AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಢೋಲು ನುಡಿಸಾಣಿಕೆಗೆ ಮಾರುಹೋದ ಪಾಪ್ ಸ್ಟಾರ್ ಜಸ್ಟಿನ್ ಬೈಬರ್

Justin Bieber : ‘ಮಾತಾ ಕಾ ಜಾಗ್ರತ್’ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಢೋಲು ನುಡಿಸುತ್ತಿರುವ ವ್ಯಕ್ತಿಯೊಬ್ಬರ ವಿಡಿಯೋವನ್ನು ಜಸ್ಟಿನ್, ತನ್ನ ಸ್ನೇಹಿತ ಡ್ರಮ್ ಕಲಾವಿದ ಡೆವೊನ್ ಟೇಲರ್​ ಹಂಚಿಕೊಂಡ ಪೋಸ್ಟ್​ನಲ್ಲಿ ನೋಡಿ ಅಚ್ಚರಿಗೊಂಡಿದ್ದಾರೆ.

Viral Video : ಢೋಲು ನುಡಿಸಾಣಿಕೆಗೆ ಮಾರುಹೋದ ಪಾಪ್ ಸ್ಟಾರ್ ಜಸ್ಟಿನ್ ಬೈಬರ್
ಮಾತಾ ಕಾ ಜಾಗ್ರತ ಕಾರ್ಯಕ್ರಮದಲ್ಲಿ ಢೋಲು ನುಡಿಸುತ್ತಿರುವ ವ್ಯಕ್ತಿ
TV9 Web
| Edited By: |

Updated on:Aug 02, 2022 | 5:05 PM

Share

ನಮ್ಮ ಕಿವಿಗಳು ನಾದತರಂಗಗಳಿಂದ ಸಂಸ್ಕಾರಗೊಂಡಂಥವು. ಹುಟ್ಟಿನಿಂದ ಚಟ್ಟದವರೆಗೂ ಶಬ್ದವು ನಮ್ಮನ್ನು ಅನೇಕ ರೀತಿಯಲ್ಲಿ ಸಂಚಲನಕ್ಕೀಡು ಮಾಡುತ್ತದೆ. ಸ್ತಂಭೀಭೂತರನ್ನಾಗಿಸುತ್ತದೆ. ಈ ವಿಡಿಯೋವನ್ನು ಗಮನಿಸಿ, ಇದರಲ್ಲಿ ಭಾವಪರವಶರಾಗಿ ವ್ಯಕ್ತಿಯೊಬ್ಬರು ಢೋಲು ನುಡಿಸುತ್ತಿದ್ದಾರೆ. ಭಾರತದ ಬಹುಮುಖಿ ಸಂಸ್ಕೃತಿಗೆ ಮಾರುಹೋಗದವರು ಯಾರಿದ್ದಾರೆ? ಅಂತೆಯೇ ಭಾರತೀಯರೊಬ್ಬರು ಢೋಲು ನುಡಿಸುತ್ತಿರುವ ವಿಡಿಯೋವನ್ನು ಕೆನಡಿಯನ್ ಗಾಯಕ ಜಸ್ಟಿನ್ ಬೈಬರ್ (Justin Bieber) ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದೀಗ ವೈರಲ್ ಆಗಿದೆ. ‘ಮಾತಾ ಕಾ ಜಾಗ್ರತ್’ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಢೋಲು ನುಡಿಸುತ್ತಿರುವ ವ್ಯಕ್ತಿಯೊಬ್ಬರ ವಿಡಿಯೋವನ್ನು ಜಸ್ಟಿನ್, ತನ್ನ ಸ್ನೇಹಿತ ಡ್ರಮ್ ಕಲಾವಿದ ಡೆವೊನ್ ಟೇಲರ್​ ಹಂಚಿಕೊಂಡ ಪೋಸ್ಟ್​ನಲ್ಲಿ ನೋಡಿ ಅಚ್ಚರಿಗೊಂಡಿದ್ದಾರೆ. ಈ ವ್ಯಕ್ತಿ ತನ್ಮಯನಾಗಿ ಡೋಲು ನುಡಿಸುತ್ತಿದ್ದರೆ ಉಳಿದವರು ಪ್ರಾರ್ಥನೆಯಲ್ಲಿ ಮುಳುಗಿದ್ದಾರೆ.

ವಿಡಿಯೋದಲ್ಲಿ ಅಲಂಕರಿಸಿದ ತಾಯಿ ದುರ್ಗೆ, ಹನುಮಂತನ ಮೂರ್ತಿಗಳನ್ನು ಕಾಣಬಹುದು. ಅಲ್ಲಿರುವ ಜನರು ಢೋಲು ನುಡಿಸುತ್ತಿರುವವರ ಶಕ್ತಿ ಮತ್ತು ಉತ್ಸಾಹದಿಂದ ಮೂಕವಿಸ್ಮಿತರಾಗಿ ಪ್ರಾರ್ಥನೆಯಲ್ಲಿ ಮುಳುಗಿರುವುದನ್ನು ಕಾಣಬಹುದು. ಈ ವಿಡಿಯೋ ರಂಗೀಲೆ ಹರ್ಯಾನ್ವಿ ಎಂಬ ಪೇಜ್​ನಲ್ಲಿ ಕಂಡುಬಂದಿದೆ. ಸುಮಾರು 20.3 ಮಿಲಿಯನ್​ ವೀಕ್ಷಣೆ, 8,60,000 ಲೈಕ್ಸ್​ ಮತ್ತು 11,09,000 ಸಾವಿರ ಕಮೆಂಟ್​ಗಳನ್ನು ಹೊಂದಿದೆ.

ಇದನ್ನೂ ಓದಿ
Image
ಹಾದಿಯೇ ತೋರಿದ ಹಾದಿ: ನಮ್ಮ ಹಾವಾಡಿಗರು ಎಲ್ಲೂ ಹೋಗಿಲ್ಲ ಇಲ್ಲೇ ಹೀಗೇ ಇದ್ದಾರೆ
Image
ಹಾದಿಯೇ ತೋರಿದ ಹಾದಿ: ನೀರಿನಾಳಕ್ಕಿಳಿದು ಶವತೆಗೆವ ಬಾಬಾ ಅಣ್ಣು ಸಿದ್ದಿ ಸಾಹಸಗಾಥೆ
Image
ಹಾದಿಯೇ ತೋರಿದ ಹಾದಿ: ಈ ‘ಅರಸು’ ಆಳಾಗಿ ದುಡಿಯಲು ಸಿದ್ಧನಿದ್ದಾನೆ
Image
Nomad: ಹಾದಿಯೇ ತೋರಿದ ಹಾದಿ; ‘ನಮ್ಮ ದೇಶದ ಸ್ಥಿತಿಗತಿಯನ್ನೇ ಕಲೆಯ ಮೂಲಕ ತೋರಿಸುತ್ತ ಹೊರಟಿದ್ದೇವೆ’

ನಾದಕ್ಕೆ ಲಯಕ್ಕೆ ಮನಸೋಲದ ಜೀವಿಯುಂಟೆ? ಜಸ್ಟಿನ್ ಮಾತ್ರವಲ್ಲ, ಈ ಪೋಸ್ಟ್​ ಹಂಚಿಕೊಂಡ ಒಬ್ಬರು, ‘ನಿಮ್ಮ ಕೆಲಸವನ್ನು ನೀವು ಹೇಗೆ ಆನಂದಿಸುತ್ತೀರಿ’ ಎಂದಿದ್ದಾರೆ. ಇನ್ನೊಬ್ಬರು, ‘ಈ ರೀತಿಯ ಶಕ್ತಿ ಬೇಕಿದೆ’ ಎಂದಿದ್ದಾರೆ.

Published On - 5:05 pm, Tue, 2 August 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ