AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Asteroid Day 2021: ಇಂದು ಕ್ಷುದ್ರಗ್ರಹ ದಿನ; ಇದರಿಂದ ಉಂಟಾಗುವ ಹಾನಿಯ ಬಗ್ಗೆ ನೀವು ತಿಳಿಯಲೇಬೇಕು

ಹಲವು ಸಂದರ್ಭಗಳಲ್ಲಿ ಅತೀದೊಡ್ಡ ಕ್ಷುದ್ರಗ್ರಹಗಳು ಭೂಮಿಯ ಸನಿಹದಲ್ಲಿಯೇ ಹಾದು ಹೋಗುತ್ತವೆ. ಇದು ಅಪಾಯವನ್ನು ತಂದೊಡ್ಡಬಹುದು ಅಥವಾ ಹಾನಿಯುಂಟು ಮಾಡಬಹುದು.

World Asteroid Day 2021: ಇಂದು ಕ್ಷುದ್ರಗ್ರಹ ದಿನ; ಇದರಿಂದ ಉಂಟಾಗುವ ಹಾನಿಯ ಬಗ್ಗೆ ನೀವು ತಿಳಿಯಲೇಬೇಕು
ಇಂದು ಕ್ಷುದ್ರಗ್ರಹ ದಿನ
TV9 Web
| Edited By: |

Updated on:Jun 30, 2021 | 1:06 PM

Share

ಇಂದು ಜೂನ್​ 30 ಕ್ಷುದ್ರಗ್ರಹ ದಿನವೆಂದು ಗುರುತಿಸಲಾಗಿದೆ. ಕ್ಷುದ್ರಗ್ರಹ ಭೂಮಿಗೆ ಅಪ್ಪಳಿಸುವದರಿಂದ ಉಂಟಾಗುವ ಅಪಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. 2016ರಲ್ಲಿ ಈ ದಿನದವನ್ನು ಆಚರಿಸುವ ಕುರಿತಾಗಿ ವಿಶ್ವಸಂಸ್ಥೆ ಒಪ್ಪಿಗೆ ನೀಡಿತು. ಆ ಬಳಿಕ ಪ್ರತೀ ವರ್ಷ ಜಗತ್ತಿನಾದ್ಯಂತ ಈ ದಿನವನ್ನು ಆಚರಿಸಲಾಗುತ್ತಿದೆ.

ಸೌರಮಂಡಲದಲ್ಲಿ ಮಂಗಳ ಮತ್ತು ಗುರು ಗ್ರಹಗಳ ಮಧ್ಯದ ಕಕ್ಷೆಯಲ್ಲಿ ಸೂರ್ಯನ ಸುತ್ತ ಸುತ್ತುತ್ತಿರುವ ಆಕಾಶ ಕಾಯಗಳನ್ನು ಕ್ಷುದ್ರ ಗ್ರಹಗಳು ಎಂದು ಗುರುತಿಸಲಾಗಿದೆ. ಯುರೋಪಿಯನ್​ ಬಾಹ್ಯಾಕಾಶ ಏಜೆನ್ಸಿಯ ಪ್ರಕಾರ, 2013ರಲ್ಲಿ ನಡೆದ ಚೆಲ್ಯಾಬಿನ್ಸ್ಕ್​ ಘಟನೆಯಂತೆ ಕೆಲವೊಮ್ಮೆ ಭೂಮಿಗೆ ಅಪ್ಪಳಿಸುವ ಕ್ಷುದ್ರ ಗ್ರಹಗಳಿಂದ ಗಾಜು ಪುಡಿ-ಪುಡಿಯಾಗಿ ಬೀಳಬಹುದು, ದೊಡ್ಡ ಮಟ್ಟದ ಸ್ಪೋಟವೇ ಸಂಭವಿಸಬಹುದು ಅಥವಾ ಕಟ್ಟಡಗಳು ಕುಸಿದು ಬೀಳಬಹುದು. ಈ ಮಧ್ಯೆ ಜನರಿಗೆ ಗಂಭೀರ ಗಾಯಗಳಾಗಬಹುದು. ಈ ಕುರಿತಾಗಿ ಜನರಿಗೆ ಜಾಗೃತಿ ಮೂಡಿಸಲು ಕ್ಷುದ್ರ ಗ್ರಹ ದಿನವನ್ನು ಆಚರಿಸಲಾಗುತ್ತದೆ.

ಹಲವು ಸಂದರ್ಭಗಳಲ್ಲಿ ಅತೀದೊಡ್ಡ ಕ್ಷುದ್ರ ಗ್ರಹಗಳು ಭೂಮಿಯ ಸನಿಹದಲ್ಲಿಯೇ ಹಾದು ಹೋಗುತ್ತವೆ. ಇದು ಅಪಾಯವನ್ನು ತಂದೊಡ್ಡಬಹುದು ಅಥವಾ ಹಾನಿಯುಂಟು ಮಾಡಬಹುದು. ಹಾಗಾಗಿಯೇ ಖಗೋಳ ಶಾಸ್ತ್ರಜ್ಞರು ಈ ಕುರಿತಂತೆ ಎಚ್ಚರವಹಿಸುತ್ತಾರೆ. ಈ ಕ್ಷುದ್ರ ಗ್ರಹಗಳು ಏನು? ಮತ್ತು ಈ ಕ್ಷುದ್ರ ಗ್ರಹಗಳಿಂದ ಏನೆಲ್ಲಾ ಪರಿಣಾಮಗಳು ಬೀರಬಹುದು ಎಂದು ನಿರಂತರವಾಗಿ ಸಂಶೋಧನೆ ನಡೆಸುತ್ತಲೇ ಇರುತ್ತಾರೆ.

ಕ್ಷುದ್ರಗ್ರಹದ ಅಪಾಯವನ್ನು ವಿಜ್ಞಾನಿಗಳು ಹೇಗೆ ಲೆಕ್ಕಾಚಾರ ಹಾಕುತ್ತಾರೆ ಎಂಬ ಪ್ರಶ್ನೆಗೆ ಕಳೆದ ತಿಂಗಳು ನಡೆದ ಘಟನೆ ಉದಾಹರಣೆ. ಅತ್ಯಂತ ಅಪಾಯಕಾರಿ ಕ್ಷುದ್ರಗ್ರಹವನ್ನು ಅಪೋಫಿಸ್​ ಎಂದು ಗುರುತಿಸಿದರು. ಮೊದಲಿಗೆ ಅಪೋಫಿಸ್​ ಚಲನೆಯನ್ನು ಪತ್ತೆಹಚ್ಚಲಾಯಿತು. ನಿಖರವಾದ ಕಕ್ಷೆಯ ವೀಕ್ಷಣೆಯೊಂದಿಗೆ ಹೊಸದಾದ ವೀಕ್ಷಣಾ ಅಭಿಯಾನದ ಮೂಲಕ​ ಚಲನೆಯನ್ನು ಗುರುತಿಸಲಾಯಿತು.

ಇದನ್ನೂ ಓದಿ:

Margherita Hack: ಖಗೋಳ ಭೌತಶಾಸ್ತ್ರಜ್ಞೆ ಮಾರ್ಗರಿಟಾ ಹ್ಯಾಕ್​​ 99ನೇ ಜನ್ಮದಿನಕ್ಕೆ ಗೂಗಲ್ ಡೂಡಲ್​ ವಿಶೇಷ ನಮನ

ಭೂಮಿಯತ್ತ ನುಗ್ಗಿ ಬರುತ್ತಿದೆ ಬಸ್​ ಗಾತ್ರದ ಕ್ಷುದ್ರ ಗ್ರಹ.. SW 2020 ನಾಳೆ ಗೋಚರ

Published On - 12:57 pm, Wed, 30 June 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ