AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 

ಈಗಂತೂ ಸೋಶಿಯಲ್ ಮೀಡಿಯಾದಲ್ಲಿ ಸದಾ   ಪ್ರಾಣಿಗಳ ಮರಿಗಳ ಒಂದಲ್ಲಾ ಒಂದು ತುಂಟಾಟದ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ದಟ್ಟ ಕಾಡಿನಲ್ಲಿ  ತಾಯಿ ಮತ್ತು ಮರಿ ಕರಡಿ   ಮರ ಹತ್ತಿ ಇಳಿದು ಆಟವಾಡುವ ದೃಶ್ಯ ಪ್ರಾಣಿ ಪ್ರಿಯರ ಮನ ಗೆದ್ದಿದೆ.

Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 
ಮಾಲಾಶ್ರೀ ಅಂಚನ್​
| Edited By: |

Updated on: May 09, 2024 | 3:31 PM

Share

ಹಿಂದಿನ ಕಾಲದಲ್ಲಿ ಹೆಚ್ಚಾಗಿ ಹಳ್ಳಿ ಕಡೆಗಳಲ್ಲಿ ಸಣ್ಣ ವಯಸ್ಸಿನ ಹುಡುಗರೆಲ್ಲಾ ಗುಂಪು ಕಟ್ಟಿಕೊಂಡು ಮರ ಕೋತಿ, ಮರವೇರುವ ಆಟವನ್ನೆಲ್ಲಾ ಆಡ್ತಾ ಇದ್ರು.  ಇಂತಹ ಹಳ್ಳಿ ಆಟಗಳ ಮಜಾನೇ ಬೇರೆ. ಇಂದಿನ ದಿನಗಳಲ್ಲಿ ಇಂತಹ ಆಟಗಳು ಕಣ್ಮರೆಯಾಗುತ್ತಿದೆ. ಅಂತದ್ರಲ್ಲಿ ಇಲ್ಲೆರಡು ಕರಡಿಗಳು ಕಾಡಿನಲ್ಲಿ ಮರವೇರಿ ಮರಕೋತಿ ಆಟವಾಡಿವೆ. ಈ ಮುದ್ದಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಮರಿ ಕರಡಿಯ ತುಂಟತನಕ್ಕೆ ಪ್ರಾಣಿ ಪ್ರಿಯರು ಮನಸೋತಿದ್ದಾರೆ.

ಈ ವಿಡಿಯೋವನ್ನು ಭಾರತೀಯ ಅರಣ್ಯಧಿಕಾರಿ ಪರ್ವೀನ್ ಕಸ್ವಾನ್ (@ParveenKaswan) ಅವರು ತಮ್ಮ ಅಧೀಕೃತ ಎಕ್ಸ್ ಖಾತೆಯಲ್ಲಿ “ಕರಡಿಗಳು ಮರ ಹತ್ತಲು ಸಾಧ್ಯವಿಲ್ಲ ಎಂದು ಹೇಳ್ತಾರೆ, ಆದರೆ ಇಲ್ಲಿ ತಾಯಿ ಮತ್ತು ಮರಿ ಕರಡಿ ಮರವೇರಿ ಕುಳಿತಿವೆ;  ನಿನ್ನೆ ಈ ದೃಶ್ಯವನ್ನು ಸೆರೆ ಹಿಡಯಲಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ತಾಯಿ ಕರಡಿ ಹಾಗೂ ಮರಿ ಕರಡಿ ಮರವೇರಿ ಕುಳಿತಿರುವ ದೃಶ್ಯವನ್ನು ಕಾಣಬಹುದು. ನಂತರ ತಾಯಿ ಕರಡಿ ಜೋಪಾನ ಕಣೋ ಬಿದ್ಬಿಟ್ಟೀಯಾ ಎಂದು ಹೇಳುತ್ತಾ ನಿಧಾನಕ್ಕೆ  ಮರದಿಂದ ಕೆಳಗೆ ಇಳಿದಿವೆ. ಬಳಿಕ ಮರಿ ಕರಡಿ ಇನ್ನೂ ಸ್ವಲ್ಪ ಆಟವಾಡ್ತೀನಿ ಅಮ್ಮಾ ಎಂದು ಹೇಳುತ್ತಾ ಅಲ್ಲೇ ಪಕ್ಕದಲ್ಲಿದ್ದ ಇನ್ನೊಂದು ಮರವನ್ನು ಹತ್ತಿ ಆಟವಾಡಿದೆ.

ಇದನ್ನೂ ಓದಿ; ಮಹಿಳೆಯ ಮೂಗಿನೊಳಗೆ 100ಕ್ಕೂ ಹೆಚ್ಚು ಜೀವಂತ ಕೀಟಗಳು ಪತ್ತೆ, ಅಚ್ಚರಿಪಟ್ಟ ವೈದ್ಯರು

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 32 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡದುಕೊಂಡಿದ್ದು, ಕರಡಿ ಮರಿಯ ತುಂಟಾಟಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ