AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 65 ಪುಷ್ ಅಪ್ಸ್ ಮಾಡಿದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್; ಇಲ್ಲಿದೆ ವಿಡಿಯೋ

ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ಅವರು ಲಡಾಖ್‌ನಲ್ಲಿ ಮೈನಸ್​ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್ ಅಪ್ಸ್​ಗಳನ್ನು ಪೂರ್ಣಗೊಳಿಸಿದ್ದಾರೆ.

ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 65 ಪುಷ್ ಅಪ್ಸ್ ಮಾಡಿದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್; ಇಲ್ಲಿದೆ ವಿಡಿಯೋ
ರತನ್ ಸಿಂಗ್ ಸೋನಾಲ್
TV9 Web
| Edited By: |

Updated on:Feb 23, 2022 | 9:49 AM

Share

ಲಡಾಖ್‌: 55 ವರ್ಷ ವಯಸ್ಸಿನ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ITBP) ಕಮಾಂಡೆಂಟ್ ರತನ್ ಸಿಂಗ್ ಸೋನಾಲ್(Ratan Singh Sonal ) ಅವರು ಲಡಾಖ್‌ನಲ್ಲಿ ಮೈನಸ್​ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್ ಅಪ್ಸ್​ಗಳನ್ನು(push-ups) ಪೂರ್ಣಗೊಳಿಸಿದ್ದಾರೆ. ಕೆಳಗಡೆ ಭೂಮಿಯ ಮೇಲೆ ವ್ಯಾಯಾಮ, ಯೋಗ ಮಾಡೋದೋ ದುಸ್ತರ, ಕಷ್ಟ. ಹಾಗಿರುವಾಗ ಹಿಮಾಲಯದ ಮೇಲೆ ಅದೂ ಮೈನಸ್ ​30 ಡಿಗ್ರಿ ತಂಪುಮಾನದಲ್ಲಿ, ಉಸಿರಾಡುದಕ್ಕೂ ಗಾಳಿ ಸಿಗದಂತಹ ಪ್ರದೇಶದಲ್ಲಿ ಹೀಗೆ ಪುಷ್​ ಅಪ್ಸ್​ ಮಾಡೋದು ಅಸಾಮಾನ್ಯವೇ ಸರಿ.

ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ನೇತೃತ್ವದ 6 ಜನರ ತಂಡವೊಂದು ಲಡಾಖ್‌ನಲ್ಲಿರುವ 20,177 ಅಡಿ ಎತ್ತರದ ಶಿಖರವನ್ನು ಏರಿತು. ಡಿವೈ ಕಮಾಂಡೆಂಟ್ ಅನೂಪ್ ನೇಗಿ ಗುಂಪಿನ ಉಪನಾಯಕರಾಗಿದ್ದರು. ಈ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್ ತಂಡವು ಯಾವುದೇ ವಿಶೇಷ ಪರ್ವತಾರೋಹಣ ಅಥವಾ ಪರ್ವತ ಚಾರಣದ ಉಪಕರಣಗಳು ಮತ್ತು ಇನ್ನಿತರ ವ್ಯವಸ್ಥೆಯನ್ನು ಬಳಸಲಿಲ್ಲ ಎಂಬುವುದು ವಿಶೇಷ.

ಇಂಡೋ-ಟಿಬೆಟಿಯನ್ ಬಾರ್ಡರ್​ನ ಪೊಲೀಸ್​ ಕೇಂದ್ರೀಯ ಪಡೆ ಫೆಬ್ರವರಿ 20 ರಂದು ಲಡಾಖ್‌ನ ಮೌಂಟ್ ಕರ್ಜೋಕ್ ಕಂಗ್ರಿಯನ್ನು ಏರಿದ್ದಾರೆ. ಫೆಬ್ರವರಿ 20 ರಂದು ಕನಿಷ್ಠ ತಾಪಮಾನವು ಮೈನಸ್​ 30 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಇದು ಇಂಡೋ-ಟಿಬೆಟಿಯನ್ ಬಾರ್ಡರ್​ ಪೊಲೀಸ್​ ಕೇಂದ್ರೀಯ ಪಡೆಯ ಕರ್ಝೋಕ್ ಕಂಗ್ರಿ ಪರ್ವತದ ಮೊದಲ ಆರೋಹಣವಾಗಿದೆ.

ಇದನ್ನೂ ಓದಿ: Viral Video: ಕಚ್ಚಾ ಬಾದಮ್ ಹಾಡಿಗೆ ನೃತ್ಯ ಮಾಡಿದ ‘ದಿ ಗ್ರೇಟ್ ಖಲಿ’; ವೈರಲ್​ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

Viral Video: ರಸ್ತೆ ಬದಿ ನಿಂತಿದ್ದ ಬೀದಿ ನಾಯಿಗೆ ಒದೆಯಲು ಹೋದವನಿಗೆ ಏನಾಯ್ತು ಗೊತ್ತಾ?; ವಿಡಿಯೋ ವೈರಲ್

Published On - 9:39 am, Wed, 23 February 22

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!