AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Asteroid Day 2021: ಇಂದು ಕ್ಷುದ್ರಗ್ರಹ ದಿನ; ಇದರಿಂದ ಉಂಟಾಗುವ ಹಾನಿಯ ಬಗ್ಗೆ ನೀವು ತಿಳಿಯಲೇಬೇಕು

ಹಲವು ಸಂದರ್ಭಗಳಲ್ಲಿ ಅತೀದೊಡ್ಡ ಕ್ಷುದ್ರಗ್ರಹಗಳು ಭೂಮಿಯ ಸನಿಹದಲ್ಲಿಯೇ ಹಾದು ಹೋಗುತ್ತವೆ. ಇದು ಅಪಾಯವನ್ನು ತಂದೊಡ್ಡಬಹುದು ಅಥವಾ ಹಾನಿಯುಂಟು ಮಾಡಬಹುದು.

World Asteroid Day 2021: ಇಂದು ಕ್ಷುದ್ರಗ್ರಹ ದಿನ; ಇದರಿಂದ ಉಂಟಾಗುವ ಹಾನಿಯ ಬಗ್ಗೆ ನೀವು ತಿಳಿಯಲೇಬೇಕು
ಇಂದು ಕ್ಷುದ್ರಗ್ರಹ ದಿನ
TV9 Web
| Edited By: |

Updated on:Jun 30, 2021 | 1:06 PM

Share

ಇಂದು ಜೂನ್​ 30 ಕ್ಷುದ್ರಗ್ರಹ ದಿನವೆಂದು ಗುರುತಿಸಲಾಗಿದೆ. ಕ್ಷುದ್ರಗ್ರಹ ಭೂಮಿಗೆ ಅಪ್ಪಳಿಸುವದರಿಂದ ಉಂಟಾಗುವ ಅಪಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. 2016ರಲ್ಲಿ ಈ ದಿನದವನ್ನು ಆಚರಿಸುವ ಕುರಿತಾಗಿ ವಿಶ್ವಸಂಸ್ಥೆ ಒಪ್ಪಿಗೆ ನೀಡಿತು. ಆ ಬಳಿಕ ಪ್ರತೀ ವರ್ಷ ಜಗತ್ತಿನಾದ್ಯಂತ ಈ ದಿನವನ್ನು ಆಚರಿಸಲಾಗುತ್ತಿದೆ.

ಸೌರಮಂಡಲದಲ್ಲಿ ಮಂಗಳ ಮತ್ತು ಗುರು ಗ್ರಹಗಳ ಮಧ್ಯದ ಕಕ್ಷೆಯಲ್ಲಿ ಸೂರ್ಯನ ಸುತ್ತ ಸುತ್ತುತ್ತಿರುವ ಆಕಾಶ ಕಾಯಗಳನ್ನು ಕ್ಷುದ್ರ ಗ್ರಹಗಳು ಎಂದು ಗುರುತಿಸಲಾಗಿದೆ. ಯುರೋಪಿಯನ್​ ಬಾಹ್ಯಾಕಾಶ ಏಜೆನ್ಸಿಯ ಪ್ರಕಾರ, 2013ರಲ್ಲಿ ನಡೆದ ಚೆಲ್ಯಾಬಿನ್ಸ್ಕ್​ ಘಟನೆಯಂತೆ ಕೆಲವೊಮ್ಮೆ ಭೂಮಿಗೆ ಅಪ್ಪಳಿಸುವ ಕ್ಷುದ್ರ ಗ್ರಹಗಳಿಂದ ಗಾಜು ಪುಡಿ-ಪುಡಿಯಾಗಿ ಬೀಳಬಹುದು, ದೊಡ್ಡ ಮಟ್ಟದ ಸ್ಪೋಟವೇ ಸಂಭವಿಸಬಹುದು ಅಥವಾ ಕಟ್ಟಡಗಳು ಕುಸಿದು ಬೀಳಬಹುದು. ಈ ಮಧ್ಯೆ ಜನರಿಗೆ ಗಂಭೀರ ಗಾಯಗಳಾಗಬಹುದು. ಈ ಕುರಿತಾಗಿ ಜನರಿಗೆ ಜಾಗೃತಿ ಮೂಡಿಸಲು ಕ್ಷುದ್ರ ಗ್ರಹ ದಿನವನ್ನು ಆಚರಿಸಲಾಗುತ್ತದೆ.

ಹಲವು ಸಂದರ್ಭಗಳಲ್ಲಿ ಅತೀದೊಡ್ಡ ಕ್ಷುದ್ರ ಗ್ರಹಗಳು ಭೂಮಿಯ ಸನಿಹದಲ್ಲಿಯೇ ಹಾದು ಹೋಗುತ್ತವೆ. ಇದು ಅಪಾಯವನ್ನು ತಂದೊಡ್ಡಬಹುದು ಅಥವಾ ಹಾನಿಯುಂಟು ಮಾಡಬಹುದು. ಹಾಗಾಗಿಯೇ ಖಗೋಳ ಶಾಸ್ತ್ರಜ್ಞರು ಈ ಕುರಿತಂತೆ ಎಚ್ಚರವಹಿಸುತ್ತಾರೆ. ಈ ಕ್ಷುದ್ರ ಗ್ರಹಗಳು ಏನು? ಮತ್ತು ಈ ಕ್ಷುದ್ರ ಗ್ರಹಗಳಿಂದ ಏನೆಲ್ಲಾ ಪರಿಣಾಮಗಳು ಬೀರಬಹುದು ಎಂದು ನಿರಂತರವಾಗಿ ಸಂಶೋಧನೆ ನಡೆಸುತ್ತಲೇ ಇರುತ್ತಾರೆ.

ಕ್ಷುದ್ರಗ್ರಹದ ಅಪಾಯವನ್ನು ವಿಜ್ಞಾನಿಗಳು ಹೇಗೆ ಲೆಕ್ಕಾಚಾರ ಹಾಕುತ್ತಾರೆ ಎಂಬ ಪ್ರಶ್ನೆಗೆ ಕಳೆದ ತಿಂಗಳು ನಡೆದ ಘಟನೆ ಉದಾಹರಣೆ. ಅತ್ಯಂತ ಅಪಾಯಕಾರಿ ಕ್ಷುದ್ರಗ್ರಹವನ್ನು ಅಪೋಫಿಸ್​ ಎಂದು ಗುರುತಿಸಿದರು. ಮೊದಲಿಗೆ ಅಪೋಫಿಸ್​ ಚಲನೆಯನ್ನು ಪತ್ತೆಹಚ್ಚಲಾಯಿತು. ನಿಖರವಾದ ಕಕ್ಷೆಯ ವೀಕ್ಷಣೆಯೊಂದಿಗೆ ಹೊಸದಾದ ವೀಕ್ಷಣಾ ಅಭಿಯಾನದ ಮೂಲಕ​ ಚಲನೆಯನ್ನು ಗುರುತಿಸಲಾಯಿತು.

ಇದನ್ನೂ ಓದಿ:

Margherita Hack: ಖಗೋಳ ಭೌತಶಾಸ್ತ್ರಜ್ಞೆ ಮಾರ್ಗರಿಟಾ ಹ್ಯಾಕ್​​ 99ನೇ ಜನ್ಮದಿನಕ್ಕೆ ಗೂಗಲ್ ಡೂಡಲ್​ ವಿಶೇಷ ನಮನ

ಭೂಮಿಯತ್ತ ನುಗ್ಗಿ ಬರುತ್ತಿದೆ ಬಸ್​ ಗಾತ್ರದ ಕ್ಷುದ್ರ ಗ್ರಹ.. SW 2020 ನಾಳೆ ಗೋಚರ

Published On - 12:57 pm, Wed, 30 June 21

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ