AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತರಗತಿಯೊಳಗೆ ವಿದ್ಯಾರ್ಥಿಗಳಿಂದ ಕಾಲಿಗೆ ಮಸಾಜ್‌ ಮಾಡಿಸಿಕೊಂಡ ಟೀಚರ್

ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಬೇಕಾದ ಶಿಕ್ಷಕಿಯೊಬ್ಬರು ಮಕ್ಕಳಿಗೆ ಪಾಠ ಮಾಡುವ ಬದಲು ತರಗತಿಯಲ್ಲಿ ಮಲಗಿ ತನ್ನ ಕಾಲಿಗೆ ವಿದ್ಯಾರ್ಥಿಗಳಿಂದ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 10, 2024 | 4:34 PM

Share

ಶಾಲೆಗಳು ದೇವಾಲಯವಿದ್ದಂತೆ. ಈ ಪವಿತ್ರ ಸ್ಥಳದಲ್ಲಿ ಶಿಕ್ಷಕರಾದವರು ಮಕ್ಕಳಿಗೆ ಕಲಿಕೆಯ ಜೊತೆಗೆ ಒಳ್ಳೆಯ ಜೀವನ ಪಾಠವನ್ನು ಕೂಡಾ ಕಲಿಸಿಕೊಡಬೇಕು. ಆದ್ರೆ ಕೆಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡದೆ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಳ್ಳುವಂತಹ ನಾಚಿಕೆಗೇಡಿನ ಕೆಲಸಗಳನ್ನು ಮಾಡುತ್ತಿರುತ್ತಾರೆ. ಶಿಕ್ಷಕರ ಕರ್ತವ್ಯ ಲೋಪಕ್ಕೆ ಸಂಬಂಧಿಸಿದ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಶಿಕ್ಷಕಿಯೊಬ್ಬರು ತರಗತಿಯೊಳಗೆ ಮಲಗಿ ವಿದ್ಯಾರ್ಥಿಗಳಿಂದ ತನ್ನ ಕಾಲಿಗೆ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಶಿಕ್ಷಕಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಆಘಾತಕಾರಿ ಘಟನೆ ಜೈಪುರದಲ್ಲಿ ನಡೆದಿದ್ದು, ಇಲ್ಲಿನ ಕರ್ತಾರ್‌ಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪಾಠ ಮಾಡುವ ಬದಲು ತರಗತಿಯಲ್ಲಿ ಮಲಗಿ ವಿದ್ಯಾರ್ಥಿಗಳಿಂದಲೇ ತಮ್ಮ ಕಾಲಿಗೆ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಶಿಕ್ಷಕರೇ ಹೀಗೆ ಮಾಡಿದ್ರೆ ವಿದ್ಯಾರ್ಥಿಗಳ ಭವಿಷ್ಯ ಏನಾಗಬೇಡ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್‌ ರೈ (prashanthrai280) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು. ಸರ್ಕಾರಿ ಶಾಲೆಯ ತರಗತಿಯೊಂದರಲ್ಲಿ ಶಿಕ್ಷಕಿಯೊಬ್ಬರು ನೆಲದ ಮೇಲೆ ಮಲಗಿ ಮಕ್ಕಳಿಂದ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಹೌದು ಮಕ್ಕಳು ಶಿಕ್ಷಕಿಯ ಕಾಲಿನ ಮೇಲೆ ನಿಂತು ಮಸಾಜ್‌ ಮಾಡಿದ್ದಾರೆ.

ಇದನ್ನೂ ಓದಿ: ಮನೆಕೆಲಸದವರಿಗೆ ದುಬಾರಿ ಬೆಲೆಯ ಐಫೋನ್‌ ಗಿಫ್ಟ್‌ ಕೊಟ್ಟ ದಂಪತಿ; ವಿಡಿಯೋ ವೈರಲ್‌

ಇಂದು ಮುಂಜಾನೆ ಶೇರ್‌ ಮಾಡಲಾದ ಈ ವಿಡಿಯೋ ಸದ್ಯ ಭಾರೀ ವೈರಲ್‌ ಆಗುತ್ತಿದ್ದು, ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವ ಬದಲು ವಿದ್ಯಾರ್ಥಿಗಳಿಂದಲೇ ಕೆಲಸ ಮಾಡಿಸಿಕೊಂಡ ಆ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು, ಇದು ಆ ಶಾಲೆಯ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!