AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 

ಈಗಂತೂ ಸೋಶಿಯಲ್ ಮೀಡಿಯಾದಲ್ಲಿ ಸದಾ   ಪ್ರಾಣಿಗಳ ಮರಿಗಳ ಒಂದಲ್ಲಾ ಒಂದು ತುಂಟಾಟದ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ದಟ್ಟ ಕಾಡಿನಲ್ಲಿ  ತಾಯಿ ಮತ್ತು ಮರಿ ಕರಡಿ   ಮರ ಹತ್ತಿ ಇಳಿದು ಆಟವಾಡುವ ದೃಶ್ಯ ಪ್ರಾಣಿ ಪ್ರಿಯರ ಮನ ಗೆದ್ದಿದೆ.

Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 09, 2024 | 3:31 PM

ಹಿಂದಿನ ಕಾಲದಲ್ಲಿ ಹೆಚ್ಚಾಗಿ ಹಳ್ಳಿ ಕಡೆಗಳಲ್ಲಿ ಸಣ್ಣ ವಯಸ್ಸಿನ ಹುಡುಗರೆಲ್ಲಾ ಗುಂಪು ಕಟ್ಟಿಕೊಂಡು ಮರ ಕೋತಿ, ಮರವೇರುವ ಆಟವನ್ನೆಲ್ಲಾ ಆಡ್ತಾ ಇದ್ರು.  ಇಂತಹ ಹಳ್ಳಿ ಆಟಗಳ ಮಜಾನೇ ಬೇರೆ. ಇಂದಿನ ದಿನಗಳಲ್ಲಿ ಇಂತಹ ಆಟಗಳು ಕಣ್ಮರೆಯಾಗುತ್ತಿದೆ. ಅಂತದ್ರಲ್ಲಿ ಇಲ್ಲೆರಡು ಕರಡಿಗಳು ಕಾಡಿನಲ್ಲಿ ಮರವೇರಿ ಮರಕೋತಿ ಆಟವಾಡಿವೆ. ಈ ಮುದ್ದಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಮರಿ ಕರಡಿಯ ತುಂಟತನಕ್ಕೆ ಪ್ರಾಣಿ ಪ್ರಿಯರು ಮನಸೋತಿದ್ದಾರೆ.

ಈ ವಿಡಿಯೋವನ್ನು ಭಾರತೀಯ ಅರಣ್ಯಧಿಕಾರಿ ಪರ್ವೀನ್ ಕಸ್ವಾನ್ (@ParveenKaswan) ಅವರು ತಮ್ಮ ಅಧೀಕೃತ ಎಕ್ಸ್ ಖಾತೆಯಲ್ಲಿ “ಕರಡಿಗಳು ಮರ ಹತ್ತಲು ಸಾಧ್ಯವಿಲ್ಲ ಎಂದು ಹೇಳ್ತಾರೆ, ಆದರೆ ಇಲ್ಲಿ ತಾಯಿ ಮತ್ತು ಮರಿ ಕರಡಿ ಮರವೇರಿ ಕುಳಿತಿವೆ;  ನಿನ್ನೆ ಈ ದೃಶ್ಯವನ್ನು ಸೆರೆ ಹಿಡಯಲಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ತಾಯಿ ಕರಡಿ ಹಾಗೂ ಮರಿ ಕರಡಿ ಮರವೇರಿ ಕುಳಿತಿರುವ ದೃಶ್ಯವನ್ನು ಕಾಣಬಹುದು. ನಂತರ ತಾಯಿ ಕರಡಿ ಜೋಪಾನ ಕಣೋ ಬಿದ್ಬಿಟ್ಟೀಯಾ ಎಂದು ಹೇಳುತ್ತಾ ನಿಧಾನಕ್ಕೆ  ಮರದಿಂದ ಕೆಳಗೆ ಇಳಿದಿವೆ. ಬಳಿಕ ಮರಿ ಕರಡಿ ಇನ್ನೂ ಸ್ವಲ್ಪ ಆಟವಾಡ್ತೀನಿ ಅಮ್ಮಾ ಎಂದು ಹೇಳುತ್ತಾ ಅಲ್ಲೇ ಪಕ್ಕದಲ್ಲಿದ್ದ ಇನ್ನೊಂದು ಮರವನ್ನು ಹತ್ತಿ ಆಟವಾಡಿದೆ.

ಇದನ್ನೂ ಓದಿ; ಮಹಿಳೆಯ ಮೂಗಿನೊಳಗೆ 100ಕ್ಕೂ ಹೆಚ್ಚು ಜೀವಂತ ಕೀಟಗಳು ಪತ್ತೆ, ಅಚ್ಚರಿಪಟ್ಟ ವೈದ್ಯರು

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 32 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡದುಕೊಂಡಿದ್ದು, ಕರಡಿ ಮರಿಯ ತುಂಟಾಟಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!