AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaamya Karthikeyan: ಎವರೆಸ್ಟ್ ಶಿಖರವನ್ನೇರಿದ ಭಾರತದ 16ರ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್

ಮುಂಬೈನ ನೇವಿ ಚಿಲ್ಡ್ರನ್ಸ್ ಸ್ಕೂಲ್ ನಲ್ಲಿ 12ನೇ ತರಗತಿ ಓದುತ್ತಿರುವ ಕಾಮ್ಯಾ, ಸೋಮವಾರ, ತನ್ನ ತಂದೆ ಕಮಾಂಡರ್ ಎಸ್. ಕಾರ್ತಿಕೇಯನ್, ನೌಕಾಪಡೆಯ ಅಧಿಕಾರಿಯೊಂದಿಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿ ವಿಶ್ವದ ಎರಡನೇ ಅತಿ ಕಿರಿಯ ಮೌಂಟ್ ಎವರೆಸ್ಟ್ ಶಿಖರ ಏರಿದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.

Kaamya Karthikeyan: ಎವರೆಸ್ಟ್ ಶಿಖರವನ್ನೇರಿದ ಭಾರತದ 16ರ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್
Kaamya Karthikeyan
Follow us
ಅಕ್ಷತಾ ವರ್ಕಾಡಿ
|

Updated on: May 25, 2024 | 12:57 PM

16 ವರ್ಷದ ಕಾಮ್ಯ ಕಾರ್ತಿಕೇಯನ್ ಮೌಂಟ್ ಎವರೆಸ್ಟ್ (8,849 ಮೀಟರ್) ಏರಿದ ವಿಶ್ವದ ಎರಡನೇ ಅತಿ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ. ಮುಂಬೈನ ನೇವಿ ಚಿಲ್ಡ್ರನ್ಸ್ ಸ್ಕೂಲ್ ನಲ್ಲಿ 12ನೇ ತರಗತಿ ಓದುತ್ತಿರುವ ಕಾಮ್ಯಾ, ಸೋಮವಾರ, ತನ್ನ ತಂದೆ ಕಮಾಂಡರ್ ಎಸ್. ಕಾರ್ತಿಕೇಯನ್, ನೌಕಾಪಡೆಯ ಅಧಿಕಾರಿಯೊಂದಿಗೆ ಮೌಂಟ್ ಎವರೆಸ್ಟ್ ಶಿಖರವನ್ನು ತಲುಪಿದ್ದಾಳೆ. ಇದೀಗ ಇವರ ಸಾಧನೆಯನ್ನು ಭಾರತೀಯ ನೌಕಾಪಡೆಯು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಮ್ಯ ಮೂರು ವರ್ಷ ವಯಸ್ಸಿನಲ್ಲೇ ಟ್ರೆಕ್ಕಿಂಗ್ ಪ್ರಾರಂಭಿಸಿದ್ದಳು, ತನ್ನ ತಂದೆಯಿಂದಲೇ ಪ್ರೇರೇಪಿತಳಾದ ಕಾಮ್ಯ ಬಾಲ್ಯದಿಂದಲೇ ಟ್ರೆಕ್ಕಿಂಗ್​​ನಲ್ಲಿ ಆಸಕ್ತಿಯನ್ನು ಹೊಂದಿದ್ದಾಳೆ. ಇಲ್ಲಿಯವರೆಗೆ ಹರ್-ಕಿ ಡನ್ (13,500 ಅಡಿ), ಕೇದಾರಕಾಂತ ಶಿಖರ (13,500 ಅಡಿ) ಮತ್ತು ರೂಪ್‌ಕುಂಡ್ ಸರೋವರ (16,400 ಅಡಿ) ಸೇರಿದಂತೆ ಹಲವು ಶಿಖರಗಳನ್ನು ಏರಿದ್ದಾರೆ. ಮೇ 2017 ರಲ್ಲಿ, ಕಾಮ್ಯಾ ಅವರು ಎವರೆಸ್ಟ್ ಬೇಸ್ ಕ್ಯಾಂಪ್ (17,600 ಅಡಿ) ಪಾದಯಾತ್ರೆ ಮಾಡಿದಾಗ ಹೊಸ ಮೈಲಿಗಲ್ಲನ್ನು ತಲುಪಿದರು, 13 ನೇ ವಯಸ್ಸಿನಲ್ಲಿ ಈ ಸಾಧನೆಯನ್ನು ಪೂರ್ಣಗೊಳಿಸಿದ ಇತಿಹಾಸದಲ್ಲಿ ಎರಡನೇ ಕಿರಿಯ ಬಾಲಕಿ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಕಾಮ್ಯ ಕಾರ್ತಿಕೇಯನ್ ಸಾಧನೆಯನ್ನು ಗುರುತಿಸಿದ ಪ್ರಧಾನಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಈ ಬಾಲಕಿಯ ಸಾಧನೆಯ ಬಗ್ಗೆ ಮಾತನಾಡಿದ್ದರು. ಇದಲ್ಲದೇ ಈ ಬಾಲಕಿ 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾಳೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?