AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಕ್ಟಿಂಗ್‌ ಬಿಟ್ಟು ಜ್ಯೂಸ್‌ ಅಂಗಡಿ ಇಟ್ರಾ ಹೃತಿಕ್‌ ರೋಷನ್‌? ಇದೇನು ಹೊಸ ಕಥೆ

ಜಗತ್ತಿನಲ್ಲಿ ಒಂದೇ ರೂಪವನ್ನು ಹೊಂದಿರುವ ಏಳು ಜನರಿರುತ್ತಾರೆ ಎಂಬ ನಂಬಿಕೆಯಿದೆ. ಆದ್ರೆ ನಿಜವಾಗಿಯೂ ಈ ಒಂದೇ ರೀತಿ ಕಾಣುವ ಏಳು ಜನ ಇದ್ದಾರೋ ಇಲ್ವೋ ಗೊತ್ತಿಲ್ಲ, ಆದರೀಗ ಬಾಲಿವುಡ್‌ ಸ್ಟಾರ್‌ ನಟ ಹೃತಿಕ್‌ ರೋಷನ್‌ ಅವರನ್ನು ಹೋಲುವ ತದ್ರೂಪಿಯೊಬ್ಬರು ಸಿಕ್ಕಿದ್ದು, ಈ ವ್ಯಕ್ತಿ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದಾರೆ.

Viral Video: ಆಕ್ಟಿಂಗ್‌ ಬಿಟ್ಟು ಜ್ಯೂಸ್‌ ಅಂಗಡಿ ಇಟ್ರಾ ಹೃತಿಕ್‌ ರೋಷನ್‌? ಇದೇನು ಹೊಸ ಕಥೆ
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 03, 2024 | 5:59 PM

ಈ ಪ್ರಪಂಚದಲ್ಲಿ ಒಬ್ಬರಂತೆ ಏಳು ಮಂದಿ ಇರುತ್ತಾರೆ ಎಂಬ ನಂಬಿಕೆ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಒಬ್ಬರಂತೆ ಕಾಣುವ ಮತ್ತೊಬ್ಬರು ಸಿಕ್ಕಿದ್ದೂ ಉಂಟು. ಅದರಲ್ಲೂ ಯಾರಾದರೂ ಸಿನೆಮಾ ತಾರೆಗಳ ಹೋಲಿಕೆ ಹೊಂದಿದ್ದರೆ ಅವರು ಬಹಳ ಬೇಗ ಗುರುತಿಸಲ್ಪಡುವುದರ ಜೊತೆಗೆ ಸಖತ್‌ ಫೇಮಸ್‌ ಕೂಡಾ ಅಗುತ್ತಾರೆ. ಅದೇ ರೀತಿ ಇದೀಗ ಬಾಲಿವುಡ್‌ ಸ್ಟಾರ್‌ ನಟ ಹೃತಿಕ್‌ ರೋಷನ್‌ ಅವರನ್ನೇ ಹೋಲುವ ತದ್ರೂಪಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ.

ಬಾಲಿವುಡ್‌ ಖ್ಯಾತ ನಟ ಹೃತಿಕ್‌ ರೋಷನ್‌ ಪ್ರಪಂಚದ ಅತಿ ಸುಂದರ ವ್ಯಕ್ತಿ ಎಂಬ ಬಿರುದಿಗೆ ಪಾತ್ರರಾದವರು. ಇದೀಗ ಈ ನಟನನ್ನೇ ಹೋಲುವ ತದ್ರೂಪಿಯೊಬ್ಬರು ಸಿಕ್ಕಿದ್ದಾರೆ. ಈ ವ್ಯಕ್ತಿ ಮಹರಾಷ್ಟ್ರದ ತಾಸ್ಗಾಂವ್‌ ಎಂಬಲ್ಲಿ ಜ್ಯೂಸ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಇವರನ್ನು ನೋಡಿ ಅರೇ ಹೃತಿಕ್‌ ರೋಷನ್‌ ನಟನೆ ಬಿಟ್ಟು ಜ್ಯೂಸ್‌ ಮಾರೋ ಕೆಲಸಕ್ಕೆ ಏನಾದ್ರೂ ಸೇರ್ಕೊಂಡ್ರಾ ಎಂದು ನೋಡುಗರು ಫುಲ್‌ ಕನ್ಫ್ಯೂಷನ್‌ ಆಗಿದ್ದಾರೆ.

bramha_juice_tagaon ಹೆಸರಿನ ಇನ್‌ಸ್ಟಾಗ್ರಾಮ್‌ ಪೇಜ್‌ ಒಂದರಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನೋಡಲು ಥೇಟ್‌ ಬಾಲಿವುಡ್‌ ಸ್ಟಾರ್‌ ಹೃತಿಕ್‌ ರೋಷನ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರು ಗ್ರಾಹಕರಿಗೆ ಜ್ಯೂಸ್‌ ಸರ್ವ್‌ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಇದು ವಿಶ್ವದ ಮೊದಲ ಎಐ ಬಟ್ಟೆ; ಹೇಗಿದೆ ನೋಡಿ ಈ ರೋಬೋಟಿಕ್‌ ಸ್ನೇಕ್‌ ಡ್ರೆಸ್‌

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 21.1 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಕೆಲವರು ಹೃತಿಕ್‌ ರೋಷನ್‌ ತದ್ರೂಪಿಯನ್ನು ನೋಡಿ ಅಚ್ಚರಿ ಪಟ್ಟರೆ ಇನ್ನೂ ಹಲವರು ಇದು ಎಐ ಜನರೇಟೆಡ್‌ ವಿಡಿಯೋ ಎಂದು ಕಾಮೆಂಟ್ಸ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್