AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ: ಪಿಯಾನೋದಲ್ಲಿ ಜನಗಣಮನ ನುಡಿಸಿ ಗೌರವ ಸಲ್ಲಿಸಿದ ಇಸ್ರೇಲಿ ಕಾನ್ಸುಲ್ ಜನರಲ್

Republic Day : ಸರ್, ‘ಗಾಯೇ ತವ ಜಯ ಗಾಥಾ’ ಈ ಸಾಲನ್ನು ನೀವು ಮರೆತಿದ್ದೀರಿ ಎಂದು ಒಬ್ಬರು ಹೇಳಿದ್ದಕ್ಕೆ, ‘ಕ್ಷಮಿಸಿ ಮುಂದಿನ ಸಲ ಸರಿಯಾಗಿ ನುಡಿಸುವೆ. ಆದರೆ ನಿಮ್ಮ ರಾಷ್ಟ್ರಗೀತೆ ಬಹಳ ಚೆಂದವಿದೆ’ ಎಂದು ಕೊಬ್ಬಿ ಉತ್ತರಿಸಿದ್ದಾರೆ.

ಗಣರಾಜ್ಯೋತ್ಸವ: ಪಿಯಾನೋದಲ್ಲಿ ಜನಗಣಮನ ನುಡಿಸಿ ಗೌರವ ಸಲ್ಲಿಸಿದ ಇಸ್ರೇಲಿ ಕಾನ್ಸುಲ್ ಜನರಲ್
ಇಸ್ರೇಲಿ ಕಾನ್ಸುಲ್ ಜನರಲ್ ಕೊಬ್ಬಿ ಶೊಶಾನಿ ಜನಗಣ ಮನ ನುಡಿಸುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Jan 27, 2023 | 12:35 PM

Share

Viral Video : ಪ್ರೀತಿಸುವುದು ಎಂದರೆ ನಮ್ಮ ನೆಲ ನಮ್ಮ ಸಂಸ್ಕೃತಿಯನ್ನಷ್ಟೇ ಅಲ್ಲ. ಅನ್ಯ ನೆಲವನ್ನೂ ಸಂಸ್ಕೃತಿಗಳನ್ನೂ ಗೌರವಿಸುವುದು. ಅಂದಾಗ ಮಾತ್ರ ಮಾನವೀಯತೆ ನಮ್ಮಲ್ಲಿ ಜಾಗೃತವಾಗಿದೆ ಎಂದರ್ಥ. ನಿನ್ನೆಯಷ್ಟೇ ಇಡೀ ದೇಶ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡಿದೆ. ಜಗತ್ತಿನಾದ್ಯಂತ ಅನೇಕರು ಆನ್​ಲೈನ್ ಮೂಲಕ ಕೂಡ ಈ ಸಂಭ್ರಮಕ್ಕೆ ಕಾರಣೀಭೂತರಾಗಿದ್ದಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಇಸ್ರೆಲ್​ನ ಕಾನ್ಸುಲ್ ಜನರಲ್​ ಕೊಬ್ಬಿ ಶೋಶಾನಿ 74ನೇ ಗಣರಾಜ್ಯೋತ್ಸವದ ದಿನದಂದು ಪಿಯಾನೋದಲ್ಲಿ ನಮ್ಮ ರಾಷ್ಟ್ರಗೀತೆ ಜನಗಣಮನ ನುಡಿಸಿ ಗೌರವ ಸಲ್ಲಿಸಿದರು.

‘ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸುಂದರವಾದ ರಾಷ್ಟ್ರಗೀತೆ ಜನಗಣಮನ ನುಡಿಸಲು ಪ್ರಯತ್ನಿಸಿದ್ದೇನೆ’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಟ್ವೀಟ್ ಮಾಡಿದ್ದಾರೆ. 12 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 1,600 ಜನರು ರೀಟ್ವೀಟ್ ಮಾಡಿದ್ದಾರೆ. 11, 300 ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ.

ಇದನ್ನೂ ಓದಿ : ಯಾರಿಗೆ ಬೇಕು ರುಚಿರುಚಿ ಗರಿಗರಿಯಾದ ಮಿನಿಯೇಚರ್ ಜಿಲೇಬಿ

ಸರ್, ಗಾಯೇ ತವ ಜಯ ಗಾಥಾ ಈ ಸಾಲನ್ನು ನುಡಿಸುವುದನ್ನು ನೀವು ಮರೆತಿದ್ದೀರಿ ಎಂದು ಒಬ್ಬರು ಹೇಳಿದ್ದಾರೆ. ಕ್ಷಮಿಸಿ ಮುಂದಿನ ಸಲ ಸರಿಯಾಗಿ ನುಡಿಸುವೆ. ಆದರೆ ನಿಮ್ಮ ರಾಷ್ಟ್ರಗೀತೆ ಬಹಳ ಚೆನ್ನಾಗಿದೆ ಎಂದು ಕೊಬ್ಬಿ ಉತ್ತರಿಸಿದ್ದಾರೆ. ತುಂಬಾ ಹೃದಯಸ್ಪರ್ಶಿಯಾಗಿದೆ, ಧನ್ಯವಾದ ಇಸ್ರೇಲ್​ ಎಂದಿದ್ದಾರೆ ಒಬ್ಬರು. ಜೈಹಿಂದ್​ ಎಂದು ಅನೇಕ ಭಾರತೀಯರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಆನ್​ಲೈನ್​ ಆರ್ಡರ್​; ಸ್ಯಾನಿಟರಿ ಪ್ಯಾಡ್​ ಜೊತೆ ಚಾಕೊಲೇಟ್​ ಕುಕೀಸ್​ ಪಡೆದ ಮಹಿಳೆ

ಪರಸ್ಪರ ಸಂಬಂಧವನ್ನು ಕಾಪಾಡಿಕೊಳ್ಳಲು ಹೀಗೆ ಸಣ್ಣಪುಟ್ಟ ನಡೆಗಳಿಂದ ಗೌರವಿಸುವುದನ್ನು ಕಲಿಯಬೇಕು. ನೀವು ಸರಿಯಾದ ಹಾದಿಯಲ್ಲಿದ್ದೀರಿ ಸರ್ ಎಂದು ಕೆಲವರು ಹೇಳಿದ್ದಾರೆ. ನಿಜಕ್ಕೂ ನಮ್ಮ ರಾಷ್ಟ್ರಗೀತೆ ಬಹಳ ಚೆನ್ನಾಗಿದೆ, ನಿಮ್ಮ ಈ ಪ್ರಯತ್ನ ಶ್ಲಾಘನೀಯ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:35 pm, Fri, 27 January 23

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ