Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 65 ಪುಷ್ ಅಪ್ಸ್ ಮಾಡಿದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್; ಇಲ್ಲಿದೆ ವಿಡಿಯೋ

ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ಅವರು ಲಡಾಖ್‌ನಲ್ಲಿ ಮೈನಸ್​ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್ ಅಪ್ಸ್​ಗಳನ್ನು ಪೂರ್ಣಗೊಳಿಸಿದ್ದಾರೆ.

ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 65 ಪುಷ್ ಅಪ್ಸ್ ಮಾಡಿದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್; ಇಲ್ಲಿದೆ ವಿಡಿಯೋ
ರತನ್ ಸಿಂಗ್ ಸೋನಾಲ್
Follow us
TV9 Web
| Updated By: preethi shettigar

Updated on:Feb 23, 2022 | 9:49 AM

ಲಡಾಖ್‌: 55 ವರ್ಷ ವಯಸ್ಸಿನ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ITBP) ಕಮಾಂಡೆಂಟ್ ರತನ್ ಸಿಂಗ್ ಸೋನಾಲ್(Ratan Singh Sonal ) ಅವರು ಲಡಾಖ್‌ನಲ್ಲಿ ಮೈನಸ್​ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್ ಅಪ್ಸ್​ಗಳನ್ನು(push-ups) ಪೂರ್ಣಗೊಳಿಸಿದ್ದಾರೆ. ಕೆಳಗಡೆ ಭೂಮಿಯ ಮೇಲೆ ವ್ಯಾಯಾಮ, ಯೋಗ ಮಾಡೋದೋ ದುಸ್ತರ, ಕಷ್ಟ. ಹಾಗಿರುವಾಗ ಹಿಮಾಲಯದ ಮೇಲೆ ಅದೂ ಮೈನಸ್ ​30 ಡಿಗ್ರಿ ತಂಪುಮಾನದಲ್ಲಿ, ಉಸಿರಾಡುದಕ್ಕೂ ಗಾಳಿ ಸಿಗದಂತಹ ಪ್ರದೇಶದಲ್ಲಿ ಹೀಗೆ ಪುಷ್​ ಅಪ್ಸ್​ ಮಾಡೋದು ಅಸಾಮಾನ್ಯವೇ ಸರಿ.

ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ನೇತೃತ್ವದ 6 ಜನರ ತಂಡವೊಂದು ಲಡಾಖ್‌ನಲ್ಲಿರುವ 20,177 ಅಡಿ ಎತ್ತರದ ಶಿಖರವನ್ನು ಏರಿತು. ಡಿವೈ ಕಮಾಂಡೆಂಟ್ ಅನೂಪ್ ನೇಗಿ ಗುಂಪಿನ ಉಪನಾಯಕರಾಗಿದ್ದರು. ಈ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್ ತಂಡವು ಯಾವುದೇ ವಿಶೇಷ ಪರ್ವತಾರೋಹಣ ಅಥವಾ ಪರ್ವತ ಚಾರಣದ ಉಪಕರಣಗಳು ಮತ್ತು ಇನ್ನಿತರ ವ್ಯವಸ್ಥೆಯನ್ನು ಬಳಸಲಿಲ್ಲ ಎಂಬುವುದು ವಿಶೇಷ.

ಇಂಡೋ-ಟಿಬೆಟಿಯನ್ ಬಾರ್ಡರ್​ನ ಪೊಲೀಸ್​ ಕೇಂದ್ರೀಯ ಪಡೆ ಫೆಬ್ರವರಿ 20 ರಂದು ಲಡಾಖ್‌ನ ಮೌಂಟ್ ಕರ್ಜೋಕ್ ಕಂಗ್ರಿಯನ್ನು ಏರಿದ್ದಾರೆ. ಫೆಬ್ರವರಿ 20 ರಂದು ಕನಿಷ್ಠ ತಾಪಮಾನವು ಮೈನಸ್​ 30 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಇದು ಇಂಡೋ-ಟಿಬೆಟಿಯನ್ ಬಾರ್ಡರ್​ ಪೊಲೀಸ್​ ಕೇಂದ್ರೀಯ ಪಡೆಯ ಕರ್ಝೋಕ್ ಕಂಗ್ರಿ ಪರ್ವತದ ಮೊದಲ ಆರೋಹಣವಾಗಿದೆ.

ಇದನ್ನೂ ಓದಿ: Viral Video: ಕಚ್ಚಾ ಬಾದಮ್ ಹಾಡಿಗೆ ನೃತ್ಯ ಮಾಡಿದ ‘ದಿ ಗ್ರೇಟ್ ಖಲಿ’; ವೈರಲ್​ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

Viral Video: ರಸ್ತೆ ಬದಿ ನಿಂತಿದ್ದ ಬೀದಿ ನಾಯಿಗೆ ಒದೆಯಲು ಹೋದವನಿಗೆ ಏನಾಯ್ತು ಗೊತ್ತಾ?; ವಿಡಿಯೋ ವೈರಲ್

Published On - 9:39 am, Wed, 23 February 22

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ