AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಸಮೋಸಾ ತಿಂದ ಇಟಾಲಿಯನ್ ವ್ಯಕ್ತಿ; ಆತನ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ

ಇಟಾಲಿಯನ್ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ಈ ಸಮೋಸಾ ತಿಂಡಿಯನ್ನು ಪ್ರಯತ್ನಿಸುತ್ತಿರುವ ವಿಡಿಯೋ ಒಂದು ಹರದಾಡುತ್ತಿದ್ದು, ಅವರ ಪ್ರತಿಕ್ರಿಯೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮೊದಲ ಬಾರಿಗೆ ಸಮೋಸಾ ತಿಂದ ಇಟಾಲಿಯನ್ ವ್ಯಕ್ತಿ; ಆತನ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ
ಸಮೋಸಾ ತಿನ್ನುತ್ತಿರುವ ಇಟಾಲಿಯನ್ ವ್ಯಕ್ತಿ.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 26, 2022 | 2:22 PM

ವೈರಲ್ ವಿಡಿಯೋ: ಸಮೋಸಾ ಅತ್ಯಂತ ರುಚಿಕರವಾದ ಮತ್ತು ಪ್ರಸಿದ್ಧವಾದ ಭಾರತೀಯ ತಿಂಡಿಗಳಲ್ಲಿ ಒಂದು. ಬೀದಿ ವ್ಯಾಪಾರಿಗಳಿಂದ ಹಿಡಿದು ದಿನಸಿ ಅಂಗಡಿಗಳವರೆಗೆ, ರೆಸ್ಟೋರೆಂಟ್‌ಗಳಲ್ಲಿನ ಮೆನುವಿನವರೆಗೆ, ರುಚಿಕರವಾದ ಸಮೋಸಾ ಎಲ್ಲೆಡೆ ಲಭ್ಯವಿರುತ್ತದೆ. ಭಾರತೀಯರು ಊಟ ಬಿಡುತ್ತಾರೆಯೇ ಹೊರತು ಸಮೋಸಾ ತಿನ್ನುವುದನ್ನು ಮಾತ್ರ ಬಿಡುವುದಿಲ್ಲ.  ಭಾರತದ ಜನರು ಈ ಬಹುಮುಖ ತಿಂಡಿಯನ್ನು ಮೆಚ್ಚುವುದಷ್ಟೇ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರೀತಿಸುತ್ತಾರೆ ಮತ್ತು ಆನಂದಿಸುತ್ತಾರೆ. ಇದೀಗ, ಇಟಾಲಿಯನ್ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ಈ ಸಮೋಸಾ ತಿಂಡಿಯನ್ನು ಪ್ರಯತ್ನಿಸುತ್ತಿರುವ ವಿಡಿಯೋ ಒಂದು ಹರದಾಡುತ್ತಿದ್ದು, ಅವರ ಪ್ರತಿಕ್ರಿಯೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಅಮಿತ್ ಮತ್ತು ಆಂಬ್ರಾ ಎಂಬ ಭಾರತೀಯ-ಇಟಾಲಿಯನ್ ದಂಪತಿಗಳು ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೊದಲ್ಲಿ, ಆಂಬ್ರಾ ಅವರ ತಂದೆಯಾಗಿರುವ ಇಟಾಲಿಯನ್ ವ್ಯಕ್ತಿ, ಸಮೋಸಾದ ಮೇಲೆ ಸ್ವಲ್ಪ ಹಸಿರು ಚಟ್ನಿ ಹಾಕಿಕೊಂಡು ಕಚ್ಚಿ ತಿನ್ನುತ್ತಿರುವುದನ್ನು ಕಾಣಬಹುದು. ಕೊನೆಯಲ್ಲಿ ಅವರು ಸಮೋಸಾ ತಿಂದ ಖುಷಿಗೆ ನೃತ್ಯ ಮಾಡಿದ್ದು, ಭಾರತೀಯ ರುಚಿಕರವಾದ ತಿಂಡಿಯನ್ನು ಅವರು ಸಂಪೂರ್ಣವಾಗಿ ಇಷ್ಟಪಟ್ಟಿದ್ದಾರೆಂದು ಕಾಣುತ್ತದೆ.

ಈ ವಿಡಿಯೋ ವೈರಲ್ ಆದಾಗಿನಿಂದ ಅನೇಕ ಭಾರತೀಯರು ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಇಷ್ಟಪಟ್ಟಿದ್ದಾರೆ ಕೂಡ. ನೆಟ್ಟಿಗರಂತ್ತು ಹಾರ್ಟ್​ ಮತ್ತು ಎಮೋಜಿಗಳನ್ನು ಕಾಮೆಂಟ್ ಮಾಡಿದ್ದಾರೆ. ಇತರರು ಇತರೇ ಭಾರತೀಯ ತಿಂಡಿಗಳು ಮತ್ತು ಭಕ್ಷ್ಯಗಳನ್ನು ಪ್ರಯತ್ನಿಸಲು ಸಹ ಹೇಳಿದ್ದಾರೆ. ಮತ್ತೊಬ್ಬರು ಸರ್​ಗೆ ಪಾನಿಪುರಿ, ಪಾವ್​ಭಾಜಿ, ಇಡ್ಲಿ, ಧೋಸಾ, ಖಮನ್ ಧೋಕಲಾ ಇತ್ಯಾದಿ ಭಾರಿತೀಯ ತಿನಿಸುಗಳನ್ನು ಪ್ರಯತ್ನಿಸಲು ಹೇಳಿದ್ದಾರೆ.

ಇದನ್ನೂ ಓದಿ;

Viral Video; ಸರ್ಕಸ್​ ವೇಳೆ 20 ಅಡಿ ಎತ್ತರದಿಂದ ಬಿದ್ದ ಯುವಕ; ಕೂದಲೆಳೆ ಅಂತರದಲ್ಲಿ ಪಾರು

ಬ್ಯಾಂಕ್​ ಸರ್ವರ್​ ಹ್ಯಾಕ್​; 128 ಖಾತೆಗಳಿಗೆ 12 ಕೋಟಿ ರೂ.ಗಳನ್ನು ವರ್ಗಾಯಿಸಿಕೊಂಡ ವಂಚಕರು

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ