AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ: ಪಿಯಾನೋದಲ್ಲಿ ಜನಗಣಮನ ನುಡಿಸಿ ಗೌರವ ಸಲ್ಲಿಸಿದ ಇಸ್ರೇಲಿ ಕಾನ್ಸುಲ್ ಜನರಲ್

Republic Day : ಸರ್, ‘ಗಾಯೇ ತವ ಜಯ ಗಾಥಾ’ ಈ ಸಾಲನ್ನು ನೀವು ಮರೆತಿದ್ದೀರಿ ಎಂದು ಒಬ್ಬರು ಹೇಳಿದ್ದಕ್ಕೆ, ‘ಕ್ಷಮಿಸಿ ಮುಂದಿನ ಸಲ ಸರಿಯಾಗಿ ನುಡಿಸುವೆ. ಆದರೆ ನಿಮ್ಮ ರಾಷ್ಟ್ರಗೀತೆ ಬಹಳ ಚೆಂದವಿದೆ’ ಎಂದು ಕೊಬ್ಬಿ ಉತ್ತರಿಸಿದ್ದಾರೆ.

ಗಣರಾಜ್ಯೋತ್ಸವ: ಪಿಯಾನೋದಲ್ಲಿ ಜನಗಣಮನ ನುಡಿಸಿ ಗೌರವ ಸಲ್ಲಿಸಿದ ಇಸ್ರೇಲಿ ಕಾನ್ಸುಲ್ ಜನರಲ್
ಇಸ್ರೇಲಿ ಕಾನ್ಸುಲ್ ಜನರಲ್ ಕೊಬ್ಬಿ ಶೊಶಾನಿ ಜನಗಣ ಮನ ನುಡಿಸುತ್ತಿರುವುದು
TV9 Web
| Edited By: |

Updated on:Jan 27, 2023 | 12:35 PM

Share

Viral Video : ಪ್ರೀತಿಸುವುದು ಎಂದರೆ ನಮ್ಮ ನೆಲ ನಮ್ಮ ಸಂಸ್ಕೃತಿಯನ್ನಷ್ಟೇ ಅಲ್ಲ. ಅನ್ಯ ನೆಲವನ್ನೂ ಸಂಸ್ಕೃತಿಗಳನ್ನೂ ಗೌರವಿಸುವುದು. ಅಂದಾಗ ಮಾತ್ರ ಮಾನವೀಯತೆ ನಮ್ಮಲ್ಲಿ ಜಾಗೃತವಾಗಿದೆ ಎಂದರ್ಥ. ನಿನ್ನೆಯಷ್ಟೇ ಇಡೀ ದೇಶ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡಿದೆ. ಜಗತ್ತಿನಾದ್ಯಂತ ಅನೇಕರು ಆನ್​ಲೈನ್ ಮೂಲಕ ಕೂಡ ಈ ಸಂಭ್ರಮಕ್ಕೆ ಕಾರಣೀಭೂತರಾಗಿದ್ದಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಇಸ್ರೆಲ್​ನ ಕಾನ್ಸುಲ್ ಜನರಲ್​ ಕೊಬ್ಬಿ ಶೋಶಾನಿ 74ನೇ ಗಣರಾಜ್ಯೋತ್ಸವದ ದಿನದಂದು ಪಿಯಾನೋದಲ್ಲಿ ನಮ್ಮ ರಾಷ್ಟ್ರಗೀತೆ ಜನಗಣಮನ ನುಡಿಸಿ ಗೌರವ ಸಲ್ಲಿಸಿದರು.

‘ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸುಂದರವಾದ ರಾಷ್ಟ್ರಗೀತೆ ಜನಗಣಮನ ನುಡಿಸಲು ಪ್ರಯತ್ನಿಸಿದ್ದೇನೆ’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಟ್ವೀಟ್ ಮಾಡಿದ್ದಾರೆ. 12 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 1,600 ಜನರು ರೀಟ್ವೀಟ್ ಮಾಡಿದ್ದಾರೆ. 11, 300 ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ.

ಇದನ್ನೂ ಓದಿ : ಯಾರಿಗೆ ಬೇಕು ರುಚಿರುಚಿ ಗರಿಗರಿಯಾದ ಮಿನಿಯೇಚರ್ ಜಿಲೇಬಿ

ಸರ್, ಗಾಯೇ ತವ ಜಯ ಗಾಥಾ ಈ ಸಾಲನ್ನು ನುಡಿಸುವುದನ್ನು ನೀವು ಮರೆತಿದ್ದೀರಿ ಎಂದು ಒಬ್ಬರು ಹೇಳಿದ್ದಾರೆ. ಕ್ಷಮಿಸಿ ಮುಂದಿನ ಸಲ ಸರಿಯಾಗಿ ನುಡಿಸುವೆ. ಆದರೆ ನಿಮ್ಮ ರಾಷ್ಟ್ರಗೀತೆ ಬಹಳ ಚೆನ್ನಾಗಿದೆ ಎಂದು ಕೊಬ್ಬಿ ಉತ್ತರಿಸಿದ್ದಾರೆ. ತುಂಬಾ ಹೃದಯಸ್ಪರ್ಶಿಯಾಗಿದೆ, ಧನ್ಯವಾದ ಇಸ್ರೇಲ್​ ಎಂದಿದ್ದಾರೆ ಒಬ್ಬರು. ಜೈಹಿಂದ್​ ಎಂದು ಅನೇಕ ಭಾರತೀಯರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಆನ್​ಲೈನ್​ ಆರ್ಡರ್​; ಸ್ಯಾನಿಟರಿ ಪ್ಯಾಡ್​ ಜೊತೆ ಚಾಕೊಲೇಟ್​ ಕುಕೀಸ್​ ಪಡೆದ ಮಹಿಳೆ

ಪರಸ್ಪರ ಸಂಬಂಧವನ್ನು ಕಾಪಾಡಿಕೊಳ್ಳಲು ಹೀಗೆ ಸಣ್ಣಪುಟ್ಟ ನಡೆಗಳಿಂದ ಗೌರವಿಸುವುದನ್ನು ಕಲಿಯಬೇಕು. ನೀವು ಸರಿಯಾದ ಹಾದಿಯಲ್ಲಿದ್ದೀರಿ ಸರ್ ಎಂದು ಕೆಲವರು ಹೇಳಿದ್ದಾರೆ. ನಿಜಕ್ಕೂ ನಮ್ಮ ರಾಷ್ಟ್ರಗೀತೆ ಬಹಳ ಚೆನ್ನಾಗಿದೆ, ನಿಮ್ಮ ಈ ಪ್ರಯತ್ನ ಶ್ಲಾಘನೀಯ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:35 pm, Fri, 27 January 23

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ