AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 

ಈಗಂತೂ ಸೋಶಿಯಲ್ ಮೀಡಿಯಾದಲ್ಲಿ ಸದಾ   ಪ್ರಾಣಿಗಳ ಮರಿಗಳ ಒಂದಲ್ಲಾ ಒಂದು ತುಂಟಾಟದ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ದಟ್ಟ ಕಾಡಿನಲ್ಲಿ  ತಾಯಿ ಮತ್ತು ಮರಿ ಕರಡಿ   ಮರ ಹತ್ತಿ ಇಳಿದು ಆಟವಾಡುವ ದೃಶ್ಯ ಪ್ರಾಣಿ ಪ್ರಿಯರ ಮನ ಗೆದ್ದಿದೆ.

Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 
ಮಾಲಾಶ್ರೀ ಅಂಚನ್​
| Edited By: |

Updated on: May 09, 2024 | 3:31 PM

Share

ಹಿಂದಿನ ಕಾಲದಲ್ಲಿ ಹೆಚ್ಚಾಗಿ ಹಳ್ಳಿ ಕಡೆಗಳಲ್ಲಿ ಸಣ್ಣ ವಯಸ್ಸಿನ ಹುಡುಗರೆಲ್ಲಾ ಗುಂಪು ಕಟ್ಟಿಕೊಂಡು ಮರ ಕೋತಿ, ಮರವೇರುವ ಆಟವನ್ನೆಲ್ಲಾ ಆಡ್ತಾ ಇದ್ರು.  ಇಂತಹ ಹಳ್ಳಿ ಆಟಗಳ ಮಜಾನೇ ಬೇರೆ. ಇಂದಿನ ದಿನಗಳಲ್ಲಿ ಇಂತಹ ಆಟಗಳು ಕಣ್ಮರೆಯಾಗುತ್ತಿದೆ. ಅಂತದ್ರಲ್ಲಿ ಇಲ್ಲೆರಡು ಕರಡಿಗಳು ಕಾಡಿನಲ್ಲಿ ಮರವೇರಿ ಮರಕೋತಿ ಆಟವಾಡಿವೆ. ಈ ಮುದ್ದಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಮರಿ ಕರಡಿಯ ತುಂಟತನಕ್ಕೆ ಪ್ರಾಣಿ ಪ್ರಿಯರು ಮನಸೋತಿದ್ದಾರೆ.

ಈ ವಿಡಿಯೋವನ್ನು ಭಾರತೀಯ ಅರಣ್ಯಧಿಕಾರಿ ಪರ್ವೀನ್ ಕಸ್ವಾನ್ (@ParveenKaswan) ಅವರು ತಮ್ಮ ಅಧೀಕೃತ ಎಕ್ಸ್ ಖಾತೆಯಲ್ಲಿ “ಕರಡಿಗಳು ಮರ ಹತ್ತಲು ಸಾಧ್ಯವಿಲ್ಲ ಎಂದು ಹೇಳ್ತಾರೆ, ಆದರೆ ಇಲ್ಲಿ ತಾಯಿ ಮತ್ತು ಮರಿ ಕರಡಿ ಮರವೇರಿ ಕುಳಿತಿವೆ;  ನಿನ್ನೆ ಈ ದೃಶ್ಯವನ್ನು ಸೆರೆ ಹಿಡಯಲಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ತಾಯಿ ಕರಡಿ ಹಾಗೂ ಮರಿ ಕರಡಿ ಮರವೇರಿ ಕುಳಿತಿರುವ ದೃಶ್ಯವನ್ನು ಕಾಣಬಹುದು. ನಂತರ ತಾಯಿ ಕರಡಿ ಜೋಪಾನ ಕಣೋ ಬಿದ್ಬಿಟ್ಟೀಯಾ ಎಂದು ಹೇಳುತ್ತಾ ನಿಧಾನಕ್ಕೆ  ಮರದಿಂದ ಕೆಳಗೆ ಇಳಿದಿವೆ. ಬಳಿಕ ಮರಿ ಕರಡಿ ಇನ್ನೂ ಸ್ವಲ್ಪ ಆಟವಾಡ್ತೀನಿ ಅಮ್ಮಾ ಎಂದು ಹೇಳುತ್ತಾ ಅಲ್ಲೇ ಪಕ್ಕದಲ್ಲಿದ್ದ ಇನ್ನೊಂದು ಮರವನ್ನು ಹತ್ತಿ ಆಟವಾಡಿದೆ.

ಇದನ್ನೂ ಓದಿ; ಮಹಿಳೆಯ ಮೂಗಿನೊಳಗೆ 100ಕ್ಕೂ ಹೆಚ್ಚು ಜೀವಂತ ಕೀಟಗಳು ಪತ್ತೆ, ಅಚ್ಚರಿಪಟ್ಟ ವೈದ್ಯರು

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 32 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡದುಕೊಂಡಿದ್ದು, ಕರಡಿ ಮರಿಯ ತುಂಟಾಟಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್