AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೇರೆ ಕಂಪನಿಗಳಿಗೆ ಸಂದರ್ಶನ ಇದೆ ಎಂದು ಸತ್ಯ ಹೇಳಿ ಕೆಲಸ ಕಳೆದುಕೊಂಡ ವ್ಯಕ್ತಿ!

ವ್ಯಕ್ತಿಯೊಬ್ಬರು ಸಂದರ್ಶನದ ವೇಳೆ ಬೇರೆ ಕಂಪನಿಗಳಿಗೆ ಸಂದರ್ಶನ ಇದೆ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದಾರೆ, ಇದೀಗ ಈ ಸತ್ಯ ಹೇಳಿ ಕೆಲಸದ ಅವಕಾಶವನ್ನು ಕಳೆದುಕೊಂಡಿದ್ದಾನೆ. ಎಚ್‌ಆರ್, ಸತ್ಯ ಹೇಳಿದ ತಕ್ಷಣ ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಸತ್ಯ ಹೇಳುವುದು ಕೆಲವು ಬಾರಿ ಕಹಿಯಾಗಿರುತ್ತದೆ. ಇಂದಿನ ಕಾಲದಲ್ಲಿ ಸತ್ಯಕ್ಕೆ ಬೆಲೆ ಇಲ್ಲದಿರುವುದು ದುರದೃಷ್ಟಕರ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ, ಪ್ರಾಮಾಣಿಕತೆ ಮತ್ತು ವೃತ್ತಿ ಬದುಕು ಎಂಬ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

Viral Post:  ಬೇರೆ ಕಂಪನಿಗಳಿಗೆ ಸಂದರ್ಶನ ಇದೆ ಎಂದು ಸತ್ಯ ಹೇಳಿ ಕೆಲಸ ಕಳೆದುಕೊಂಡ ವ್ಯಕ್ತಿ!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 08, 2025 | 11:05 AM

Share

ಸತ್ಯ ಎನ್ನುವುದು ಕೆಲವೊಂದು ಬಾರಿ ಜೀವನಕ್ಕೆ ಕಹಿಯಾಗಿರುತ್ತದೆ, ಈ ಜಗತ್ತಿನಲ್ಲಿ ಸತ್ಯಕ್ಕೆ ಬೆಲೆ ಇಲ್ಲ. ಕೆಲವೊಂದು ಬಾರಿ ನಮ್ಮ ಲಾಭಕ್ಕಾಗಿ ಸುಳ್ಳು ಹೇಳುವುದು ಕೂಡ ಅನಿವಾರ್ಯವಾಗಿರುತ್ತದೆ. ಅದರಲ್ಲೂ ಕೆಲಸದ ವಿಚಾರದಲ್ಲಿ ಹೆಚ್ಚು ನಿಷ್ಠೆಯನ್ನು ತೋರಬಾರದು. ಏನೇ ಆದರೂ ಕೊನೆಗೆ ಗೆಲ್ಲುವುದು ಸತ್ಯ ಹೊರತು ಸುಳ್ಳಲ್ಲ. ಇಲ್ಲೊಬ್ಬರು ಉದ್ಯೋಗಿ ಸತ್ಯ ಹೇಳಿ ಕೆಲಸ ಕಳೆದುಕೊಂಡಿದ್ದಾರೆ. ಕಂಪನಿಯೊಂದರ ಸಂದರ್ಶನದ (Job Interview Honesty) ವೇಳೆ ಮತ್ತೊಂದು ಕಡೆ ನನಗೆ ಸಂದರ್ಶನ ಇದೆ ಎಂದು ಹೇಳಿದ್ದಾರೆ. ಪ್ರಮಾಣಿಕವಾಗಿ ಸಂದರ್ಶಕರ ಮುಂದೆ ಸತ್ಯವನ್ನು ಹೇಳಿದ್ದಾರೆ. ಆದರೆ ಈ ಸತ್ಯವೇ ಅವರ ಕೆಲಸಕ್ಕೆ ಮುಳುವಾಗಿದೆ. ಈ ಬಗ್ಗೆ ರೆಡ್ಡಿಟರ್ ಹಂಚಿಕೊಂಡಿದ್ದಾರೆ.

“ಸಂದರ್ಶನ ನಡೆಯುತ್ತಿದ್ದ ವೇಳೆ HR, ನೀವು ಬೇರೆ ಯಾವುದಾದರೂ ಕಂಪನಿಗೆ ಸಂದರ್ಶನ ನೀಡುತ್ತಿದ್ದೀರಾ? ಎಂದು ಕೇಳಿದ್ದಾರೆ. ಅದಕ್ಕೆ ಎಸ್​​ ಸರ್​​ ನಾನು ಬೇರೆ ಕಂಪನಿಗೆ ಸಂದರ್ಶನ ನೀಡುತ್ತಿದ್ದೇನೆ ಎಂದು ಹೇಳಿದ ತಕ್ಷಣ ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಈ ಬಗ್ಗೆ ಮತ್ತೆ ಎಚ್​ಆರ್​​ಗೆ ಫೋನ್ ಮಾಡಿ ಕೇಳಿದಾಗ, ನಮ್ಮ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಮಾತ್ರ ಉದ್ಯೋಗ ನೀಡುವುದು ಎಂದಿದ್ದಾರೆ. ಸತ್ಯ ಹೇಳಿದ ತಕ್ಷಣ ಇಂತಹ ಪ್ರತಿಕ್ರಿಯೆ ಬರಬಹುದು ಎಂಬ ಊಹೆ ಕೂಡ ನನಗೆ ಇರಲಿಲ್ಲ” ಎಂದು ರೆಡ್ಡಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾನು ಬದುಕಿಲ್ಲ, ಆದ್ರೂ ಬೆಳಿತೀನಿ ನಾನ್ಯಾರು; ಈ ಒಗಟಿನ ಉತ್ತರ ಹೇಳಿದ್ರೆ ನೀವು ಜಾಣರು

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

Job Interview Honesty ನೆಟ್ಟಿಗರ ಪ್ರತಿಕ್ರಿಯೆ ಹೀಗಿತ್ತು:

ಈ ಪೋಸ್ಟ್​ ನೋಡಿ ಅನೇಕ ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ. ಕಂಪನಿಯು ಪ್ರಾಮಾಣಿಕತೆಗೆ ಬೆಲೆ ನೀಡುತ್ತಿಲ್ಲ ಎಂದು ಕೆಲವರು ಟೀಕಿಸಿದ್ದಾರೆ. ಇನ್ನೂ ಕೆಲವರು ಇದು ಒಂದು ಕಂಪನಿಯ ನಿಯಮ, ಕಂಪನಿಗೆ ಪ್ರಮಾಣಿಕರಾಗಿ ಇರಬೇಕು ಎಂಬ ಉದ್ದೇಶದಿಂದ ಮಾಡಿದ್ದಾರೆ ಎಂದು ಹೇಳಿದ್ದಾರೆ.ಕಂಪನಿಯೂ ಕಡಿಮೆ ಸಂಬಳದ ಉದ್ಯೋಗಿಯನ್ನು ಹುಡುಕುತ್ತಿದೆ, ಅದಕ್ಕೆ ನಿಮಗೆ ರೀತಿ ಮಾಡಿದ್ದಾರೆ ಎಂದು ನೆಟ್ಟಿಗರು ಕಮೆಂಟ್​​​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?