AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತರಗತಿಯೊಳಗೆ ವಿದ್ಯಾರ್ಥಿಗಳಿಂದ ಕಾಲಿಗೆ ಮಸಾಜ್‌ ಮಾಡಿಸಿಕೊಂಡ ಟೀಚರ್

ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಬೇಕಾದ ಶಿಕ್ಷಕಿಯೊಬ್ಬರು ಮಕ್ಕಳಿಗೆ ಪಾಠ ಮಾಡುವ ಬದಲು ತರಗತಿಯಲ್ಲಿ ಮಲಗಿ ತನ್ನ ಕಾಲಿಗೆ ವಿದ್ಯಾರ್ಥಿಗಳಿಂದ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 10, 2024 | 4:34 PM

Share

ಶಾಲೆಗಳು ದೇವಾಲಯವಿದ್ದಂತೆ. ಈ ಪವಿತ್ರ ಸ್ಥಳದಲ್ಲಿ ಶಿಕ್ಷಕರಾದವರು ಮಕ್ಕಳಿಗೆ ಕಲಿಕೆಯ ಜೊತೆಗೆ ಒಳ್ಳೆಯ ಜೀವನ ಪಾಠವನ್ನು ಕೂಡಾ ಕಲಿಸಿಕೊಡಬೇಕು. ಆದ್ರೆ ಕೆಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡದೆ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಳ್ಳುವಂತಹ ನಾಚಿಕೆಗೇಡಿನ ಕೆಲಸಗಳನ್ನು ಮಾಡುತ್ತಿರುತ್ತಾರೆ. ಶಿಕ್ಷಕರ ಕರ್ತವ್ಯ ಲೋಪಕ್ಕೆ ಸಂಬಂಧಿಸಿದ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಶಿಕ್ಷಕಿಯೊಬ್ಬರು ತರಗತಿಯೊಳಗೆ ಮಲಗಿ ವಿದ್ಯಾರ್ಥಿಗಳಿಂದ ತನ್ನ ಕಾಲಿಗೆ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಶಿಕ್ಷಕಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಆಘಾತಕಾರಿ ಘಟನೆ ಜೈಪುರದಲ್ಲಿ ನಡೆದಿದ್ದು, ಇಲ್ಲಿನ ಕರ್ತಾರ್‌ಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪಾಠ ಮಾಡುವ ಬದಲು ತರಗತಿಯಲ್ಲಿ ಮಲಗಿ ವಿದ್ಯಾರ್ಥಿಗಳಿಂದಲೇ ತಮ್ಮ ಕಾಲಿಗೆ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಶಿಕ್ಷಕರೇ ಹೀಗೆ ಮಾಡಿದ್ರೆ ವಿದ್ಯಾರ್ಥಿಗಳ ಭವಿಷ್ಯ ಏನಾಗಬೇಡ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್‌ ರೈ (prashanthrai280) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು. ಸರ್ಕಾರಿ ಶಾಲೆಯ ತರಗತಿಯೊಂದರಲ್ಲಿ ಶಿಕ್ಷಕಿಯೊಬ್ಬರು ನೆಲದ ಮೇಲೆ ಮಲಗಿ ಮಕ್ಕಳಿಂದ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಹೌದು ಮಕ್ಕಳು ಶಿಕ್ಷಕಿಯ ಕಾಲಿನ ಮೇಲೆ ನಿಂತು ಮಸಾಜ್‌ ಮಾಡಿದ್ದಾರೆ.

ಇದನ್ನೂ ಓದಿ: ಮನೆಕೆಲಸದವರಿಗೆ ದುಬಾರಿ ಬೆಲೆಯ ಐಫೋನ್‌ ಗಿಫ್ಟ್‌ ಕೊಟ್ಟ ದಂಪತಿ; ವಿಡಿಯೋ ವೈರಲ್‌

ಇಂದು ಮುಂಜಾನೆ ಶೇರ್‌ ಮಾಡಲಾದ ಈ ವಿಡಿಯೋ ಸದ್ಯ ಭಾರೀ ವೈರಲ್‌ ಆಗುತ್ತಿದ್ದು, ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವ ಬದಲು ವಿದ್ಯಾರ್ಥಿಗಳಿಂದಲೇ ಕೆಲಸ ಮಾಡಿಸಿಕೊಂಡ ಆ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು, ಇದು ಆ ಶಾಲೆಯ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!