Viral: ತರಗತಿಯೊಳಗೆ ವಿದ್ಯಾರ್ಥಿಗಳಿಂದ ಕಾಲಿಗೆ ಮಸಾಜ್‌ ಮಾಡಿಸಿಕೊಂಡ ಟೀಚರ್

ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಬೇಕಾದ ಶಿಕ್ಷಕಿಯೊಬ್ಬರು ಮಕ್ಕಳಿಗೆ ಪಾಠ ಮಾಡುವ ಬದಲು ತರಗತಿಯಲ್ಲಿ ಮಲಗಿ ತನ್ನ ಕಾಲಿಗೆ ವಿದ್ಯಾರ್ಥಿಗಳಿಂದ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 10, 2024 | 4:34 PM

ಶಾಲೆಗಳು ದೇವಾಲಯವಿದ್ದಂತೆ. ಈ ಪವಿತ್ರ ಸ್ಥಳದಲ್ಲಿ ಶಿಕ್ಷಕರಾದವರು ಮಕ್ಕಳಿಗೆ ಕಲಿಕೆಯ ಜೊತೆಗೆ ಒಳ್ಳೆಯ ಜೀವನ ಪಾಠವನ್ನು ಕೂಡಾ ಕಲಿಸಿಕೊಡಬೇಕು. ಆದ್ರೆ ಕೆಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡದೆ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಳ್ಳುವಂತಹ ನಾಚಿಕೆಗೇಡಿನ ಕೆಲಸಗಳನ್ನು ಮಾಡುತ್ತಿರುತ್ತಾರೆ. ಶಿಕ್ಷಕರ ಕರ್ತವ್ಯ ಲೋಪಕ್ಕೆ ಸಂಬಂಧಿಸಿದ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಶಿಕ್ಷಕಿಯೊಬ್ಬರು ತರಗತಿಯೊಳಗೆ ಮಲಗಿ ವಿದ್ಯಾರ್ಥಿಗಳಿಂದ ತನ್ನ ಕಾಲಿಗೆ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಶಿಕ್ಷಕಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಆಘಾತಕಾರಿ ಘಟನೆ ಜೈಪುರದಲ್ಲಿ ನಡೆದಿದ್ದು, ಇಲ್ಲಿನ ಕರ್ತಾರ್‌ಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪಾಠ ಮಾಡುವ ಬದಲು ತರಗತಿಯಲ್ಲಿ ಮಲಗಿ ವಿದ್ಯಾರ್ಥಿಗಳಿಂದಲೇ ತಮ್ಮ ಕಾಲಿಗೆ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಶಿಕ್ಷಕರೇ ಹೀಗೆ ಮಾಡಿದ್ರೆ ವಿದ್ಯಾರ್ಥಿಗಳ ಭವಿಷ್ಯ ಏನಾಗಬೇಡ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್‌ ರೈ (prashanthrai280) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು. ಸರ್ಕಾರಿ ಶಾಲೆಯ ತರಗತಿಯೊಂದರಲ್ಲಿ ಶಿಕ್ಷಕಿಯೊಬ್ಬರು ನೆಲದ ಮೇಲೆ ಮಲಗಿ ಮಕ್ಕಳಿಂದ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಹೌದು ಮಕ್ಕಳು ಶಿಕ್ಷಕಿಯ ಕಾಲಿನ ಮೇಲೆ ನಿಂತು ಮಸಾಜ್‌ ಮಾಡಿದ್ದಾರೆ.

ಇದನ್ನೂ ಓದಿ: ಮನೆಕೆಲಸದವರಿಗೆ ದುಬಾರಿ ಬೆಲೆಯ ಐಫೋನ್‌ ಗಿಫ್ಟ್‌ ಕೊಟ್ಟ ದಂಪತಿ; ವಿಡಿಯೋ ವೈರಲ್‌

ಇಂದು ಮುಂಜಾನೆ ಶೇರ್‌ ಮಾಡಲಾದ ಈ ವಿಡಿಯೋ ಸದ್ಯ ಭಾರೀ ವೈರಲ್‌ ಆಗುತ್ತಿದ್ದು, ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವ ಬದಲು ವಿದ್ಯಾರ್ಥಿಗಳಿಂದಲೇ ಕೆಲಸ ಮಾಡಿಸಿಕೊಂಡ ಆ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು, ಇದು ಆ ಶಾಲೆಯ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು