AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಮ ಸ್ತೋತ್ರ ಪಠಿಸುತ್ತಾ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ರಾಮ ಭಕ್ತರು

ರಾಮ ಮಂದಿರದಲ್ಲಿ ಇದಾಗಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಇದಾಗಲೇ ಹೆಚ್ಚಿನ ಸಂಖ್ಯೆಯ ಭಕ್ತರು ಅಯೋಧ್ಯೆಗೆ ಪ್ರಯಾಣ ಹೊರಟಿದ್ದಾರೆ. ಅದೇ ರೀತಿ ಬೆಂಗಳೂರಿನ ರಾಮ ಭಕ್ತರ ತಂಡವೊಂದು ʼಶ್ರೀ ರಾಮ ಜಯ ರಾಮ ಜಯ ಜಯ ರಾಮʼ… ಎಂದು ರಾಮ ನಾಮವನ್ನು ಜಪಿಸುತ್ತಾ ಬೆಂಗಳೂರು ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ಪ್ರಯಾಣ ಹೊರಟಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

Viral Video: ರಾಮ ಸ್ತೋತ್ರ ಪಠಿಸುತ್ತಾ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ರಾಮ ಭಕ್ತರು
ಮಾಲಾಶ್ರೀ ಅಂಚನ್​
| Edited By: |

Updated on: Jan 18, 2024 | 12:41 PM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಒಂದು ಪುಣ್ಯ ಕಾರ್ಯದಲ್ಲಿ ಭಾಗವಹಿಸಲು ಸಹಸ್ತ್ರಾರು ಸಂಖ್ಯೆಯಲ್ಲಿ ರಾಮ ಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಇದಾಗಲೇ ಕೆಲವೊಬ್ಬ ರಾಮ ಭಕ್ತರು ತಮ್ಮ ಊರುಗಳಿಂದ ಪಾದಯಾತ್ರೆಯ ಮೂಲಕವೇ ಅಯೋಧ್ಯೆ ಪ್ರಯಾಣವನ್ನು ಆರಂಭಿಸಿದ್ದಾರೆ. ಅದೇ ರೀತಿ ಇಲ್ಲೊಂದು ರಾಮ ಭಕ್ತರ ತಂಡ ಶ್ರೀ ರಾಮನ ಸ್ತೋತ್ರಗಳನ್ನು ಪಠಿಸುತ್ತಾ ಬೆಂಗಳೂರಿನ ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.  ಹೌದು ಬೆಂಗಳೂರು ಟು ಅಯೋಧ್ಯೆ ಸಂಪರ್ಕಿಸುವ ಮೊದಲ ವಿಮಾನ ಯಾನದಲ್ಲಿ ಅವರು ಅಯೋಧ್ಯೆಗೆ  ಪ್ರಯಾಣ ಬೆಳೆಸಿದ್ದಾರೆ.

ಇದೀಗ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭ ಆಗಿರುವ ಹೊತ್ತಿನಲ್ಲಿ ಬೆಂಗಳೂರು-ಅಯೋಧ್ಯೆ ನಡುವಣ ವಿಮಾನ ಪ್ರಯಾಣ ಆರಂಭವಾಗಿದ್ದು, ಈ ಬೆಂಗಳೂರು ಟು ಅಯೋಧ್ಯೆ ಸಂಪರ್ಕಿಸುವ ವಿಮಾನಯಾನಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ್ ನಿನ್ನೆ ಚಾಲನೆ ನೀಡದರು. ಈ ಮೊದಲ  ವಿಮಾನಯಾನದಲ್ಲಿ ಬೆಂಗಳೂರಿನಿಂದ ರಾಮ ಭಕ್ತರ ತಂಡವೊಂದು ರಾಮ ನಾಮ ಜಪಿಸುತ್ತಾ ಅಯೋಧ್ಯೆಗೆ ಪ್ರಯಾಣಿಸಿದ್ದಾರೆ.

ಈ ವಿಡಿಯೋ ತುಣುಕನ್ನು ಸುದ್ದಿ ಸಂಸ್ಥೆ ANI ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದು, ʼಬೆಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣಿಸುವಾಗ ಬೆಂಗಳೂರಿನ ರಾಮ ಭಕ್ತರ ತಂಡವೊಂದು ರಾಮ ನಾಮ ಜಪಿಸುತ್ತಿರುವ ದೃಶ್ಯ; ಕೇಂದ್ರ ನಾಗರಿಕ ವಿಮಾನದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ್ ಅವರು ಬೆಂಗಳೂರು, ಕೊಲ್ಕತ್ತಾ, ಮತ್ತು ಅಯೋಧ್ಯೆ ನಡುವಿನ ಮೊದಲ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ನಿನ್ನೆ ಚಾಲನೆ ನೀಡಿದರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ.

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಸುದ್ದಿ ಸಂಸ್ಥೆ ANI ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಂಗಳೂರಿನಿಂದ ಅಯೋಧ್ಯೆಗೆ ಹೊರಟಿರುವ ಭಕ್ತವೃಂದವೊಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶ್ರೀರಾಮ ಜಯ ರಾಮ ಜಯ ಜಯ ರಾಮ… ಎಂದು ರಾಮ ನಾಮ ಜಪಿಸುತ್ತಾ ವಿಮಾನವನ್ನು ಏರುತ್ತಿರು ದೃಶ್ಯವನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ