AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೇರಿ ಮಿಟ್ಟೀ ಮೇ ಮಿಲ್ ಜಾವಾ’ ಹಾಡು ನುಡಿಸಿ ಕೊರೊನಾ ವಾರಿಯರ್ಸ್​ಗೆ ಕೃತಜ್ಞತೆ ಸಲ್ಲಿಸಿದ ಐಟಿಬಿಪಿ ಕಾನ್​ಸ್ಟೇಬಲ್​

ಜನರ ಜೀವ ಉಳಿಸುವ ಮೂಲಕ ಸ್ವತಃ ಈ ಜಗತ್ತಿಗೇ ವಿದಾಯ ಹೇಳಿದ ಕೊರೊನಾ ವಾರಿಯರ್ಸ್​ ನೆನಪಿಗಾಗಿ ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಬೇಸತ್ತ ಜನರನ್ನು ಪ್ರೋತ್ಸಾಹಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಓರ್ವರು​ ವಿಶೇಷವಾಗಿ ‘ತೇರಿ ಮಿಟ್ಟೀ ಮೇ ಮಿಲ್ ಜಾವಾ​’ ಹಾಡನ್ನು ನುಡಿಸಿದ್ದಾರೆ.

‘ತೇರಿ ಮಿಟ್ಟೀ ಮೇ ಮಿಲ್ ಜಾವಾ’ ಹಾಡು ನುಡಿಸಿ ಕೊರೊನಾ ವಾರಿಯರ್ಸ್​ಗೆ ಕೃತಜ್ಞತೆ ಸಲ್ಲಿಸಿದ ಐಟಿಬಿಪಿ ಕಾನ್​ಸ್ಟೇಬಲ್​
ಐಟಿಬಿಪಿ ಕಾನ್​ಸ್ಟೇಬಲ್​
shruti hegde
|

Updated on: May 24, 2021 | 1:15 PM

Share

ಕೊರೊನಾ ವೈರಸ್​ ವ್ಯಾಪಕಾಗಿ ಹರಡುತ್ತಿರುವ ಈ ಸಂರ್ಭದಲ್ಲಿ ರೋಗಿಗಳ ಚಿಕಿತ್ಸೆಗಾಗಿ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ವೈದ್ಯರಿಗೆ ಸಹಾಯಕರಾಗಿ ಹಾಗೂ ರೋಗಿಗಳ ಆರೈಕೆ ಮಾಡುತ್ತಾ ದಿನದ 24 ಗಂಟೆಯೂ ಕೂಡಾ ದಾದಿಯರು(ನರ್ಸ್​) ಆಸ್ಪತ್ರೆಗಳಲ್ಲಿ ದುಡಿಯುತ್ತಿದ್ದಾರೆ. ತಮ್ಮ ಕುಟುಂಬ, ಸಂಬಂಧಿಕರನ್ನು ಬಿಟ್ಟು ಆಸ್ಪತ್ರೆಯಲ್ಲಿಯೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಇನ್ನು ಕೆಲವರಿಗೆ ಚಿಕ್ಕ ವಯಸ್ಸಿನ ಮಕ್ಕಳಿವೆ. ಆ ಪುಟ್ಟ ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ರೋಗಿಗಳ ಆರೈಕೆಗಾಗಿ ಜತೆಗೆ ಕೊರೊನಾ ಸೋಂಕು ತಡೆಯುವುದಕ್ಕಾಗಿ ನಿರಂತರ ಪರಿಶ್ರಮದಲ್ಲಿದ್ದಾರೆ. ಅವರಿಗೆ ನಾವು ಎಷ್ಟು ಕೃತಜ್ಞತೆ ತಿಳಿಸಿದರೂ ಅದು ಕಡಿಮೆಯೇ ಸರಿ.

ದಿನ ಪೂರ್ತಿ ತಮ್ಮ ಕರ್ತವ್ಯಕ್ಕೆ ಬದ್ಧರಾಗಿ ಕೆಲಸ ನಿರ್ವಹಿಸುತ್ತಿದ್ದು, ಜನರ ಜೀವ ಉಳಿಸುವ ಮೂಲಕ ಸ್ವತಃ ಈ ಜಗತ್ತಿಗೇ ವಿದಾಯ ಹೇಳಿದ ಕೊರೊನಾ ವಾರಿಯರ್ಸ್​ ನೆನಪಿಗಾಗಿ ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಬೇಸತ್ತ ಜನರನ್ನು ಪ್ರೋತ್ಸಾಹಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಓರ್ವರು​ ವಿಶೇಷವಾಗಿ ‘ತೇರಿ ಮಿಟ್ಟೀ ಮೇ ಮಿಲ್ ಜಾವಾ​’ ಹಾಡನ್ನು ನುಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ನುಡಿದ ಹಾಡು ಭಾವಪೂರ್ಣವಾಗಿ ಮೂಡಿಬಂದಿದೆ.

ಇವರು ನುಡಿಸಿರುವ ಈ ಹಾಡು ಸೋಷಿಯಲ್​ ಮಿಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿದೆ. ವಾಸ್ತವಾಗಿ ಕೊರೊನಾ ಯುಗದಲ್ಲಿ ಕೆಂದ್ರ ಸಶಸ್ತ್ರ ಪೊಲೀಸ್​ ಪಡೆಗಳ 300ಕ್ಕೂ ಹೆಚ್ಚು ಸೈನಿಕರು ಸಾವಿಗೀಡಾಗಿದ್ದಾರೆ. ಅವರನ್ನು ನೆನೆಸಿಕೊಳ್ಳುತ್ತಾ ಐಟಿಬಿಪಿ ಕಾನ್​ಸ್ಟೇಬಲ್​ ಸ್ಯಾಕ್ಸೋಫೋನ್ ವಾದ್ಯದ​ ಮೂಲಕ ತೇರಿ ಮಿಟ್ಟೀ ಮೇ ಮಿಲ್ ಜಾವಾ​ ಹಾಡನ್ನು ಸುಂದರವಾಗಿ ನುಡಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆಯೇ ನೆಟ್ಟಿಗರಿಂದ ಕಾಮೆಂಟ್​ಗಳ ಸುರಿಮಳೆಯೇ ಬಂದಿದ್ದು, ಬಿಕ್ಕಟ್ಟಿನ ಸಮಯದಲ್ಲಿ ದೇಶದ ಸೈನಿಕರು ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶ ಸೇವೆಗಾಗಿ ನಿಲ್ಲುತ್ತಾರೆ ಎಂದು ಬರೆದುಕೊಂಡಿದ್ದಾರೆ. ಇನ್ನೋರ್ವ ಬಳಕೆದಾದರು, ಕೊರೊನಾ ಸಂದರ್ಭದಲ್ಲಿ ಅವರ ಜೀವವನ್ನು ಒತ್ತೆ ಇಟ್ಟು ಕೊರೊನಾ ವಾರಿಯರ್ಸ್​ ಆಗಿ ನಮ್ಮನ್ನು ನೋಡಿಕೊಂಡವರು ಯಾವಾಗೂ ನೆನಪಿನಲ್ಲಿರುತ್ತಾರೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ

ಕೊರೊನಾ ವಾರಿಯರ್ಸ್‌ಗೆ ಉಚಿತ ವಾಹನ ಸೇವೆ, ಎಲ್ಲಿ?

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!