AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಮ ಸ್ತೋತ್ರ ಪಠಿಸುತ್ತಾ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ರಾಮ ಭಕ್ತರು

ರಾಮ ಮಂದಿರದಲ್ಲಿ ಇದಾಗಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಇದಾಗಲೇ ಹೆಚ್ಚಿನ ಸಂಖ್ಯೆಯ ಭಕ್ತರು ಅಯೋಧ್ಯೆಗೆ ಪ್ರಯಾಣ ಹೊರಟಿದ್ದಾರೆ. ಅದೇ ರೀತಿ ಬೆಂಗಳೂರಿನ ರಾಮ ಭಕ್ತರ ತಂಡವೊಂದು ʼಶ್ರೀ ರಾಮ ಜಯ ರಾಮ ಜಯ ಜಯ ರಾಮʼ… ಎಂದು ರಾಮ ನಾಮವನ್ನು ಜಪಿಸುತ್ತಾ ಬೆಂಗಳೂರು ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ಪ್ರಯಾಣ ಹೊರಟಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

Viral Video: ರಾಮ ಸ್ತೋತ್ರ ಪಠಿಸುತ್ತಾ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ರಾಮ ಭಕ್ತರು
ಮಾಲಾಶ್ರೀ ಅಂಚನ್​
| Edited By: |

Updated on: Jan 18, 2024 | 12:41 PM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಒಂದು ಪುಣ್ಯ ಕಾರ್ಯದಲ್ಲಿ ಭಾಗವಹಿಸಲು ಸಹಸ್ತ್ರಾರು ಸಂಖ್ಯೆಯಲ್ಲಿ ರಾಮ ಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಇದಾಗಲೇ ಕೆಲವೊಬ್ಬ ರಾಮ ಭಕ್ತರು ತಮ್ಮ ಊರುಗಳಿಂದ ಪಾದಯಾತ್ರೆಯ ಮೂಲಕವೇ ಅಯೋಧ್ಯೆ ಪ್ರಯಾಣವನ್ನು ಆರಂಭಿಸಿದ್ದಾರೆ. ಅದೇ ರೀತಿ ಇಲ್ಲೊಂದು ರಾಮ ಭಕ್ತರ ತಂಡ ಶ್ರೀ ರಾಮನ ಸ್ತೋತ್ರಗಳನ್ನು ಪಠಿಸುತ್ತಾ ಬೆಂಗಳೂರಿನ ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.  ಹೌದು ಬೆಂಗಳೂರು ಟು ಅಯೋಧ್ಯೆ ಸಂಪರ್ಕಿಸುವ ಮೊದಲ ವಿಮಾನ ಯಾನದಲ್ಲಿ ಅವರು ಅಯೋಧ್ಯೆಗೆ  ಪ್ರಯಾಣ ಬೆಳೆಸಿದ್ದಾರೆ.

ಇದೀಗ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭ ಆಗಿರುವ ಹೊತ್ತಿನಲ್ಲಿ ಬೆಂಗಳೂರು-ಅಯೋಧ್ಯೆ ನಡುವಣ ವಿಮಾನ ಪ್ರಯಾಣ ಆರಂಭವಾಗಿದ್ದು, ಈ ಬೆಂಗಳೂರು ಟು ಅಯೋಧ್ಯೆ ಸಂಪರ್ಕಿಸುವ ವಿಮಾನಯಾನಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ್ ನಿನ್ನೆ ಚಾಲನೆ ನೀಡದರು. ಈ ಮೊದಲ  ವಿಮಾನಯಾನದಲ್ಲಿ ಬೆಂಗಳೂರಿನಿಂದ ರಾಮ ಭಕ್ತರ ತಂಡವೊಂದು ರಾಮ ನಾಮ ಜಪಿಸುತ್ತಾ ಅಯೋಧ್ಯೆಗೆ ಪ್ರಯಾಣಿಸಿದ್ದಾರೆ.

ಈ ವಿಡಿಯೋ ತುಣುಕನ್ನು ಸುದ್ದಿ ಸಂಸ್ಥೆ ANI ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದು, ʼಬೆಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣಿಸುವಾಗ ಬೆಂಗಳೂರಿನ ರಾಮ ಭಕ್ತರ ತಂಡವೊಂದು ರಾಮ ನಾಮ ಜಪಿಸುತ್ತಿರುವ ದೃಶ್ಯ; ಕೇಂದ್ರ ನಾಗರಿಕ ವಿಮಾನದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ್ ಅವರು ಬೆಂಗಳೂರು, ಕೊಲ್ಕತ್ತಾ, ಮತ್ತು ಅಯೋಧ್ಯೆ ನಡುವಿನ ಮೊದಲ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ನಿನ್ನೆ ಚಾಲನೆ ನೀಡಿದರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ.

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಸುದ್ದಿ ಸಂಸ್ಥೆ ANI ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಂಗಳೂರಿನಿಂದ ಅಯೋಧ್ಯೆಗೆ ಹೊರಟಿರುವ ಭಕ್ತವೃಂದವೊಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶ್ರೀರಾಮ ಜಯ ರಾಮ ಜಯ ಜಯ ರಾಮ… ಎಂದು ರಾಮ ನಾಮ ಜಪಿಸುತ್ತಾ ವಿಮಾನವನ್ನು ಏರುತ್ತಿರು ದೃಶ್ಯವನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ