Viral Video: ಆಕ್ಟಿಂಗ್‌ ಬಿಟ್ಟು ಜ್ಯೂಸ್‌ ಅಂಗಡಿ ಇಟ್ರಾ ಹೃತಿಕ್‌ ರೋಷನ್‌? ಇದೇನು ಹೊಸ ಕಥೆ

ಜಗತ್ತಿನಲ್ಲಿ ಒಂದೇ ರೂಪವನ್ನು ಹೊಂದಿರುವ ಏಳು ಜನರಿರುತ್ತಾರೆ ಎಂಬ ನಂಬಿಕೆಯಿದೆ. ಆದ್ರೆ ನಿಜವಾಗಿಯೂ ಈ ಒಂದೇ ರೀತಿ ಕಾಣುವ ಏಳು ಜನ ಇದ್ದಾರೋ ಇಲ್ವೋ ಗೊತ್ತಿಲ್ಲ, ಆದರೀಗ ಬಾಲಿವುಡ್‌ ಸ್ಟಾರ್‌ ನಟ ಹೃತಿಕ್‌ ರೋಷನ್‌ ಅವರನ್ನು ಹೋಲುವ ತದ್ರೂಪಿಯೊಬ್ಬರು ಸಿಕ್ಕಿದ್ದು, ಈ ವ್ಯಕ್ತಿ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದಾರೆ.

Viral Video: ಆಕ್ಟಿಂಗ್‌ ಬಿಟ್ಟು ಜ್ಯೂಸ್‌ ಅಂಗಡಿ ಇಟ್ರಾ ಹೃತಿಕ್‌ ರೋಷನ್‌? ಇದೇನು ಹೊಸ ಕಥೆ
ವೈರಲ್​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 03, 2024 | 5:59 PM

ಈ ಪ್ರಪಂಚದಲ್ಲಿ ಒಬ್ಬರಂತೆ ಏಳು ಮಂದಿ ಇರುತ್ತಾರೆ ಎಂಬ ನಂಬಿಕೆ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಒಬ್ಬರಂತೆ ಕಾಣುವ ಮತ್ತೊಬ್ಬರು ಸಿಕ್ಕಿದ್ದೂ ಉಂಟು. ಅದರಲ್ಲೂ ಯಾರಾದರೂ ಸಿನೆಮಾ ತಾರೆಗಳ ಹೋಲಿಕೆ ಹೊಂದಿದ್ದರೆ ಅವರು ಬಹಳ ಬೇಗ ಗುರುತಿಸಲ್ಪಡುವುದರ ಜೊತೆಗೆ ಸಖತ್‌ ಫೇಮಸ್‌ ಕೂಡಾ ಅಗುತ್ತಾರೆ. ಅದೇ ರೀತಿ ಇದೀಗ ಬಾಲಿವುಡ್‌ ಸ್ಟಾರ್‌ ನಟ ಹೃತಿಕ್‌ ರೋಷನ್‌ ಅವರನ್ನೇ ಹೋಲುವ ತದ್ರೂಪಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ.

ಬಾಲಿವುಡ್‌ ಖ್ಯಾತ ನಟ ಹೃತಿಕ್‌ ರೋಷನ್‌ ಪ್ರಪಂಚದ ಅತಿ ಸುಂದರ ವ್ಯಕ್ತಿ ಎಂಬ ಬಿರುದಿಗೆ ಪಾತ್ರರಾದವರು. ಇದೀಗ ಈ ನಟನನ್ನೇ ಹೋಲುವ ತದ್ರೂಪಿಯೊಬ್ಬರು ಸಿಕ್ಕಿದ್ದಾರೆ. ಈ ವ್ಯಕ್ತಿ ಮಹರಾಷ್ಟ್ರದ ತಾಸ್ಗಾಂವ್‌ ಎಂಬಲ್ಲಿ ಜ್ಯೂಸ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಇವರನ್ನು ನೋಡಿ ಅರೇ ಹೃತಿಕ್‌ ರೋಷನ್‌ ನಟನೆ ಬಿಟ್ಟು ಜ್ಯೂಸ್‌ ಮಾರೋ ಕೆಲಸಕ್ಕೆ ಏನಾದ್ರೂ ಸೇರ್ಕೊಂಡ್ರಾ ಎಂದು ನೋಡುಗರು ಫುಲ್‌ ಕನ್ಫ್ಯೂಷನ್‌ ಆಗಿದ್ದಾರೆ.

bramha_juice_tagaon ಹೆಸರಿನ ಇನ್‌ಸ್ಟಾಗ್ರಾಮ್‌ ಪೇಜ್‌ ಒಂದರಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನೋಡಲು ಥೇಟ್‌ ಬಾಲಿವುಡ್‌ ಸ್ಟಾರ್‌ ಹೃತಿಕ್‌ ರೋಷನ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರು ಗ್ರಾಹಕರಿಗೆ ಜ್ಯೂಸ್‌ ಸರ್ವ್‌ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಇದು ವಿಶ್ವದ ಮೊದಲ ಎಐ ಬಟ್ಟೆ; ಹೇಗಿದೆ ನೋಡಿ ಈ ರೋಬೋಟಿಕ್‌ ಸ್ನೇಕ್‌ ಡ್ರೆಸ್‌

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 21.1 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಕೆಲವರು ಹೃತಿಕ್‌ ರೋಷನ್‌ ತದ್ರೂಪಿಯನ್ನು ನೋಡಿ ಅಚ್ಚರಿ ಪಟ್ಟರೆ ಇನ್ನೂ ಹಲವರು ಇದು ಎಐ ಜನರೇಟೆಡ್‌ ವಿಡಿಯೋ ಎಂದು ಕಾಮೆಂಟ್ಸ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?