Video: ಸ್ವಾತಂತ್ರೋತ್ಸವದ ಈ ಸುದಿನದಂದು ಗಗನಯಾನ ಕಾರ್ಯಕ್ರಮವನ್ನು ಪ್ರದರ್ಶಿಸಿದ ಇಸ್ರೋ

78ನೇ ಸ್ವಾತಂತ್ರ್ಯ ದಿನದಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಗಗನ್ ಯಾನ್ ಕಾರ್ಯಕ್ರಮದ ಭಾಗವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹಾರಲು ತಯಾರಾಗಿರುವ ಗಗನಯಾತ್ರಿಗಳ ಮೊದಲ ಬ್ಯಾಚ್‌ನ ತರಬೇತಿಯನ್ನು ಪ್ರದರ್ಶಿಸಿದೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Video: ಸ್ವಾತಂತ್ರೋತ್ಸವದ ಈ ಸುದಿನದಂದು ಗಗನಯಾನ ಕಾರ್ಯಕ್ರಮವನ್ನು ಪ್ರದರ್ಶಿಸಿದ ಇಸ್ರೋ
ಇಸ್ರೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 15, 2024 | 5:49 PM

ಮಹತ್ವಾಕಾಂಕ್ಷೆಯ ಗಗನ್ ಯಾನ್ ಕಾರ್ಯಕ್ರಮದ ಭಾಗವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಿದಂತಹ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹಾರಲು ತಯಾರಾಗಿರುವ ಗಗನಯಾತ್ರಿಗಳ ಮೊದಲ ಬ್ಯಾಚ್‌ನ ತರಬೇತಿಯನ್ನು ಸ್ವಾತಂತ್ರ ದಿನದ ಅಂಗವಾಗಿ ಇಂದು ಇಸ್ರೋ ಪ್ರದರ್ಶಿಸಿದೆ. ಈ ಗಗನಯಾನ ಮಿಷನ್ ಕಾರ್ಯಕ್ರಮ ಪ್ರದರ್ಶನದ ವಿಡಿಯೋವನ್ನು ಇಸ್ರೋ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಇಸ್ರೋದ ಬಹು ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ, ಮೂರು ದಿನಗಳ ಕಾರ್ಯಾಚರಣೆಯಲ್ಲಿ ಮೂವರು ಸಿಬ್ಬಂದಿಯನ್ನು, 400 ಕಿಮೀ ಕಕ್ಷೆಗೆ ಉಡಾಯಿಸುವ ಮೂಲಕ ಮಾನವ ಸಹಿತ ಬಾಹ್ಯಾಕಾಶ ಹಾರಾಟದ ಸಾಮರ್ಥ್ಯವನ್ನು ಪ್ರದರ್ಶಿಸಿ, ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರಲಾಗುವ ಯೋಜನೆಯಾಗಿದೆ. ಈ ಗಗನಯಾನಿಗಳು ಇರುವ ಕ್ಯಾಪ್ಸೂಲ್ ಹೊತ್ತ ರಾಕೆಟ್ 2025ಕ್ಕೆ ಗಗನಕ್ಕೆ ಚಿಮ್ಮಲಿದೆ. ಈಗಾಗಲೇ ಗಗನಯಾತ್ರಿಗಳ ಗ್ರೂಪ್ ಕ್ಯಾಪ್ಟನ್‌ಗಳಾದ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಅವರು ಬೆಂಗಳೂರಿನ ಮಾನವ ಬಾಹ್ಯಾಕಾಶ ಹಾರಾಟ ಕೇಂದ್ರದಲ್ಲಿ ಮತ್ತು ಮಾಸ್ಕೋದ ಸ್ಟಾರ್ ಸಿಟಿಯಲ್ಲಿ ಯೂರಿ ಗಗಾರಿನ್ ಗಗನಯಾತ್ರಿ ತರಬೇತಿ ಕೇಂದ್ರದಲ್ಲಿ ಮೂರು ವರ್ಷಗಳ ತರಬೇತಿಯನ್ನು ಪಡೆದಿದ್ದಾರೆ. ಇಂದು ಈ ನಾಲ್ಕು ಗಗನಯಾನಿಗಳು ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್ ಕಾರ್ಯಕ್ರಮವನ್ನು ಪ್ರದರ್ಶಿಸಿದರು.

ಈ ಕುರಿತ ಪೋಸ್ಟ್ ಒಂದನ್ನು ಇಸ್ರೋ (ISISRO ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, “ಆತ್ಮನಿರ್ಭರ ಭಾರತಕ್ಕೆ ಸಾಕ್ಷಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ. ವೈರಲ್ ವೀಡಿಯೋದಲ್ಲಿ ಮಹತ್ವಾಕಾಂಕ್ಷೆಯ ಗಗನ್ ಯಾನ್ ಕಾರ್ಯಕ್ರಮದ ಭಾಗವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹಾರಲು ತಯಾರಾಗಿರುವ ಗಗನಯಾತ್ರಿಗಳ ಮೊದಲ ಬ್ಯಾಚ್‌ನ ತರಬೇತಿಯನ್ನು ಪ್ರದರ್ಶಿಸಿದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಕಲಚೇತನ ವ್ಯಕ್ತಿಯ ಮೇಲೆ ದರ್ಪ ತೋರಿದ ರೈಲ್ವೆ ಗಾರ್ಡ್

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವೀಡಿಯೋ 63 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಹೆಮ್ಮೆಯ ಸಂಗತಿ’ ಎಂಬ ಕಾಮೆಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ ಜೈ ಹಿಂದ್’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್