AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 65 ಪುಷ್ ಅಪ್ಸ್ ಮಾಡಿದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್; ಇಲ್ಲಿದೆ ವಿಡಿಯೋ

ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ಅವರು ಲಡಾಖ್‌ನಲ್ಲಿ ಮೈನಸ್​ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್ ಅಪ್ಸ್​ಗಳನ್ನು ಪೂರ್ಣಗೊಳಿಸಿದ್ದಾರೆ.

ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 65 ಪುಷ್ ಅಪ್ಸ್ ಮಾಡಿದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್; ಇಲ್ಲಿದೆ ವಿಡಿಯೋ
ರತನ್ ಸಿಂಗ್ ಸೋನಾಲ್
TV9 Web
| Edited By: |

Updated on:Feb 23, 2022 | 9:49 AM

Share

ಲಡಾಖ್‌: 55 ವರ್ಷ ವಯಸ್ಸಿನ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ITBP) ಕಮಾಂಡೆಂಟ್ ರತನ್ ಸಿಂಗ್ ಸೋನಾಲ್(Ratan Singh Sonal ) ಅವರು ಲಡಾಖ್‌ನಲ್ಲಿ ಮೈನಸ್​ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್ ಅಪ್ಸ್​ಗಳನ್ನು(push-ups) ಪೂರ್ಣಗೊಳಿಸಿದ್ದಾರೆ. ಕೆಳಗಡೆ ಭೂಮಿಯ ಮೇಲೆ ವ್ಯಾಯಾಮ, ಯೋಗ ಮಾಡೋದೋ ದುಸ್ತರ, ಕಷ್ಟ. ಹಾಗಿರುವಾಗ ಹಿಮಾಲಯದ ಮೇಲೆ ಅದೂ ಮೈನಸ್ ​30 ಡಿಗ್ರಿ ತಂಪುಮಾನದಲ್ಲಿ, ಉಸಿರಾಡುದಕ್ಕೂ ಗಾಳಿ ಸಿಗದಂತಹ ಪ್ರದೇಶದಲ್ಲಿ ಹೀಗೆ ಪುಷ್​ ಅಪ್ಸ್​ ಮಾಡೋದು ಅಸಾಮಾನ್ಯವೇ ಸರಿ.

ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ನೇತೃತ್ವದ 6 ಜನರ ತಂಡವೊಂದು ಲಡಾಖ್‌ನಲ್ಲಿರುವ 20,177 ಅಡಿ ಎತ್ತರದ ಶಿಖರವನ್ನು ಏರಿತು. ಡಿವೈ ಕಮಾಂಡೆಂಟ್ ಅನೂಪ್ ನೇಗಿ ಗುಂಪಿನ ಉಪನಾಯಕರಾಗಿದ್ದರು. ಈ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್ ತಂಡವು ಯಾವುದೇ ವಿಶೇಷ ಪರ್ವತಾರೋಹಣ ಅಥವಾ ಪರ್ವತ ಚಾರಣದ ಉಪಕರಣಗಳು ಮತ್ತು ಇನ್ನಿತರ ವ್ಯವಸ್ಥೆಯನ್ನು ಬಳಸಲಿಲ್ಲ ಎಂಬುವುದು ವಿಶೇಷ.

ಇಂಡೋ-ಟಿಬೆಟಿಯನ್ ಬಾರ್ಡರ್​ನ ಪೊಲೀಸ್​ ಕೇಂದ್ರೀಯ ಪಡೆ ಫೆಬ್ರವರಿ 20 ರಂದು ಲಡಾಖ್‌ನ ಮೌಂಟ್ ಕರ್ಜೋಕ್ ಕಂಗ್ರಿಯನ್ನು ಏರಿದ್ದಾರೆ. ಫೆಬ್ರವರಿ 20 ರಂದು ಕನಿಷ್ಠ ತಾಪಮಾನವು ಮೈನಸ್​ 30 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಇದು ಇಂಡೋ-ಟಿಬೆಟಿಯನ್ ಬಾರ್ಡರ್​ ಪೊಲೀಸ್​ ಕೇಂದ್ರೀಯ ಪಡೆಯ ಕರ್ಝೋಕ್ ಕಂಗ್ರಿ ಪರ್ವತದ ಮೊದಲ ಆರೋಹಣವಾಗಿದೆ.

ಇದನ್ನೂ ಓದಿ: Viral Video: ಕಚ್ಚಾ ಬಾದಮ್ ಹಾಡಿಗೆ ನೃತ್ಯ ಮಾಡಿದ ‘ದಿ ಗ್ರೇಟ್ ಖಲಿ’; ವೈರಲ್​ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

Viral Video: ರಸ್ತೆ ಬದಿ ನಿಂತಿದ್ದ ಬೀದಿ ನಾಯಿಗೆ ಒದೆಯಲು ಹೋದವನಿಗೆ ಏನಾಯ್ತು ಗೊತ್ತಾ?; ವಿಡಿಯೋ ವೈರಲ್

Published On - 9:39 am, Wed, 23 February 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ