AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂ. 7 ಲಕ್ಷ ಮೌಲ್ಯದ ನೆಕ್ಲೇಸ್​ ಕದ್ದ ಮಹಿಳೆಯ ವಿಡಿಯೋ ವೈರಲ್​

Uttar Pradesh : ಕಣ್ಣಿಗೆ ಕೂಲಿಂಗ್ ಗ್ಲಾಸ್​, ಮುಖಕ್ಕೆ ಮಾಸ್ಕ್​ ಧರಿಸಿದ ಈ ಮಹಿಳೆ ಉತ್ತರಪ್ರದೇಶದ ಆಭರಣ ಮಳಿಗೆಗೆ ಹೋಗುತ್ತಾಳೆ. ಬಹಳ ಚಾಣಾಕ್ಷತೆಯಿಂದ ಕಳ್ಳತನ ಮಾಡುತ್ತಾಳೆ. ಪೊಲೀಸರು ಈಕೆಯನ್ನು ಹುಡುಕುತ್ತಿದ್ದಾರೆ.

ರೂ. 7 ಲಕ್ಷ ಮೌಲ್ಯದ ನೆಕ್ಲೇಸ್​ ಕದ್ದ ಮಹಿಳೆಯ ವಿಡಿಯೋ ವೈರಲ್​
7 ಲಕ್ಷ ರೂ. ಮೌಲ್ಯದ ನೆಕ್ಲೆಸ್ ಕದಿಯುತ್ತಿರುವ ಮಹಿಳೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Nov 28, 2022 | 6:05 PM

Viral Video : ಉತ್ತರ ಪ್ರದೇಶದ ಗೋರಖ್‌ಪುರದ ಆಭರಣ ಮಳಿಗೆಯೊಂದರಲ್ಲಿ ಮಹಿಳೆಯೊಬ್ಬಳು ರೂ. 7 ಲಕ್ಷದ ನೆಕ್ಲೇಸ್​ ಅನ್ನು ಕದ್ದಿದ್ದಾಳೆ. ಈಕೆ ಆಭರಣವನ್ನು ಕದಿಯುವ ಈ ದೃಶ್ಯ ಆಭರಣ ಮಳಿಗೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಈ ಮಹಿಳೆಯು ಮಾಸ್ಕ್ ಮತ್ತು ಕಪ್ಪುಬಣ್ಣದ ಕೂಲಿಂಗ್​ ಗ್ಲಾಸ್​ ಧರಿಸಿದ್ದಾಳೆ. ನೆಟ್ಟಿಗರು ಈ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಘಟನೆ ನಡೆದಿದ್ದು ನವೆಂಬರ್ 17ರಂದು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by India Today (@indiatoday)

ಬಲದೇವ್​ ಪ್ಲಾಝಾದ ಬೇಚೂಲಾಲ್​ ಸರಾಫ್​ ಪ್ರೈವೇಟ್ ಲಿಮಿಟೆಡ್​ ಎಂಬ ಆಭರಣ ಅಂಗಡಿಗೆ ಈ ಮಹಿಳೆ ನೆಕ್ಲೇಸ್​ ಖರೀದಿಸಲು ಹೋಗಿದ್ದಾಳೆ. ಆಭರಣವನ್ನು ಸಮೀಪದಿಂದ ನೋಡುತ್ತಿರುವಂತೆ ಒಂದೆರಡು ಸಲ ನಟಿಸುತ್ತಾಳೆ. ಹೀಗೆ ಮಾಡುತ್ತಲೇ ನೆಕ್ಲೇಸ್​ನ ಬಾಕ್ಸ್​ಗಳನ್ನು ತನ್ನ ತೊಡೆಯ ಮೇಲೆ ಇಟ್ಟುಕೊಳ್ಳುತ್ತಾಳೆ. ನಂತರ ಒಂದನ್ನು ಮಾತ್ರ ಕೌಂಟರಿನ ಮೇಲೆ ಇಡುತ್ತಾಳೆ. ತೊಡೆಯ ಮೇಲೆ ಇಟ್ಟುಕೊಂಡ ಬಾಕ್ಸ್​ ಅನ್ನು ಸೀರೆಯಿಂದ ಮರೆಮಾಚುತ್ತಾಳೆ.

ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಹೌಹಾರಿದ್ದಾರೆ. ಪೊಲೀಸರು ಈ ಕಳ್ಳಿಯನ್ನು ಇನ್ನೂ ಹುಡುಕುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ