AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 65 ಪುಷ್ ಅಪ್ಸ್ ಮಾಡಿದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್; ಇಲ್ಲಿದೆ ವಿಡಿಯೋ

ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ಅವರು ಲಡಾಖ್‌ನಲ್ಲಿ ಮೈನಸ್​ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್ ಅಪ್ಸ್​ಗಳನ್ನು ಪೂರ್ಣಗೊಳಿಸಿದ್ದಾರೆ.

ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 65 ಪುಷ್ ಅಪ್ಸ್ ಮಾಡಿದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್; ಇಲ್ಲಿದೆ ವಿಡಿಯೋ
ರತನ್ ಸಿಂಗ್ ಸೋನಾಲ್
TV9 Web
| Updated By: preethi shettigar|

Updated on:Feb 23, 2022 | 9:49 AM

Share

ಲಡಾಖ್‌: 55 ವರ್ಷ ವಯಸ್ಸಿನ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ITBP) ಕಮಾಂಡೆಂಟ್ ರತನ್ ಸಿಂಗ್ ಸೋನಾಲ್(Ratan Singh Sonal ) ಅವರು ಲಡಾಖ್‌ನಲ್ಲಿ ಮೈನಸ್​ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್ ಅಪ್ಸ್​ಗಳನ್ನು(push-ups) ಪೂರ್ಣಗೊಳಿಸಿದ್ದಾರೆ. ಕೆಳಗಡೆ ಭೂಮಿಯ ಮೇಲೆ ವ್ಯಾಯಾಮ, ಯೋಗ ಮಾಡೋದೋ ದುಸ್ತರ, ಕಷ್ಟ. ಹಾಗಿರುವಾಗ ಹಿಮಾಲಯದ ಮೇಲೆ ಅದೂ ಮೈನಸ್ ​30 ಡಿಗ್ರಿ ತಂಪುಮಾನದಲ್ಲಿ, ಉಸಿರಾಡುದಕ್ಕೂ ಗಾಳಿ ಸಿಗದಂತಹ ಪ್ರದೇಶದಲ್ಲಿ ಹೀಗೆ ಪುಷ್​ ಅಪ್ಸ್​ ಮಾಡೋದು ಅಸಾಮಾನ್ಯವೇ ಸರಿ.

ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ನೇತೃತ್ವದ 6 ಜನರ ತಂಡವೊಂದು ಲಡಾಖ್‌ನಲ್ಲಿರುವ 20,177 ಅಡಿ ಎತ್ತರದ ಶಿಖರವನ್ನು ಏರಿತು. ಡಿವೈ ಕಮಾಂಡೆಂಟ್ ಅನೂಪ್ ನೇಗಿ ಗುಂಪಿನ ಉಪನಾಯಕರಾಗಿದ್ದರು. ಈ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್ ತಂಡವು ಯಾವುದೇ ವಿಶೇಷ ಪರ್ವತಾರೋಹಣ ಅಥವಾ ಪರ್ವತ ಚಾರಣದ ಉಪಕರಣಗಳು ಮತ್ತು ಇನ್ನಿತರ ವ್ಯವಸ್ಥೆಯನ್ನು ಬಳಸಲಿಲ್ಲ ಎಂಬುವುದು ವಿಶೇಷ.

ಇಂಡೋ-ಟಿಬೆಟಿಯನ್ ಬಾರ್ಡರ್​ನ ಪೊಲೀಸ್​ ಕೇಂದ್ರೀಯ ಪಡೆ ಫೆಬ್ರವರಿ 20 ರಂದು ಲಡಾಖ್‌ನ ಮೌಂಟ್ ಕರ್ಜೋಕ್ ಕಂಗ್ರಿಯನ್ನು ಏರಿದ್ದಾರೆ. ಫೆಬ್ರವರಿ 20 ರಂದು ಕನಿಷ್ಠ ತಾಪಮಾನವು ಮೈನಸ್​ 30 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಇದು ಇಂಡೋ-ಟಿಬೆಟಿಯನ್ ಬಾರ್ಡರ್​ ಪೊಲೀಸ್​ ಕೇಂದ್ರೀಯ ಪಡೆಯ ಕರ್ಝೋಕ್ ಕಂಗ್ರಿ ಪರ್ವತದ ಮೊದಲ ಆರೋಹಣವಾಗಿದೆ.

ಇದನ್ನೂ ಓದಿ: Viral Video: ಕಚ್ಚಾ ಬಾದಮ್ ಹಾಡಿಗೆ ನೃತ್ಯ ಮಾಡಿದ ‘ದಿ ಗ್ರೇಟ್ ಖಲಿ’; ವೈರಲ್​ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

Viral Video: ರಸ್ತೆ ಬದಿ ನಿಂತಿದ್ದ ಬೀದಿ ನಾಯಿಗೆ ಒದೆಯಲು ಹೋದವನಿಗೆ ಏನಾಯ್ತು ಗೊತ್ತಾ?; ವಿಡಿಯೋ ವೈರಲ್

Published On - 9:39 am, Wed, 23 February 22

ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ