AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಪಾಠ: ಜಪಾನಿನ ಮಕ್ಕಳು ಈ ಬಸ್ಸಿನಲ್ಲಿ ಹೊರಟಿದ್ದಾರೆ, ಮುಂದೇನಾಗುತ್ತದೆ?

Japanese Kids : ಎಳವೆಯಲ್ಲಿಯೇ, ದಯೆ, ಸಹಾನುಭೂತಿಯಂಥ ಮಾನವೀಯತೆಯ ಬೀಜವನ್ನು ಮಕ್ಕಳಲ್ಲಿ ಬಿತ್ತಬೇಕು. ಅದಕ್ಕಾಗಿ ಪಠ್ಯಪುಸ್ತಕಕ್ಕಿಂತ ಇಂಥ ಪ್ರಾಯೋಗಿಕ ಪಾಠಗಳೇ ಬಹಳ ಮುಖ್ಯ. ನೆಟ್ಟಿಗರೂ ಇದನ್ನು ಬೆಂಬಲಿಸುತ್ತಿದ್ದಾರೆ.

ಸೌಜನ್ಯ ಪಾಠ: ಜಪಾನಿನ ಮಕ್ಕಳು ಈ ಬಸ್ಸಿನಲ್ಲಿ ಹೊರಟಿದ್ದಾರೆ, ಮುಂದೇನಾಗುತ್ತದೆ?
ಬಸ್ಸಿನಲ್ಲಿ ಸೌಜನ್ಯ ಪಾಠ
TV9 Web
| Edited By: |

Updated on:Dec 10, 2022 | 11:10 AM

Share

Viral Video : ಪಠ್ಯಪುಸ್ತಕಕ್ಕಿಂತ ಪ್ರಾಯೋಗಿಕವಾಗಿ ಹೇಳಿಕೊಡುವ ಪಾಠಗಳೇ ಮಗುವಿನ ಕಲಿಕೆಗೆ ಮತ್ತು ಬದುಕಿಗೆ ಹೆಚ್ಚು ಪೂರಕವಾಗಿರುತ್ತವೆ. ಜಪಾನಿನ ಶಿಕ್ಷಣ ವ್ಯವಸ್ಥೆ ಈ ವಿಷಯವಾಗಿ ಮುಂಚೂಣಿಯಲ್ಲಿದೆ. ಬಸ್ಸಿನಲ್ಲಿ ಪ್ರಯಾಣಿಸುವಾಗ ನಮ್ಮ ನಡೆವಳಿಕೆಗಳು ಎಷ್ಟು ಸೌಜನ್ಯಯುತವಾಗಿ ಕೂಡಿರಬೇಕು ಎಂಬ ಪ್ರಾತ್ಯಕ್ಷಿಕೆಯೊಂದಿಗೆ ಈ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ ಈ ವಿಡಿಯೋದಲ್ಲಿ. ವೈರಲ್ ಆಗಿರುವ ಈ ವಿಡಿಯೋ ಅನ್ನು ಐಎಎಸ್ ಅಧಿಕಾರಿ ಅವನೀಶ ಶರಣ ಟ್ವೀಟ್ ಮಾಡಿದ್ದಾರೆ.

ಸಹಾನುಭೂತಿ, ಕರುಣೆ, ದಯೆಯಂಥ ಮಾನವೀಯ ಗುಣಗಳ ಬೀಜವನ್ನು ಎಳವೆಯಲ್ಲಿಯೇ ಬಿತ್ತಬೇಕು. ಅದಕ್ಕೆ ಮನೆಯಲ್ಲಿಯೂ ಶಾಲೆಯಲ್ಲಿಯೂ ಮಾರ್ಗದರ್ಶನ ಅತ್ಯವಶ್ಯ. ಸಾರ್ವಜನಿಕ ಸ್ಥಳದಲ್ಲಿ ಮಕ್ಕಳು ಪರಸ್ಪರ ಸಂವಹನ ಹೇಗೆ ನಡೆಸಬೇಕು ಎನ್ನುವುದಂತೂ ಬಹಳೇ ಮುಖ್ಯ. ಈ ವಿಷಯವಾಗಿ ಬೋಧನೆ ಮಾಡಿದರೆ ಸಾಲದು. ಪ್ರಯೋಗ ಮತ್ತು ಪ್ರಾತ್ಯಕ್ಷಿಕೆ ಮೂಲಕವೇ ಮಕ್ಕಳಿಗೆ ಹೇಳಿಕೊಡಬೇಕು. ಅಂದಾಗ ಮಾತ್ರ ಮಕ್ಕಳ ಸ್ಮೃತಿಪಟಲದಲ್ಲಿ ಇಂಥ ವಿಷಯಗಳು ಅಚ್ಚಾಗುತ್ತವೆ.

ತರಗತಿಯೊಳಗೆ ‘ಕಲ್ಪನೆಯ ಬಸ್ಸು’ ಬಂದಿದೆ.  ಪ್ರಯಾಣಿಕರು ತಮ್ಮ ಆಸನಗಳಲ್ಲಿ ಕುಳಿತಿದ್ದಾರೆ. ಡ್ರೈವರ್ ಗಾಡಿ ಓಡಿಸುತ್ತಿದ್ದಾರೆ. ವಯಸ್ಸಾದ ಅಜ್ಜ, ಗರ್ಭಿಣಿ, ಶಾಲಾ ಮಗು ಹೀಗೆ ಒಬ್ಬೊಬ್ಬರೇ ಬಂದಾಗ ಉಳಿದ ಪ್ರಯಾಣಿಕರು ಸೌಜನ್ಯಯುತವಾಗಿ ಆಸನವನ್ನು ಬಿಟ್ಟು ಕೊಡುತ್ತಾರೆ.

ಈ ವಿಡಿಯೋ ಅನ್ನು ಈತನಕ 4 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. ಅನೇಕರು ಇಂಥ ಪ್ರಾಯೋಗಿಕ ಪಾಠದ ಅವಶ್ಯಕತೆ ಜಗತ್ತಿನ ಎಲ್ಲ ಮಕ್ಕಳಿಗೂ ದೊರೆಯಬೇಕು ಎಂದು ಬೆಂಬಲ ಸೂಚಿಸಿದ್ದಾರೆ.

ಈ ವಿಡಿಯೋ ನೋಡಿದ ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:09 am, Sat, 10 December 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ