AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಬಿಕ್ಕಟ್ಟಿನ ಕುರಿತು ಏಕಕಾಲದಲ್ಲಿ ಆರು ಭಾಷೆಗಳಲ್ಲಿ ವರದಿ ನೀಡಿದ ಪತ್ರಕರ್ತ: ವಿಡಿಯೋ ವೈರಲ್​

ಉಕ್ರೇನ್​ ಬಿಕ್ಕಟ್ಟಿನ ಬಗ್ಗೆ ಪತ್ರಕರ್ತರೊಬ್ಬರು ಏಕಕಾಲದಲ್ಲಿ 6 ಭಾಷೆಗಳಲ್ಲಿ ವರದಿ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಉಕ್ರೇನ್​ ಬಿಕ್ಕಟ್ಟಿನ ಕುರಿತು ಏಕಕಾಲದಲ್ಲಿ ಆರು ಭಾಷೆಗಳಲ್ಲಿ ವರದಿ ನೀಡಿದ ಪತ್ರಕರ್ತ: ವಿಡಿಯೋ ವೈರಲ್​
ಪತ್ರಕರ್ತ
TV9 Web
| Updated By: Pavitra Bhat Jigalemane|

Updated on:Feb 23, 2022 | 11:04 AM

Share

ಉಕ್ರೇನ್​ ಮತ್ತು ರಷ್ಯಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ಅಶಾಂತಿ ನೆಲೆಯೂರಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ  ಪತ್ರಕರ್ತರೊಬ್ಬರ ವಿಡಿಯೋ ವೈರಲ್​ ಆಗಿದೆ. ಉಕ್ರೇನ್​ ಬಿಕ್ಕಟ್ಟಿನ ಬಗ್ಗೆ ಪತ್ರಕರ್ತರೊಬ್ಬರು ಏಕಕಾಲದಲ್ಲಿ 6 ಭಾಷೆಗಳಲ್ಲಿ ವರದಿ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದನ್ನು ನೋಡಿ ನೆಟ್ಟಿಗರು ವಾವ್​ ಎಂದಿದ್ದಾರೆ.  ಫಿಲಿಪ್​ ಕ್ರೌಥರ್​​ ಎನ್ನುವವರು ಟ್ವಿಟರ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು. ಆರು ಭಾಷೆಗಳಲ್ಲಿ ನೇರಪ್ರಸಾರದ ವರದಿ ನೀಡುತ್ತಿರುವ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಇವರು  ಇಂಗ್ಲಿಷ್, ಲಕ್ಸೆಂಬರ್ಗ್, ಸ್ಪ್ಯಾನಿಷ್, ಪೋರ್ಚುಗೀಸ್, ಫ್ರೆಂಚ್ ಮತ್ತು ಜರ್ಮನ್ ಭಾಷೆಗಳಲ್ಲಿ ಒಂದಾದಮೇಲೆ ಒಂದರಂತೆ ಭಾಷೆ ಬದಲಾಯಿಸಿ ವರದಿ ನೀಡಿದ್ದಾರೆ.

ಉಕ್ರೇನ್​ ರಾಜಧಾನಿ Kyivನಿಂದ ನೇರಪ್ರಸಾರದಲ್ಲಿ ಆರು ಭಾಷೆಗಳಲ್ಲಿ ವರದಿ ನೀಡಿದ್ದಾರೆ. ಸದ್ಯ ಜಗತ್ತಿನಾದ್ಯಂತ ಎಲ್ಲರ ದೃಷ್ಟಿ ಮಾಧ್ಯಮಗಳಿಗೆ ಅದಕ್ಕೆ ಕಾರಣ ಉಕ್ರೇನ್​ ಮತ್ತು ರಷ್ಯಾ ನಡುವುನ ಸಂಘರ್ಷ. ಹೀಗಾಗಿ ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯಲು ಮಾಧ್ಯಮಗಳನ್ನು  ನೋಡುವ ಜನರಿಗೆ ಒಬ್ಬನೇ ವ್ಯಕ್ತಿ ಆರು ಭಾಷೆಗಳಲ್ಲಿ ಕಾಣಿಸಿಕೊಳ್ಳುತ್ತಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ.

ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. 8 ವರ್ಷಗಳಿಂದ ನಡೆಯುತ್ತಿದ ಸಂಘರ್ಷ ಈಗ ಉದ್ವಿಗ್ವಗೊಂಡಿದೆ. ಆದರೆ ರಾಜಧಾನಿಉ Kyiv ಶಾಂತವಾಗಿದೆ ಎಂದು ನೇರಪ್ರಸಾರದಲ್ಲಿ ವರದಿ ನೀಡಿದ್ದಾರೆ. ಸದ್ಯ ಈ ವಿಡಿಯೋ 17 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

ಜಗತ್ತಿನ ಸಕ್ರಿಯ ಜ್ವಾಲಾಮುಖಿ ಮೌಂಟ್​ ಎಟ್ನಾ ಸ್ಫೋಟ: 12 ಕಿಮೀ ವ್ಯಾಪಿಸಿದ ಹೊಗೆ-ವಿಡಿಯೋ ವೈರಲ್​

Published On - 11:00 am, Wed, 23 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ