Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಗನ ಮೃತ ದೇಹ ಕಂಡು ದಂಗಾದ ವೈದ್ಯ; ವಿಡಿಯೋ ವೈರಲ್​​

Israel Hamas War: ಪ್ಯಾಲೆಸ್ತೀನ್ ವೈದ್ಯರೊಬ್ಬರು ಹಗಲಿರುಳು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದಾಗ ಸ್ಟ್ರೆಚರ್ ನಲ್ಲಿದ್ದ ಸ್ವಂತ ಮಗನ ಮೃತದೇಹವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಈ ವೈದ್ಯರ ಮಗ ಸಾವನ್ನಪ್ಪಿರುವುದು ತಿಳಿದುಬಂದಿದೆ.

Video Viral: ಮಗನ ಮೃತ ದೇಹ ಕಂಡು ದಂಗಾದ ವೈದ್ಯ; ವಿಡಿಯೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on: Oct 19, 2023 | 6:44 PM

ಇಸ್ರೇಲ್ ಮತ್ತು ಹಮಾಸ್ ನಡುವಿನ ವಿಧ್ವಂಸಕ ಯುದ್ಧವು 12 ನೇ ದಿನವೂ ಮುಂದುವರಿದಿದೆ. ಇದೇ ವೇಳೆ ಗಾಯಾಳುಗಳ ಚಿಕಿತ್ಸೆಯಲ್ಲಿ ಹಗಲಿರುಳು ಶ್ರದ್ಧೆಯಿಂದ ದುಡಿಯುತ್ತಿದ್ದ ಪ್ಯಾಲೆಸ್ತೀನ್ ವೈದ್ಯರೊಬ್ಬರ ಸ್ಟ್ರೆಚರ್ ನಲ್ಲಿದ್ದ ಸ್ವಂತ ಮಗನ ಮೃತದೇಹವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಇಸ್ರೇಲ್​​​ ವೈಮಾನಿಕ ದಾಳಿಯಲ್ಲಿ ಈ ವೈದ್ಯರ ಮಗ ಸಾವನ್ನಪ್ಪಿದ್ದಾನೆ. ಮಗನ ಶವ ನೋಡುತ್ತಿದ್ದಂತೆ ಶಾಕ್​​ಗೆ ಒಳಗಾದ ವೈದ್ಯನ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಇಸ್ರೇಲ್ ಪ್ರಸ್ತುತ ದಾಳಿಗೊಳಗಾಗುತ್ತಿರುವ ಗಾಜಾ ಪಟ್ಟಿಯಲ್ಲಿ ವೈದ್ಯರ ಕುಟುಂಬ ವಾಸಿಸುತ್ತಿದ್ದು, ಕೆಳ ದಿನಗಳಿಂದ ನಿರಂತರವಾಗಿ ವೈಮಾನಿಕ ದಾಳಿಯಿಂದ ವೈದ್ಯರ ಕುಟುಂಬ ಕಂಗಾಲಾಗಿತ್ತು. ಇದೀಗಾ ಕುಟುಂಬದಲ್ಲಿ ಮಗುವೊಂದು ಸಾವನ್ನಪ್ಪಿದ್ದು, ಕುಟುಂಬದ ಹಲವು ಮಂದಿ ಗಾಯಗೊಂಡಿದ್ದಾರೆ. ವೈರಲ್ ಆಗಿರುವ ಕ್ಲಿಪ್‌ನಲ್ಲಿ, ಗಾಯಾಳುಗಳನ್ನು ಉಪಚರಿಸುವಾಗ, ಸ್ಟ್ರೆಚರ್‌ನಲ್ಲಿ ಸ್ವಂತ ಮಗನ ಶವ ಕಾಣಿಸಿಕೊಂಡಾಗ, ಶಾಕ್​​​ಗೆ ಒಳಗಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ: ವೈದ್ಯರ ಎಡವಟ್ಟಿನಿಂದ ಎರಡು ವರ್ಷ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆದ ಮಹಿಳೆ

ಯುದ್ಧದ ಭೀಕರತೆಯನ್ನು ವಿವರಿಸುವ ಸುದ್ದಿ ಸಂಸ್ಥೆಗಳು, ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಅನೇಕ ನೋವಿನ ಕಥೆಗಳು ಹರಿದಾಡುತ್ತಿವೆ.ಎರಡು ದೇಶಗಳ ನಡುವಿನ ಯುದ್ಧದಲ್ಲಿ ಅಂತಿಮವಾಗಿ ನರಳುವುದು ಶ್ರೀಸಾಮಾನ್ಯರೇ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ನೋವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ