AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಚ್ಪನ್​ ಕಾ ಪ್ಯಾರ್​‘ ಹುಡುಗನಿಗೆ 23 ಲಕ್ಷದ ಕಾರು ಗಿಫ್ಟ್​ ಸಿಕ್ಕಿದೆ ಎಂಬ ಸುದ್ದಿಯ ಅಸಲಿಯತ್ತೇ ಬೇರೆ

ಸಹದೇವ್​ ‘ಬಚ್ಪನ್​ ಕಾ ಪ್ಯಾರ್..’​ ಹಾಡನ್ನು ಹಾಡಿದ್ದ. ಈ ಹಾಡು ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಸೆನ್ಸೇಶನ್​ ಸೃಷ್ಟಿಮಾಡಿತ್ತು.

‘ಬಚ್ಪನ್​ ಕಾ ಪ್ಯಾರ್​‘ ಹುಡುಗನಿಗೆ 23 ಲಕ್ಷದ ಕಾರು ಗಿಫ್ಟ್​ ಸಿಕ್ಕಿದೆ ಎಂಬ ಸುದ್ದಿಯ ಅಸಲಿಯತ್ತೇ ಬೇರೆ
‘ಬಚ್ಪನ್​ ಕಾ ಪ್ಯಾರ್​‘ ಹುಡುಗನಿಗೆ 23 ಲಕ್ಷದ ಕಾರು ಗಿಫ್ಟ್​ ಸಿಕ್ಕಿದೆ ಎಂಬ ಸುದ್ದಿಯ ಅಸಲಿಯತ್ತೇ ಬೇರೆ
TV9 Web
| Edited By: |

Updated on: Aug 12, 2021 | 5:11 PM

Share

 ಸೋಶಿಯಲ್​ ಮೀಡಿಯಾ ಇಂದು ಪವರ್​ಫುಲ್​ ಮಾಧ್ಯಮವಾಗಿ ಮಾರ್ಪಟ್ಟಿದೆ. ಯಾವುದೇ ವ್ಯಕ್ತಿ ರಾತ್ರಿ ಬೆಳಗಾಗುವುದರೊಳಗೆ ಖ್ಯಾತಿ ಪಡೆದುಕೊಳ್ಳಬಹುದು. ಅದೇ ರೀತಿ, ಹಲವು ವರ್ಷಗಳಿಂದ ಗಳಿಸಿದ ಖ್ಯಾತಿ ರಾತ್ರಿ ಕಳೆಯುವರೊಳಗೆ  ಮಣ್ಣು ಪಾಲಾಗಬಹುದು. ಅಷ್ಟು ದೊಡ್ಡ ಮಟ್ಟದಲ್ಲಿ ಸಾಮಾಜಿಕ ಜಾಲತಾಣ ಬೆಳೆದುಕೊಂಡಿದೆ. ಇದಕ್ಕೆ ತಾಜಾ ಉದಾಹರಣೆ ಚತ್ತೀಸ್​ಗಢದ ಹುಡುಗ ಸುಹ್​ದೇವ್​ ಡಿರ್ಡೋ. ಈತ ‘ಬಚ್ಪನ್​ ಕಾ ಪ್ಯಾರ್..’ ಹಾಡಿನ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸೆನ್ಸೇಶನ್​ ಸೃಷ್ಟಿ ಮಾಡಿದ್ದ. ಸಹದೇವ್​ಗೆ ಎಂಜಿ ಹೆಕ್ಟರ್​ ಕಂಪನಿಯವರು ಕಾರು ನೀಡಿದ್ದಾರೆ ಎನ್ನಲಾದ ಫೋಟೋ ಒಂದು ಇತ್ತೀಚೆಗೆ ವೈರಲ್​ ಆಗಿತ್ತು. ಆದರೆ, ಇದರ ಅಸಲಿಯತ್ತು ಬೇರೆಯೇ ಇದೆ.

ಸಹದೇವ್​ ‘ಬಚ್ಪನ್​ ಕಾ ಪ್ಯಾರ್..’​ ಹಾಡನ್ನು ಹಾಡಿದ್ದ. ಈ ಹಾಡು ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಸೆನ್ಸೇಶನ್​ ಸೃಷ್ಟಿಮಾಡಿತ್ತು. ಅನೇಕರು ಬಾಲಕನ ಕಂಠವನ್ನು ಮೆಚ್ಚಿಕೊಂಡಿದ್ದರು. ರ್ಯಾಪರ್​ ಬಾದ್​ಶಾ ಕೂಡ ಸಹದೇವ್​ ಹಾಡಿಗೆ ತಲೆದೂಗಿದ್ದರು. ಸಹದೇವ್​​ನನ್ನು​ ಒಳಗೊಂಡ ‘ಬಚ್ಪನ್​ ಕ ಪ್ಯಾರ್​’ ಹೊಸ ಹಾಡನ್ನು ಕೂಡ ರಿಲೀಸ್​ ಮಾಡಿದ್ದರು ಬಾದ್​ಶಾ.

ಇದಾದ ಬೆನ್ನಲ್ಲೇ ಸಹದೇವ್​ ಎಂಜಿ ಹೆಕ್ಟರ್​ ಕಾರಿನ ಎದುರು ನಿಂತಿರುವ ಫೋಟೋ ವೈರಲ್​ ಆಗಿತ್ತು. ಅನೇಕರು ಸಹದೇವ್​ಗೆ 23 ಲಕ್ಷದ ಕಾರ್ ಗಿಫ್ಟ್​ ಆಗಿ ಸಿಕ್ಕಿದೆ ಎಂದು ಭಾವಿಸಿದ್ದರು. ಆದರೆ, ಅಸಲಿಯತ್ತು ಬೇರೆಯೇ ಇದೆ. ಸಹದೇವ್​ ಎಂಜಿ ಹೆಕ್ಟರ್​ ಶೋರೂಮ್​ಗೆ ಬಂದಿದ್ದು ನಿಜ. ಆದರೆ, ಆತನಿಗೆ ಕಾರು ಗಿಫ್ಟ್​ ಆಗಿ ಸಿಕ್ಕಿಲ್ಲ. ಬದಲಿಗೆ ಆತನಿಗೆ ಶೋರೂಮ್​ನಲ್ಲಿ 21 ಸಾವಿರ ರೂಪಾಯಿಯ ಚೆಕ್​ ವಿತರಣೆ ಮಾಡಲಾಗಿದೆ. ಈ ವಿಚಾರವನ್ನು ಎಂಜಿ ಹೆಕ್ಟರ್​ ಬ್ರ್ಯಾಂಚ್​ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ.

ಸಹದೇವ್​ ಚತ್ತೀಸ್​ಗಢದ ಸುಕ್ಮಾ ಜಿಲ್ಲೆಯವನು. ರಾತ್ರಿ ಬೆಳಗಾಗುವುದರೊಳಗೆ ಈತ ಸೋಶಿಯಲ್​ ಮೀಡಿಯಾ ಸ್ಟಾರ್​ ಆಗಿದ್ದ. ರಾನು ಮಂಡಲ್​ ಕೂಡ ಇದೇ ರೀತಿಯಲ್ಲಿ ಖ್ಯಾತಿ ಪಡೆದುಕೊಂಡಿದ್ದರು.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ನಲ್ಲಿ ಮಣಿರತ್ನಂ ಧಮಾಕಾ; ‘ನವರಸ’ ವೆಬ್​ ಸಿರೀಸ್​ ಟ್ರೇಲರ್​ನಲ್ಲಿ ಘಟಾನುಘಟಿಗಳ ಸಂಗಮ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ