AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು

ಎಫ್‌ಐಆರ್‌ ಪ್ರಕಾರ ಕೆಲ ದಿನಗಳ ಹಿಂದೆ ನ್ಯಾಯಾಧೀಶರ ಕುಟುಂಬ ಮತ್ತು ನೆರೆಮನೆಯ ಅಹ್ಮದ್‌ ಅವರ ಕುಟುಂಬದವರ ನಡುವೆ ನಾಯಿಯ ವಿಷಯಕ್ಕೆ ವಾಗ್ವಾದ ನಡೆದಿದ್ದು, ಅಹ್ಮದ್ ಅವರ ಪುತ್ರ ಖಾದಿರ್ ಖಾನ್ ನ್ಯಾಯಾಧೀಶರ ಕುಟುಂಬ ಸದಸ್ಯರ ಮೇಲೆ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

Uttar Pradesh: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು
ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು
ಅಕ್ಷತಾ ವರ್ಕಾಡಿ
|

Updated on: May 25, 2024 | 12:03 PM

Share

ಉತ್ತರ ಪ್ರದೇಶದ ಬರೇಲಿಯಲ್ಲಿ ಸಿವಿಲ್ ನ್ಯಾಯಾಧೀಶರೊಬ್ಬರ ಮನೆಯಿಂದ ನಾಯಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ನೆರೆಮನೆಯ ಅಹ್ಮದ್ ತಮ್ಮ ಸಾಕು ನಾಯಿಯನ್ನು ಕದ್ದಿದ್ದಾನೆ ಎಂದು ನ್ಯಾಯಾಧೀಶರ ಕುಟುಂಬ ಆರೋಪಿಸಿದೆ. ನ್ಯಾಯಾಧೀಶರ ಕುಟುಂಬದ ದೂರಿನ ಮೇರೆಗೆ ಪೊಲೀಸರು ಪ್ರಾಣಿ ಹಿಂಸೆ ಕಾಯ್ದೆಯಡಿ 12ರಕ್ಕೂ ಹೆಚ್ಚಿನ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನ್ಯಾಯಾಧೀಶರು ಪ್ರಸ್ತುತ ಹಾರ್ಡೋಯ್‌ನಲ್ಲಿ ನೇಮಕಗೊಂಡಿದ್ದು, ಅವರ ಕುಟುಂಬವು ಬರೇಲಿಯ ಸನ್‌ಸಿಟಿ ಕಾಲೋನಿಯಲ್ಲಿ ನೆಲೆಸಿದೆ. ಎಫ್‌ಐಆರ್‌ ಪ್ರಕಾರ ಕೆಲ ದಿನಗಳ ಹಿಂದೆ ನ್ಯಾಯಾಧೀಶರ ಕುಟುಂಬ ಮತ್ತು ಅಹ್ಮದ್‌ ಅವರ ಕುಟುಂಬದವರ ನಡುವೆ ವಾಗ್ವಾದ ನಡೆದಿದ್ದು, ಅದೇ ಕಾಲೋನಿಯಲ್ಲಿ ವಾಸವಾಗಿರುವ ಡಂಪಿ ಅಹ್ಮದ್ ಅವರ ಪುತ್ರ ಖಾದಿರ್ ಖಾನ್ ನ್ಯಾಯಾಧೀಶರ ಕುಟುಂಬ ಸದಸ್ಯರನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಮೇ 16ರಂದು ರಾತ್ರಿ 9:45ರ ಸುಮಾರಿಗೆ ಡಂಪಿ ಅಹ್ಮದ್ ಅವರ ಪತ್ನಿ ನ್ಯಾಯಾಧೀಶರ ನಿವಾಸಕ್ಕೆ ಆಗಮಿಸಿ ಅವರ ನಾಯಿ ತನ್ನ ಮಗಳೊಂದಿಗೆ ತನ್ನ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದ್ದಾರೆ. ನನ್ನ ಮಗಳು ಮತ್ತು ನನ್ನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಿದ್ದು, ನಂತರ ವಿಷಯದ ಬಗ್ಗೆ ಸುದೀರ್ಘ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಘಟನೆಯ ಬಗ್ಗೆ ನ್ಯಾಯಾಧೀಶರಿಗೆ ಮಾಹಿತಿ ನೀಡಲಾಗಿದ್ದು, ಅವರು ಲಕ್ನೋದಿಂದ ಬರೇಲಿ ಪೊಲೀಸರಿಗೆ ಕರೆ ಮಾಡಿ ಇಡೀ ಘಟನೆಯ ಬಗ್ಗೆ ಫೋನ್ ಮೂಲಕ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ. ನಂತರ ಏರಿಯಾ ಅಧಿಕಾರಿ ಅನಿತಾ ಚೌಹಾಣ್ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಬಳಿಕ ಪೊಲೀಸರು ನ್ಯಾಯಾಧೀಶರ ನಾಯಿಯನ್ನು ಹುಡುಕಲು ಮುಂದಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ