AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು

ಎಫ್‌ಐಆರ್‌ ಪ್ರಕಾರ ಕೆಲ ದಿನಗಳ ಹಿಂದೆ ನ್ಯಾಯಾಧೀಶರ ಕುಟುಂಬ ಮತ್ತು ನೆರೆಮನೆಯ ಅಹ್ಮದ್‌ ಅವರ ಕುಟುಂಬದವರ ನಡುವೆ ನಾಯಿಯ ವಿಷಯಕ್ಕೆ ವಾಗ್ವಾದ ನಡೆದಿದ್ದು, ಅಹ್ಮದ್ ಅವರ ಪುತ್ರ ಖಾದಿರ್ ಖಾನ್ ನ್ಯಾಯಾಧೀಶರ ಕುಟುಂಬ ಸದಸ್ಯರ ಮೇಲೆ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

Uttar Pradesh: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು
ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು
ಅಕ್ಷತಾ ವರ್ಕಾಡಿ
|

Updated on: May 25, 2024 | 12:03 PM

Share

ಉತ್ತರ ಪ್ರದೇಶದ ಬರೇಲಿಯಲ್ಲಿ ಸಿವಿಲ್ ನ್ಯಾಯಾಧೀಶರೊಬ್ಬರ ಮನೆಯಿಂದ ನಾಯಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ನೆರೆಮನೆಯ ಅಹ್ಮದ್ ತಮ್ಮ ಸಾಕು ನಾಯಿಯನ್ನು ಕದ್ದಿದ್ದಾನೆ ಎಂದು ನ್ಯಾಯಾಧೀಶರ ಕುಟುಂಬ ಆರೋಪಿಸಿದೆ. ನ್ಯಾಯಾಧೀಶರ ಕುಟುಂಬದ ದೂರಿನ ಮೇರೆಗೆ ಪೊಲೀಸರು ಪ್ರಾಣಿ ಹಿಂಸೆ ಕಾಯ್ದೆಯಡಿ 12ರಕ್ಕೂ ಹೆಚ್ಚಿನ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನ್ಯಾಯಾಧೀಶರು ಪ್ರಸ್ತುತ ಹಾರ್ಡೋಯ್‌ನಲ್ಲಿ ನೇಮಕಗೊಂಡಿದ್ದು, ಅವರ ಕುಟುಂಬವು ಬರೇಲಿಯ ಸನ್‌ಸಿಟಿ ಕಾಲೋನಿಯಲ್ಲಿ ನೆಲೆಸಿದೆ. ಎಫ್‌ಐಆರ್‌ ಪ್ರಕಾರ ಕೆಲ ದಿನಗಳ ಹಿಂದೆ ನ್ಯಾಯಾಧೀಶರ ಕುಟುಂಬ ಮತ್ತು ಅಹ್ಮದ್‌ ಅವರ ಕುಟುಂಬದವರ ನಡುವೆ ವಾಗ್ವಾದ ನಡೆದಿದ್ದು, ಅದೇ ಕಾಲೋನಿಯಲ್ಲಿ ವಾಸವಾಗಿರುವ ಡಂಪಿ ಅಹ್ಮದ್ ಅವರ ಪುತ್ರ ಖಾದಿರ್ ಖಾನ್ ನ್ಯಾಯಾಧೀಶರ ಕುಟುಂಬ ಸದಸ್ಯರನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಮೇ 16ರಂದು ರಾತ್ರಿ 9:45ರ ಸುಮಾರಿಗೆ ಡಂಪಿ ಅಹ್ಮದ್ ಅವರ ಪತ್ನಿ ನ್ಯಾಯಾಧೀಶರ ನಿವಾಸಕ್ಕೆ ಆಗಮಿಸಿ ಅವರ ನಾಯಿ ತನ್ನ ಮಗಳೊಂದಿಗೆ ತನ್ನ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದ್ದಾರೆ. ನನ್ನ ಮಗಳು ಮತ್ತು ನನ್ನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಿದ್ದು, ನಂತರ ವಿಷಯದ ಬಗ್ಗೆ ಸುದೀರ್ಘ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಘಟನೆಯ ಬಗ್ಗೆ ನ್ಯಾಯಾಧೀಶರಿಗೆ ಮಾಹಿತಿ ನೀಡಲಾಗಿದ್ದು, ಅವರು ಲಕ್ನೋದಿಂದ ಬರೇಲಿ ಪೊಲೀಸರಿಗೆ ಕರೆ ಮಾಡಿ ಇಡೀ ಘಟನೆಯ ಬಗ್ಗೆ ಫೋನ್ ಮೂಲಕ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ. ನಂತರ ಏರಿಯಾ ಅಧಿಕಾರಿ ಅನಿತಾ ಚೌಹಾಣ್ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಬಳಿಕ ಪೊಲೀಸರು ನ್ಯಾಯಾಧೀಶರ ನಾಯಿಯನ್ನು ಹುಡುಕಲು ಮುಂದಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!