಯದಲ್ಲಿ, ಹೈವೋಲ್ಟೇಜ್ ವಿದ್ಯುತ್ ತಂತಿಯೊಂದು ತುಂಡಾಗಿ ನೀರಿನ ಮೇಲೆ ಮುಳುಗಿದ ಬೀದಿಯಲ್ಲಿ ಬೆಂಕಿ ಎದ್ದಿದೆ ಎಂದು ವರದಿ ವಿವರಿಸಿದೆ.

ಹಾಗೆಯೆ ಇದೇ ವೀಡಿಯೊವನ್ನು ವಿಯೆಟ್ನಾಂನ ಸ್ಥಳೀಯ ಯೂಟ್ಯೂಬ್ ಚಾನೆಲ್ KÊNH VTC14 ​ನಲ್ಲಿ ಅಕ್ಟೋಬರ್ 17, 2024 ರಂದು ಅಪ್ಲೋಡ್ ಮಾಡಲಾಗಿದೆ. ಇದಕ್ಕೆ ‘‘ತುಂಡಾದ ವಿದ್ಯುತ್ ತಂತಿಗಳು ಜಲಾವೃತಗೊಂಡ ರಸ್ತೆಗೆ ಬೀಳುವ ಭಯಾನಕ ದೃಶ್ಯ, ಇದರಿಂದ ಕಿಡಿಗಳು ಹಾರಿವೆ,’’ ಎಂದು ಶೀರ್ಷಿಕೆ ನೀಡಲಾಗಿದೆ.

ಈ ಎಲ್ಲ ವರದಿಯ ಆಧಾರದ ಮೇಲೆ ಬೆಂಗಳೂರಿನಲ್ಲಿ ಈ ಘಟನೆ ಸಂಭವಿಸಿಲ್ಲ ಎಂದು ನಾವು ಖಚಿತವಾಗಿ ಹೇಳುತ್ತೇವೆ. ಅನಿರೀಕ್ಷಿತ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿರುವುದು ನಿಜ. ಆದರೆ, ವೈರಲ್ ವಿಡಿಯೋ ವಿಯೆಟ್ನಾಂನ ಕ್ಯಾನ್ ಥೋದಿಂದ ಬಂದ ದೃಶ್ಯಾವಳಿಗಳಾಗಿವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ