AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಪಿ ತೋಳಗಳಿಗೆ ಮಣ್ಣು ಮುಕ್ಕಿಸಿದ ಚಾಣಕ್ಯ ಮೊಲ! 

ಬಲಶಾಲಿ ಪ್ರಾಣಿಗಳು ಕಾಡಿನ ಸಣ್ಣಪುಟ್ಟ ಪ್ರಾಣಿಗಳನ್ನು ಬೇಟೆಯಾಡುವಂತಹ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಹರಿದಾಡುತ್ತಿರುತ್ತವೆ. ಇತ್ತೀಚಿಗೆ ಅಂತಹದ್ದೇ ಒಂದು ವೀಡಿಯೋ ವೈರಲ್ ಆಗಿದ್ದು,  ತೋಳಗಳೆರಡು ಪುಟ್ಟ ಮೊಲವನ್ನು ಬೇಟೆಯಾಡಲು ಹರಸಾಹಸ ಪಡುತ್ತಿರುವುದನ್ನು ಕಾಣಬಹುದು.

Viral Video: ಪಾಪಿ ತೋಳಗಳಿಗೆ ಮಣ್ಣು ಮುಕ್ಕಿಸಿದ ಚಾಣಕ್ಯ ಮೊಲ! 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Oct 18, 2023 | 3:29 PM

Share

ಕಾಡನಲ್ಲಿ ಬಲಿಷ್ಠ ಪ್ರಾಣಿಗಳು, ಚಿಕ್ಕ ಪುಟ್ಟ ಪ್ರಾಣಿಗಳನ್ನು ಬೇಟೆಯಾಡುತ್ತಿರುತ್ತವೆ. ಸಿಂಹಗಳು ಒಂಟಿಯಾಗಿ ಬೇಟೆಯಾಡಿದರೆ ತೋಳಗಳು ಗುಂಪುಗಳಾಗಿ ಬೇಟೆಯಾಡುತ್ತವೆ. ಹೀಗಿದ್ದರೂ ಶಕ್ತಿಗಿಂತ ಯುಕ್ತಿ ಮೇಲು ಎಂದು ತೋರಿಸಿ ಅದೆಷ್ಟೋ ಸಣ್ಣಪುಟ್ಟ ಪ್ರಾಣಿಗಳು ದೈತ್ಯರ ಬೇಟೆಯಿಂದ ತಪ್ಪಿಸಿಕೊಳ್ಳುತ್ತವೆ. ಅದೇ ರೀತಿ ಇಲ್ಲೊಂದು ವೀಡಿಯೋ ವೈರಲ್ ಆಗಿದ್ದು, ಎರಡು ತೋಳಗಳು ಸೇರಿ ಮೊಲವನ್ನು ಬೇಟೆಯಾಡಲು ಪ್ರಯತ್ನಿಸುತ್ತವೆ. ಆದರೆ ಈ  ಪುಟ್ಟ ಮೊಲವು ತೋಳಗಳ ಬೇಟೆಯಿಂದ ತಪ್ಪಿಸಿಕೊಂಡು,  ಎಂತಹದ್ದೇ  ಪರಿಸ್ಥಿತಿ ಎದುರಾದರೂ ಬದುಕುವ ಹಾಗೂ ಜಯಿಸುವ ಛಲವನ್ನು ಬಿಡಬಾರದೆಂಬುದನ್ನು  ತೋರಿಸಿಕೊಟ್ಟಿದೆ.

ಈ ವೈರಲ್ ವೀಡಿಯೋವನ್ನು  Figen (@TheFigen) ಎಂಬವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು “ಜೀವನ ಎಂದರೇನು…. ಎಂದಿಗೂ ಬಿಟ್ಟುಕೊಡಬೇಡಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೀಡಿಯೋದಲ್ಲಿ ತೋಳಗಳೆರಡು ಪುಟ್ಟ ಮೊಲವನ್ನು ಬೇಟೆಯಾಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.  ತೋಳಗಳೆರಡು ಮೊಲವನ್ನು ಅಟ್ಟಾಡಿಸಿಕೊಂಡು ಹೋಗುತ್ತದೆ. ಇನ್ನೇನು ಈ ಮೊಲ ತೋಳಗಳಿಗೆ ಆಹಾರವಾಗಿಬಿಡುತ್ತದೆ ಎನ್ನುವಷ್ಟರಲ್ಲಿ ಮೊಲ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತದೆ. ಹೀಗೆ ಛಲ ಬಿಡದ ಮೊಲ, ನಿಮಗಿಂತ ನಾನೇನು ಕಡಿಮೆಯಿಲ್ಲ, ಒಬ್ಬಂಟಿಯಾಗಿದ್ದರೆ ಏನಂತೆ ಗೆಲ್ಲುವ ಛಲ, ದೈರ್ಯ ನನಗಿದೆ ಎನ್ನುತ್ತಾ ಯುಕ್ತಿಯಿಂದ ತೋಳಗಳ ಬೇಟೆಯಿಂದ ತಪ್ಪಿಸಿಕೊಂಡು ದೂರ ಓಡಿಹೋಗುತ್ತದೆ. ಆ ಸಂದರ್ಭದಲ್ಲಿ ತೋಳಗಳ ಮುಖದಲ್ಲಿ ಹತಾಶೆಯ ಭಾವನೆಯನ್ನು ಕಾಣಬಹುದು.  ಕೊನೆಯಲ್ಲಿ ತೋಳಗಳ ಬೇಟೆಯಿಂದ ಪಾರದ ಮೊಲದ ಮುಖದಲ್ಲಿ ಗೆಲುವಿನ ಉತ್ಸಾಹವನ್ನು ಕಾಣಬಹುದು.

ಇದನ್ನೂ ಓದಿ: ಬುಸ್ ಕಿಸ್​​ ಎನ್ನವಂತಿಲ್ಲ ಸುಮ್ಮನಿರಬೇಕು ಎಂದು ಕಾಳಿಂಗ ಸರ್ಪಕ್ಕೆ ಸ್ನಾನ ಮಾಡಿಸಿದ ಎಂಟೆದೆ ಭಂಟ

ಜೀವನದಲ್ಲಿ ಏನೇ ಕಷ್ಟ ಬರಲಿ, ಆದರೆ ಸೋಲನ್ನು ಒಪ್ಪಿಕೊಳ್ಳಬಾರದು, ಧೈರ್ಯದಿಂದ ಮುನ್ನುಗ್ಗಿ ಜೀವನವನ್ನು ಗೆಲ್ಲಬೇಕು ಎಂಬ ಜೀವನ ಪಾಠವನ್ನು ಈ ಮೊಲದಿಂದ ನಾವು ಕಲಿಯಬಹುದು.

ವೈರಲ್​ ವಿಡಿಯೋ ಇಲ್ಲಿದೆ:

ಅಕ್ಟೋಬರ್ 17 ರಂದು ಹಂಚಿಕೊಳ್ಳಲಾದ ಈ ವೀಡಿಯೋ 8.5 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದುಬಂದಿವೆ. ಒಬ್ಬ ಬಳಕೆದಾರರು “ಓಡುವ ವೇಗಕ್ಕಿಂತ ತಂತ್ರಗಾರಿಕೆ ಮುಖ್ಯ” ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು  “ಕೇವಲ ಸೆಕೆಂಡುಗಳ ಅಂತರದಲ್ಲಿ ನಮ್ಮ ಜೀವನವು ತಲೆಕೆಳಗಾಗಬಹುದು. ಹಾಗಾಗಿ ದೃತಿಗೆಡದೆ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯ” ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು “ಜೀವನದಲ್ಲಿ ಅಡೆತಡೆಗಳು, ಹೋರಾಟಗಳು ಇದ್ದೇ ಇರುತ್ತವೆ, ಆದರೆ ಜಯಿಸುವ ಛಲವನ್ನು ಕಳೆದುಕೊಳ್ಳಬಾರದು” ಎಂದು ಹೇಳಿದ್ದಾರೆ. ಇನ್ನೂ ಅನೇಕರು ಮೊಲದ ಬದುಕುವ ಛಲ ಮತ್ತು ತಂತ್ರಗಾರಿಕೆಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:29 pm, Wed, 18 October 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ