AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂ. 7 ಲಕ್ಷ ಮೌಲ್ಯದ ನೆಕ್ಲೇಸ್​ ಕದ್ದ ಮಹಿಳೆಯ ವಿಡಿಯೋ ವೈರಲ್​

Uttar Pradesh : ಕಣ್ಣಿಗೆ ಕೂಲಿಂಗ್ ಗ್ಲಾಸ್​, ಮುಖಕ್ಕೆ ಮಾಸ್ಕ್​ ಧರಿಸಿದ ಈ ಮಹಿಳೆ ಉತ್ತರಪ್ರದೇಶದ ಆಭರಣ ಮಳಿಗೆಗೆ ಹೋಗುತ್ತಾಳೆ. ಬಹಳ ಚಾಣಾಕ್ಷತೆಯಿಂದ ಕಳ್ಳತನ ಮಾಡುತ್ತಾಳೆ. ಪೊಲೀಸರು ಈಕೆಯನ್ನು ಹುಡುಕುತ್ತಿದ್ದಾರೆ.

ರೂ. 7 ಲಕ್ಷ ಮೌಲ್ಯದ ನೆಕ್ಲೇಸ್​ ಕದ್ದ ಮಹಿಳೆಯ ವಿಡಿಯೋ ವೈರಲ್​
7 ಲಕ್ಷ ರೂ. ಮೌಲ್ಯದ ನೆಕ್ಲೆಸ್ ಕದಿಯುತ್ತಿರುವ ಮಹಿಳೆ
TV9 Web
| Edited By: ಶ್ರೀದೇವಿ ಕಳಸದ|

Updated on: Nov 28, 2022 | 6:05 PM

Share

Viral Video : ಉತ್ತರ ಪ್ರದೇಶದ ಗೋರಖ್‌ಪುರದ ಆಭರಣ ಮಳಿಗೆಯೊಂದರಲ್ಲಿ ಮಹಿಳೆಯೊಬ್ಬಳು ರೂ. 7 ಲಕ್ಷದ ನೆಕ್ಲೇಸ್​ ಅನ್ನು ಕದ್ದಿದ್ದಾಳೆ. ಈಕೆ ಆಭರಣವನ್ನು ಕದಿಯುವ ಈ ದೃಶ್ಯ ಆಭರಣ ಮಳಿಗೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಈ ಮಹಿಳೆಯು ಮಾಸ್ಕ್ ಮತ್ತು ಕಪ್ಪುಬಣ್ಣದ ಕೂಲಿಂಗ್​ ಗ್ಲಾಸ್​ ಧರಿಸಿದ್ದಾಳೆ. ನೆಟ್ಟಿಗರು ಈ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಘಟನೆ ನಡೆದಿದ್ದು ನವೆಂಬರ್ 17ರಂದು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by India Today (@indiatoday)

ಬಲದೇವ್​ ಪ್ಲಾಝಾದ ಬೇಚೂಲಾಲ್​ ಸರಾಫ್​ ಪ್ರೈವೇಟ್ ಲಿಮಿಟೆಡ್​ ಎಂಬ ಆಭರಣ ಅಂಗಡಿಗೆ ಈ ಮಹಿಳೆ ನೆಕ್ಲೇಸ್​ ಖರೀದಿಸಲು ಹೋಗಿದ್ದಾಳೆ. ಆಭರಣವನ್ನು ಸಮೀಪದಿಂದ ನೋಡುತ್ತಿರುವಂತೆ ಒಂದೆರಡು ಸಲ ನಟಿಸುತ್ತಾಳೆ. ಹೀಗೆ ಮಾಡುತ್ತಲೇ ನೆಕ್ಲೇಸ್​ನ ಬಾಕ್ಸ್​ಗಳನ್ನು ತನ್ನ ತೊಡೆಯ ಮೇಲೆ ಇಟ್ಟುಕೊಳ್ಳುತ್ತಾಳೆ. ನಂತರ ಒಂದನ್ನು ಮಾತ್ರ ಕೌಂಟರಿನ ಮೇಲೆ ಇಡುತ್ತಾಳೆ. ತೊಡೆಯ ಮೇಲೆ ಇಟ್ಟುಕೊಂಡ ಬಾಕ್ಸ್​ ಅನ್ನು ಸೀರೆಯಿಂದ ಮರೆಮಾಚುತ್ತಾಳೆ.

ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಹೌಹಾರಿದ್ದಾರೆ. ಪೊಲೀಸರು ಈ ಕಳ್ಳಿಯನ್ನು ಇನ್ನೂ ಹುಡುಕುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್