AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಢೋಲು ನುಡಿಸಾಣಿಕೆಗೆ ಮಾರುಹೋದ ಪಾಪ್ ಸ್ಟಾರ್ ಜಸ್ಟಿನ್ ಬೈಬರ್

Justin Bieber : ‘ಮಾತಾ ಕಾ ಜಾಗ್ರತ್’ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಢೋಲು ನುಡಿಸುತ್ತಿರುವ ವ್ಯಕ್ತಿಯೊಬ್ಬರ ವಿಡಿಯೋವನ್ನು ಜಸ್ಟಿನ್, ತನ್ನ ಸ್ನೇಹಿತ ಡ್ರಮ್ ಕಲಾವಿದ ಡೆವೊನ್ ಟೇಲರ್​ ಹಂಚಿಕೊಂಡ ಪೋಸ್ಟ್​ನಲ್ಲಿ ನೋಡಿ ಅಚ್ಚರಿಗೊಂಡಿದ್ದಾರೆ.

Viral Video : ಢೋಲು ನುಡಿಸಾಣಿಕೆಗೆ ಮಾರುಹೋದ ಪಾಪ್ ಸ್ಟಾರ್ ಜಸ್ಟಿನ್ ಬೈಬರ್
ಮಾತಾ ಕಾ ಜಾಗ್ರತ ಕಾರ್ಯಕ್ರಮದಲ್ಲಿ ಢೋಲು ನುಡಿಸುತ್ತಿರುವ ವ್ಯಕ್ತಿ
TV9 Web
| Edited By: ಶ್ರೀದೇವಿ ಕಳಸದ|

Updated on:Aug 02, 2022 | 5:05 PM

Share

ನಮ್ಮ ಕಿವಿಗಳು ನಾದತರಂಗಗಳಿಂದ ಸಂಸ್ಕಾರಗೊಂಡಂಥವು. ಹುಟ್ಟಿನಿಂದ ಚಟ್ಟದವರೆಗೂ ಶಬ್ದವು ನಮ್ಮನ್ನು ಅನೇಕ ರೀತಿಯಲ್ಲಿ ಸಂಚಲನಕ್ಕೀಡು ಮಾಡುತ್ತದೆ. ಸ್ತಂಭೀಭೂತರನ್ನಾಗಿಸುತ್ತದೆ. ಈ ವಿಡಿಯೋವನ್ನು ಗಮನಿಸಿ, ಇದರಲ್ಲಿ ಭಾವಪರವಶರಾಗಿ ವ್ಯಕ್ತಿಯೊಬ್ಬರು ಢೋಲು ನುಡಿಸುತ್ತಿದ್ದಾರೆ. ಭಾರತದ ಬಹುಮುಖಿ ಸಂಸ್ಕೃತಿಗೆ ಮಾರುಹೋಗದವರು ಯಾರಿದ್ದಾರೆ? ಅಂತೆಯೇ ಭಾರತೀಯರೊಬ್ಬರು ಢೋಲು ನುಡಿಸುತ್ತಿರುವ ವಿಡಿಯೋವನ್ನು ಕೆನಡಿಯನ್ ಗಾಯಕ ಜಸ್ಟಿನ್ ಬೈಬರ್ (Justin Bieber) ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದೀಗ ವೈರಲ್ ಆಗಿದೆ. ‘ಮಾತಾ ಕಾ ಜಾಗ್ರತ್’ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಢೋಲು ನುಡಿಸುತ್ತಿರುವ ವ್ಯಕ್ತಿಯೊಬ್ಬರ ವಿಡಿಯೋವನ್ನು ಜಸ್ಟಿನ್, ತನ್ನ ಸ್ನೇಹಿತ ಡ್ರಮ್ ಕಲಾವಿದ ಡೆವೊನ್ ಟೇಲರ್​ ಹಂಚಿಕೊಂಡ ಪೋಸ್ಟ್​ನಲ್ಲಿ ನೋಡಿ ಅಚ್ಚರಿಗೊಂಡಿದ್ದಾರೆ. ಈ ವ್ಯಕ್ತಿ ತನ್ಮಯನಾಗಿ ಡೋಲು ನುಡಿಸುತ್ತಿದ್ದರೆ ಉಳಿದವರು ಪ್ರಾರ್ಥನೆಯಲ್ಲಿ ಮುಳುಗಿದ್ದಾರೆ.

ವಿಡಿಯೋದಲ್ಲಿ ಅಲಂಕರಿಸಿದ ತಾಯಿ ದುರ್ಗೆ, ಹನುಮಂತನ ಮೂರ್ತಿಗಳನ್ನು ಕಾಣಬಹುದು. ಅಲ್ಲಿರುವ ಜನರು ಢೋಲು ನುಡಿಸುತ್ತಿರುವವರ ಶಕ್ತಿ ಮತ್ತು ಉತ್ಸಾಹದಿಂದ ಮೂಕವಿಸ್ಮಿತರಾಗಿ ಪ್ರಾರ್ಥನೆಯಲ್ಲಿ ಮುಳುಗಿರುವುದನ್ನು ಕಾಣಬಹುದು. ಈ ವಿಡಿಯೋ ರಂಗೀಲೆ ಹರ್ಯಾನ್ವಿ ಎಂಬ ಪೇಜ್​ನಲ್ಲಿ ಕಂಡುಬಂದಿದೆ. ಸುಮಾರು 20.3 ಮಿಲಿಯನ್​ ವೀಕ್ಷಣೆ, 8,60,000 ಲೈಕ್ಸ್​ ಮತ್ತು 11,09,000 ಸಾವಿರ ಕಮೆಂಟ್​ಗಳನ್ನು ಹೊಂದಿದೆ.

ಇದನ್ನೂ ಓದಿ
Image
ಹಾದಿಯೇ ತೋರಿದ ಹಾದಿ: ನಮ್ಮ ಹಾವಾಡಿಗರು ಎಲ್ಲೂ ಹೋಗಿಲ್ಲ ಇಲ್ಲೇ ಹೀಗೇ ಇದ್ದಾರೆ
Image
ಹಾದಿಯೇ ತೋರಿದ ಹಾದಿ: ನೀರಿನಾಳಕ್ಕಿಳಿದು ಶವತೆಗೆವ ಬಾಬಾ ಅಣ್ಣು ಸಿದ್ದಿ ಸಾಹಸಗಾಥೆ
Image
ಹಾದಿಯೇ ತೋರಿದ ಹಾದಿ: ಈ ‘ಅರಸು’ ಆಳಾಗಿ ದುಡಿಯಲು ಸಿದ್ಧನಿದ್ದಾನೆ
Image
Nomad: ಹಾದಿಯೇ ತೋರಿದ ಹಾದಿ; ‘ನಮ್ಮ ದೇಶದ ಸ್ಥಿತಿಗತಿಯನ್ನೇ ಕಲೆಯ ಮೂಲಕ ತೋರಿಸುತ್ತ ಹೊರಟಿದ್ದೇವೆ’

ನಾದಕ್ಕೆ ಲಯಕ್ಕೆ ಮನಸೋಲದ ಜೀವಿಯುಂಟೆ? ಜಸ್ಟಿನ್ ಮಾತ್ರವಲ್ಲ, ಈ ಪೋಸ್ಟ್​ ಹಂಚಿಕೊಂಡ ಒಬ್ಬರು, ‘ನಿಮ್ಮ ಕೆಲಸವನ್ನು ನೀವು ಹೇಗೆ ಆನಂದಿಸುತ್ತೀರಿ’ ಎಂದಿದ್ದಾರೆ. ಇನ್ನೊಬ್ಬರು, ‘ಈ ರೀತಿಯ ಶಕ್ತಿ ಬೇಕಿದೆ’ ಎಂದಿದ್ದಾರೆ.

Published On - 5:05 pm, Tue, 2 August 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು