AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಪಾಠ: ಜಪಾನಿನ ಮಕ್ಕಳು ಈ ಬಸ್ಸಿನಲ್ಲಿ ಹೊರಟಿದ್ದಾರೆ, ಮುಂದೇನಾಗುತ್ತದೆ?

Japanese Kids : ಎಳವೆಯಲ್ಲಿಯೇ, ದಯೆ, ಸಹಾನುಭೂತಿಯಂಥ ಮಾನವೀಯತೆಯ ಬೀಜವನ್ನು ಮಕ್ಕಳಲ್ಲಿ ಬಿತ್ತಬೇಕು. ಅದಕ್ಕಾಗಿ ಪಠ್ಯಪುಸ್ತಕಕ್ಕಿಂತ ಇಂಥ ಪ್ರಾಯೋಗಿಕ ಪಾಠಗಳೇ ಬಹಳ ಮುಖ್ಯ. ನೆಟ್ಟಿಗರೂ ಇದನ್ನು ಬೆಂಬಲಿಸುತ್ತಿದ್ದಾರೆ.

ಸೌಜನ್ಯ ಪಾಠ: ಜಪಾನಿನ ಮಕ್ಕಳು ಈ ಬಸ್ಸಿನಲ್ಲಿ ಹೊರಟಿದ್ದಾರೆ, ಮುಂದೇನಾಗುತ್ತದೆ?
ಬಸ್ಸಿನಲ್ಲಿ ಸೌಜನ್ಯ ಪಾಠ
TV9 Web
| Edited By: |

Updated on:Dec 10, 2022 | 11:10 AM

Share

Viral Video : ಪಠ್ಯಪುಸ್ತಕಕ್ಕಿಂತ ಪ್ರಾಯೋಗಿಕವಾಗಿ ಹೇಳಿಕೊಡುವ ಪಾಠಗಳೇ ಮಗುವಿನ ಕಲಿಕೆಗೆ ಮತ್ತು ಬದುಕಿಗೆ ಹೆಚ್ಚು ಪೂರಕವಾಗಿರುತ್ತವೆ. ಜಪಾನಿನ ಶಿಕ್ಷಣ ವ್ಯವಸ್ಥೆ ಈ ವಿಷಯವಾಗಿ ಮುಂಚೂಣಿಯಲ್ಲಿದೆ. ಬಸ್ಸಿನಲ್ಲಿ ಪ್ರಯಾಣಿಸುವಾಗ ನಮ್ಮ ನಡೆವಳಿಕೆಗಳು ಎಷ್ಟು ಸೌಜನ್ಯಯುತವಾಗಿ ಕೂಡಿರಬೇಕು ಎಂಬ ಪ್ರಾತ್ಯಕ್ಷಿಕೆಯೊಂದಿಗೆ ಈ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ ಈ ವಿಡಿಯೋದಲ್ಲಿ. ವೈರಲ್ ಆಗಿರುವ ಈ ವಿಡಿಯೋ ಅನ್ನು ಐಎಎಸ್ ಅಧಿಕಾರಿ ಅವನೀಶ ಶರಣ ಟ್ವೀಟ್ ಮಾಡಿದ್ದಾರೆ.

ಸಹಾನುಭೂತಿ, ಕರುಣೆ, ದಯೆಯಂಥ ಮಾನವೀಯ ಗುಣಗಳ ಬೀಜವನ್ನು ಎಳವೆಯಲ್ಲಿಯೇ ಬಿತ್ತಬೇಕು. ಅದಕ್ಕೆ ಮನೆಯಲ್ಲಿಯೂ ಶಾಲೆಯಲ್ಲಿಯೂ ಮಾರ್ಗದರ್ಶನ ಅತ್ಯವಶ್ಯ. ಸಾರ್ವಜನಿಕ ಸ್ಥಳದಲ್ಲಿ ಮಕ್ಕಳು ಪರಸ್ಪರ ಸಂವಹನ ಹೇಗೆ ನಡೆಸಬೇಕು ಎನ್ನುವುದಂತೂ ಬಹಳೇ ಮುಖ್ಯ. ಈ ವಿಷಯವಾಗಿ ಬೋಧನೆ ಮಾಡಿದರೆ ಸಾಲದು. ಪ್ರಯೋಗ ಮತ್ತು ಪ್ರಾತ್ಯಕ್ಷಿಕೆ ಮೂಲಕವೇ ಮಕ್ಕಳಿಗೆ ಹೇಳಿಕೊಡಬೇಕು. ಅಂದಾಗ ಮಾತ್ರ ಮಕ್ಕಳ ಸ್ಮೃತಿಪಟಲದಲ್ಲಿ ಇಂಥ ವಿಷಯಗಳು ಅಚ್ಚಾಗುತ್ತವೆ.

ತರಗತಿಯೊಳಗೆ ‘ಕಲ್ಪನೆಯ ಬಸ್ಸು’ ಬಂದಿದೆ.  ಪ್ರಯಾಣಿಕರು ತಮ್ಮ ಆಸನಗಳಲ್ಲಿ ಕುಳಿತಿದ್ದಾರೆ. ಡ್ರೈವರ್ ಗಾಡಿ ಓಡಿಸುತ್ತಿದ್ದಾರೆ. ವಯಸ್ಸಾದ ಅಜ್ಜ, ಗರ್ಭಿಣಿ, ಶಾಲಾ ಮಗು ಹೀಗೆ ಒಬ್ಬೊಬ್ಬರೇ ಬಂದಾಗ ಉಳಿದ ಪ್ರಯಾಣಿಕರು ಸೌಜನ್ಯಯುತವಾಗಿ ಆಸನವನ್ನು ಬಿಟ್ಟು ಕೊಡುತ್ತಾರೆ.

ಈ ವಿಡಿಯೋ ಅನ್ನು ಈತನಕ 4 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. ಅನೇಕರು ಇಂಥ ಪ್ರಾಯೋಗಿಕ ಪಾಠದ ಅವಶ್ಯಕತೆ ಜಗತ್ತಿನ ಎಲ್ಲ ಮಕ್ಕಳಿಗೂ ದೊರೆಯಬೇಕು ಎಂದು ಬೆಂಬಲ ಸೂಚಿಸಿದ್ದಾರೆ.

ಈ ವಿಡಿಯೋ ನೋಡಿದ ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:09 am, Sat, 10 December 22

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ