AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 

ಈಗಂತೂ ಸೋಶಿಯಲ್ ಮೀಡಿಯಾದಲ್ಲಿ ಸದಾ   ಪ್ರಾಣಿಗಳ ಮರಿಗಳ ಒಂದಲ್ಲಾ ಒಂದು ತುಂಟಾಟದ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ದಟ್ಟ ಕಾಡಿನಲ್ಲಿ  ತಾಯಿ ಮತ್ತು ಮರಿ ಕರಡಿ   ಮರ ಹತ್ತಿ ಇಳಿದು ಆಟವಾಡುವ ದೃಶ್ಯ ಪ್ರಾಣಿ ಪ್ರಿಯರ ಮನ ಗೆದ್ದಿದೆ.

Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 
ಮಾಲಾಶ್ರೀ ಅಂಚನ್​
| Edited By: |

Updated on: May 09, 2024 | 3:31 PM

Share

ಹಿಂದಿನ ಕಾಲದಲ್ಲಿ ಹೆಚ್ಚಾಗಿ ಹಳ್ಳಿ ಕಡೆಗಳಲ್ಲಿ ಸಣ್ಣ ವಯಸ್ಸಿನ ಹುಡುಗರೆಲ್ಲಾ ಗುಂಪು ಕಟ್ಟಿಕೊಂಡು ಮರ ಕೋತಿ, ಮರವೇರುವ ಆಟವನ್ನೆಲ್ಲಾ ಆಡ್ತಾ ಇದ್ರು.  ಇಂತಹ ಹಳ್ಳಿ ಆಟಗಳ ಮಜಾನೇ ಬೇರೆ. ಇಂದಿನ ದಿನಗಳಲ್ಲಿ ಇಂತಹ ಆಟಗಳು ಕಣ್ಮರೆಯಾಗುತ್ತಿದೆ. ಅಂತದ್ರಲ್ಲಿ ಇಲ್ಲೆರಡು ಕರಡಿಗಳು ಕಾಡಿನಲ್ಲಿ ಮರವೇರಿ ಮರಕೋತಿ ಆಟವಾಡಿವೆ. ಈ ಮುದ್ದಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಮರಿ ಕರಡಿಯ ತುಂಟತನಕ್ಕೆ ಪ್ರಾಣಿ ಪ್ರಿಯರು ಮನಸೋತಿದ್ದಾರೆ.

ಈ ವಿಡಿಯೋವನ್ನು ಭಾರತೀಯ ಅರಣ್ಯಧಿಕಾರಿ ಪರ್ವೀನ್ ಕಸ್ವಾನ್ (@ParveenKaswan) ಅವರು ತಮ್ಮ ಅಧೀಕೃತ ಎಕ್ಸ್ ಖಾತೆಯಲ್ಲಿ “ಕರಡಿಗಳು ಮರ ಹತ್ತಲು ಸಾಧ್ಯವಿಲ್ಲ ಎಂದು ಹೇಳ್ತಾರೆ, ಆದರೆ ಇಲ್ಲಿ ತಾಯಿ ಮತ್ತು ಮರಿ ಕರಡಿ ಮರವೇರಿ ಕುಳಿತಿವೆ;  ನಿನ್ನೆ ಈ ದೃಶ್ಯವನ್ನು ಸೆರೆ ಹಿಡಯಲಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ತಾಯಿ ಕರಡಿ ಹಾಗೂ ಮರಿ ಕರಡಿ ಮರವೇರಿ ಕುಳಿತಿರುವ ದೃಶ್ಯವನ್ನು ಕಾಣಬಹುದು. ನಂತರ ತಾಯಿ ಕರಡಿ ಜೋಪಾನ ಕಣೋ ಬಿದ್ಬಿಟ್ಟೀಯಾ ಎಂದು ಹೇಳುತ್ತಾ ನಿಧಾನಕ್ಕೆ  ಮರದಿಂದ ಕೆಳಗೆ ಇಳಿದಿವೆ. ಬಳಿಕ ಮರಿ ಕರಡಿ ಇನ್ನೂ ಸ್ವಲ್ಪ ಆಟವಾಡ್ತೀನಿ ಅಮ್ಮಾ ಎಂದು ಹೇಳುತ್ತಾ ಅಲ್ಲೇ ಪಕ್ಕದಲ್ಲಿದ್ದ ಇನ್ನೊಂದು ಮರವನ್ನು ಹತ್ತಿ ಆಟವಾಡಿದೆ.

ಇದನ್ನೂ ಓದಿ; ಮಹಿಳೆಯ ಮೂಗಿನೊಳಗೆ 100ಕ್ಕೂ ಹೆಚ್ಚು ಜೀವಂತ ಕೀಟಗಳು ಪತ್ತೆ, ಅಚ್ಚರಿಪಟ್ಟ ವೈದ್ಯರು

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 32 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡದುಕೊಂಡಿದ್ದು, ಕರಡಿ ಮರಿಯ ತುಂಟಾಟಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು