AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು

ಎಫ್‌ಐಆರ್‌ ಪ್ರಕಾರ ಕೆಲ ದಿನಗಳ ಹಿಂದೆ ನ್ಯಾಯಾಧೀಶರ ಕುಟುಂಬ ಮತ್ತು ನೆರೆಮನೆಯ ಅಹ್ಮದ್‌ ಅವರ ಕುಟುಂಬದವರ ನಡುವೆ ನಾಯಿಯ ವಿಷಯಕ್ಕೆ ವಾಗ್ವಾದ ನಡೆದಿದ್ದು, ಅಹ್ಮದ್ ಅವರ ಪುತ್ರ ಖಾದಿರ್ ಖಾನ್ ನ್ಯಾಯಾಧೀಶರ ಕುಟುಂಬ ಸದಸ್ಯರ ಮೇಲೆ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

Uttar Pradesh: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು
ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು
ಅಕ್ಷತಾ ವರ್ಕಾಡಿ
|

Updated on: May 25, 2024 | 12:03 PM

Share

ಉತ್ತರ ಪ್ರದೇಶದ ಬರೇಲಿಯಲ್ಲಿ ಸಿವಿಲ್ ನ್ಯಾಯಾಧೀಶರೊಬ್ಬರ ಮನೆಯಿಂದ ನಾಯಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ನೆರೆಮನೆಯ ಅಹ್ಮದ್ ತಮ್ಮ ಸಾಕು ನಾಯಿಯನ್ನು ಕದ್ದಿದ್ದಾನೆ ಎಂದು ನ್ಯಾಯಾಧೀಶರ ಕುಟುಂಬ ಆರೋಪಿಸಿದೆ. ನ್ಯಾಯಾಧೀಶರ ಕುಟುಂಬದ ದೂರಿನ ಮೇರೆಗೆ ಪೊಲೀಸರು ಪ್ರಾಣಿ ಹಿಂಸೆ ಕಾಯ್ದೆಯಡಿ 12ರಕ್ಕೂ ಹೆಚ್ಚಿನ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನ್ಯಾಯಾಧೀಶರು ಪ್ರಸ್ತುತ ಹಾರ್ಡೋಯ್‌ನಲ್ಲಿ ನೇಮಕಗೊಂಡಿದ್ದು, ಅವರ ಕುಟುಂಬವು ಬರೇಲಿಯ ಸನ್‌ಸಿಟಿ ಕಾಲೋನಿಯಲ್ಲಿ ನೆಲೆಸಿದೆ. ಎಫ್‌ಐಆರ್‌ ಪ್ರಕಾರ ಕೆಲ ದಿನಗಳ ಹಿಂದೆ ನ್ಯಾಯಾಧೀಶರ ಕುಟುಂಬ ಮತ್ತು ಅಹ್ಮದ್‌ ಅವರ ಕುಟುಂಬದವರ ನಡುವೆ ವಾಗ್ವಾದ ನಡೆದಿದ್ದು, ಅದೇ ಕಾಲೋನಿಯಲ್ಲಿ ವಾಸವಾಗಿರುವ ಡಂಪಿ ಅಹ್ಮದ್ ಅವರ ಪುತ್ರ ಖಾದಿರ್ ಖಾನ್ ನ್ಯಾಯಾಧೀಶರ ಕುಟುಂಬ ಸದಸ್ಯರನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಮೇ 16ರಂದು ರಾತ್ರಿ 9:45ರ ಸುಮಾರಿಗೆ ಡಂಪಿ ಅಹ್ಮದ್ ಅವರ ಪತ್ನಿ ನ್ಯಾಯಾಧೀಶರ ನಿವಾಸಕ್ಕೆ ಆಗಮಿಸಿ ಅವರ ನಾಯಿ ತನ್ನ ಮಗಳೊಂದಿಗೆ ತನ್ನ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದ್ದಾರೆ. ನನ್ನ ಮಗಳು ಮತ್ತು ನನ್ನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಿದ್ದು, ನಂತರ ವಿಷಯದ ಬಗ್ಗೆ ಸುದೀರ್ಘ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಘಟನೆಯ ಬಗ್ಗೆ ನ್ಯಾಯಾಧೀಶರಿಗೆ ಮಾಹಿತಿ ನೀಡಲಾಗಿದ್ದು, ಅವರು ಲಕ್ನೋದಿಂದ ಬರೇಲಿ ಪೊಲೀಸರಿಗೆ ಕರೆ ಮಾಡಿ ಇಡೀ ಘಟನೆಯ ಬಗ್ಗೆ ಫೋನ್ ಮೂಲಕ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ. ನಂತರ ಏರಿಯಾ ಅಧಿಕಾರಿ ಅನಿತಾ ಚೌಹಾಣ್ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಬಳಿಕ ಪೊಲೀಸರು ನ್ಯಾಯಾಧೀಶರ ನಾಯಿಯನ್ನು ಹುಡುಕಲು ಮುಂದಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ